AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka PUC Result 2021: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ

KSEB Board Class 12 Result 2021: 5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. 76 ಸಾವಿರ ರಿಪೀಟರ್ಸ್ ಫಲಿತಾಂಶಕ್ಕೆ ಕಾಯುತ್ತಿರುವವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ.

Karnataka PUC Result 2021: ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 17, 2021 | 2:55 PM

Share

ಬೆಂಗಳೂರು: ಪದವಿ ಪೂರ್ವ ದ್ವಿತೀಯ ವರ್ಷದ ವಿದ್ಯಾರ್ಥಿಗಳ 2020-21ನೇ ಸಾಲಿನ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ಹೊರಡಿಸಿದೆ. ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟಿಸಬಾರದು ಎಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ವಿಭಾಗೀಯ ಪೀಠದಿಂದ ಈ ಬಗ್ಗೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. 12 ತಜ್ಞರ ಸಮಿತಿ ರಚಿಸಿರುವುದಾಗಿ ಸರ್ಕಾರ ಹೇಳಿಕೆ ನೀಡಿತ್ತು. ಹೀಗಾಗಿ, ಈಗಲೇ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ.

5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. 76 ಸಾವಿರ ರಿಪೀಟರ್ಸ್ ಫಲಿತಾಂಶಕ್ಕೆ ಕಾಯುತ್ತಿರುವವರಾಗಿದ್ದಾರೆ. ಈ ಬಗ್ಗೆ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟ ಮಾಡಬಾರದು ಎಂದು ಕೋರ್ಟ್ ಹೇಳಿದೆ. ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ. 15 ದಿನಗಳೊಳಗೆ ತಜ್ಞರ ಸಮಿತಿ ವರದಿ ನೀಡಲಿದೆ ಎಂದು ಕೂಡ ಕೋರ್ಟ್ ಹೇಳಿದೆ.

ಜಂಟಿ ನಿರ್ದೇಶಕ ಪರೀಕ್ಷಕರಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಿಪೀಟರ್ಸ್, ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಬೇಡ. ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯ ಎಂದು ನ್ಯಾ.ಬಿ.ವಿ.ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಬಳಿಕ, ವಿಚಾರಣೆಯನ್ನು ಹೈಕೋರ್ಟ್ ಜುಲೈ 5ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ, ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆ ತಯಾರಿ

PUC Students Celebration : ಪರೀಕ್ಷೆ ಇಲ್ದೆ ಪಾಸ್ || ಪಟಾಕಿ ಸಿಡಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳು

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ