ದರ್ಶನ್ ಜೊತೆ ಕುಳಿತು ತಂಬಾಕು ಜಗಿದ ಆರೋಪ: ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ

ಶ್ರೀನಿವಾಸ್​ ಅಲಿಯಾಸ್​ ಕುಳ್ಳ ಸೀನಾ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ ನೀಡಿದೆ. ಫೋಟೋ ವೈರಲ್ ಆಗಿದ್ದಕ್ಕೆ ಕರ್ನಾಟಕ ಜೈಲು ಅಧಿನಿಯಮ 2022ರ ಸೆಕ್ಷನ್ 42 ಉಲ್ಲಂಘನೆ ಕೇಸ್ ದಾಖಲಿಸಲಾಗಿತ್ತು. ಯಾವುದೇ ಶಿಕ್ಷಾರ್ಹ ಅಪರಾಧ ಮಾಡಿಲ್ಲವೆಂದು ಶ್ರೀನಿವಾಸ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದಾರೆ.

ದರ್ಶನ್ ಜೊತೆ ಕುಳಿತು ತಂಬಾಕು ಜಗಿದ ಆರೋಪ: ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ
ದರ್ಶನ್ ಜೊತೆ ಕುಳಿತು ತಂಬಾಕು ಜಗಿದ ಆರೋಪ: ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 26, 2024 | 10:10 PM

ಬೆಂಗಳೂರು, ಸೆಪ್ಟೆಂಬರ್​ 26: ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್ (Darshan) ಜೈಲು ಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ದರ್ಶನ್‌ ಸಿಗರೇಟ್‌ ಸೇದಿರುವ ಫೋಟೋಗಳು ವೈರಲ್ ಆಗಿದ್ದವು. ದರ್ಶನ್​ ಫೋಟೋ ಜೊತೆಗೆ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನಾ ಫೋಟೋ ಕೂಡ ವೈರಲ್ ಆಗಿತ್ತು. ಜೈಲಿನಲ್ಲಿ ದರ್ಶನ್ ಜೊತೆ ಕುಳಿತು ತಂಬಾಕು ಜಗಿಯುತ್ತಿದ್ದ ಆರೋಪದಿಡಿ ಆತನ ವಿರುದ್ಧ ಕೇಸ್​ ದಾಖಲಾಗಿತ್ತು. ಸದ್ಯ ಈ ಕೇಸ್​ಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಡೆ ನೀಡಿದೆ.

ಹೌದು. ಶ್ರೀನಿವಾಸ್​ ಅಲಿಯಾಸ್​ ಕುಳ್ಳ ಸೀನಾ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ ನೀಡಿದೆ. ಫೋಟೋ ವೈರಲ್ ಆಗಿದ್ದಕ್ಕೆ ಕರ್ನಾಟಕ ಜೈಲು ಅಧಿನಿಯಮ 2022ರ ಸೆಕ್ಷನ್ 42 ಉಲ್ಲಂಘನೆ ಕೇಸ್ ದಾಖಲಿಸಲಾಗಿತ್ತು. ಯಾವುದೇ ಶಿಕ್ಷಾರ್ಹ ಅಪರಾಧ ಮಾಡಿಲ್ಲವೆಂದು ಶ್ರೀನಿವಾಸ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ದರ್ಶನ್​ಗೆ​ ರಾಜಾತಿಥ್ಯ ಬೆನ್ನಲ್ಲೇ ಜೈಲು ಇಲಾಖೆಗೆ ಸರ್ಜರಿ, ಅಧಿಕಾರಿಗಳ ವರ್ಗ

ಜೈಲು ಕೈಪಿಡಿಯಲ್ಲಿ ಒಂದೆಡೆ ಧೂಮಪಾನ ನಿಷೇಧವಿದೆ. ನಿಯಮದ ಮತ್ತೊಂದೆಡೆ ಸ್ಮೋಕಿಂಗ್ ಝೋನ್ ಬಗ್ಗೆ ಹೇಳಲಾಗಿದೆ. ನಿಯಮದಲ್ಲೇ ವೈರುಧ್ಯವಿರುವ ಹಿನ್ನೆಲೆ‌ ಕೇಸ್​ಗೆ ತಡೆ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನಾ ಕೋಣನಕುಂಟೆ ಠಾಣಾ ವ್ಯಾಪ್ತಿಯ ರೌಡಿ ಶೀಟರ್. ತಲಘಟ್ಟಪುರ ಠಾಣಾ ವ್ಯಾಪ್ತಿಯ ಕೊಲೆ ಕೇಸ್​ನಲ್ಲಿ ಜೈಲುಪಾಲಾಗಿದ್ದಾನೆ.

ಇದನ್ನೂ ಓದಿ: ಜೈಲಿನಲ್ಲಿ ದರ್ಶನ್​ಗೆ ರಾಜ್ಯಾತಿಥ್ಯ: ಫೋಟೋ ಹೊರಬಿಟ್ಟಿದ್ದೇ ರಾಜ್ಯ ಸರ್ಕಾರ ಎಂದು ಜೋಶಿ

ಮತ್ತೊಂದು ಕಡೆ ವಿಲ್ಸನ್ ಗಾರ್ಡನ್ ನಾಗ ಬೇರೆ ಜೈಲಿಗೆ ಶಿಫ್ಟ್ ಆಗುವ ಆದೇಶ ಬಂದರೂ ಪೊಲೀಸರು ಆತನನ್ನ ವಶಕ್ಕೆ ತೆಗೆದುಕೊಂಡಿದ್ದರು. ಇತ್ತೀಚೆಗೆ ದಿಢೀರ್ ಬೆಳವಣಿಗೆಯಿಂದ ವಿಲ್ಸನ್ ಗಾರ್ಡನ್ ನಾಗನನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ರಾಜತಿಥ್ಯ ಕೇಸ್ ಹೊರಬಂದ ಮೇಲೆ ಜೈಲಿನ ಮೇಲೆ ದಾಳಿ ನಡೆಸಿದ್ದ ಪೊಲೀಸರು ನಾಗ ಸೇರಿದಂತೆ ಅನೇಕ ಕೈದಿಗಳಿಂದ ಸುಮಾರು 15 ಮೊಬೈಲ್​ಗಳನ್ನ ವಶಕ್ಕೆ ಪಡೆದಿದ್ದರು. ಈ ಮೊಬೈಲ್ ಫೋನ್ ಪತ್ತೆ ಸಂಬಂಧ ಆರೋಪಿಗಳು ಜೈಲಿನಲ್ಲಿ ತನಿಖೆಗೆ ಸಹಕಾರ ನೀಡುತ್ತಿಲ್ಲ. ಹೀಗಾಗಿ ವಿಚಾರಣೆ ಮಾಡಬೇಕಿದೆ ಎಂದು ನಾಗ ಮತ್ತು ಮತ್ತೊಬ್ಬ ರೌಡಿಶೀಟರ್ ವೇಲುನನ್ನ ಮೂರು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ಫ್ಲಿಪ್​ಕಾರ್ಟ್​​​ನಲ್ಲಿ ಬುಕ್ ಮಾಡಿದ್ರೆ ಮನೆಗೇ ಬರುತ್ತೆ ಬೈಕ್, ಸ್ಕೂಟರ್!
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್​ ತುಂಬ ತಂದಿದ್ದೇನು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಬಿಜೆಪಿ ಪ್ರತಿಭಟನೆಗೆ ವಿಜಯೇಂದ್ರ ಗೈರು: ಶಾಸಕ ಯತ್ನಾಳ್​ ಏನ್​ ಹೇಳಿದ್ರು?
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು
ಪ್ರತಿಭಟನಾನಿರತ ಬಿಜೆಪಿ ನಾಯಕರನ್ನ ಎಳೆದೊಯ್ದ ಪೊಲೀಸರು