AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಜೊತೆ ಕುಳಿತು ತಂಬಾಕು ಜಗಿದ ಆರೋಪ: ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ

ಶ್ರೀನಿವಾಸ್​ ಅಲಿಯಾಸ್​ ಕುಳ್ಳ ಸೀನಾ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ ನೀಡಿದೆ. ಫೋಟೋ ವೈರಲ್ ಆಗಿದ್ದಕ್ಕೆ ಕರ್ನಾಟಕ ಜೈಲು ಅಧಿನಿಯಮ 2022ರ ಸೆಕ್ಷನ್ 42 ಉಲ್ಲಂಘನೆ ಕೇಸ್ ದಾಖಲಿಸಲಾಗಿತ್ತು. ಯಾವುದೇ ಶಿಕ್ಷಾರ್ಹ ಅಪರಾಧ ಮಾಡಿಲ್ಲವೆಂದು ಶ್ರೀನಿವಾಸ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದಾರೆ.

ದರ್ಶನ್ ಜೊತೆ ಕುಳಿತು ತಂಬಾಕು ಜಗಿದ ಆರೋಪ: ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ
ದರ್ಶನ್ ಜೊತೆ ಕುಳಿತು ತಂಬಾಕು ಜಗಿದ ಆರೋಪ: ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ
Ramesha M
| Edited By: |

Updated on: Sep 26, 2024 | 10:10 PM

Share

ಬೆಂಗಳೂರು, ಸೆಪ್ಟೆಂಬರ್​ 26: ರೇಣುಕಾ ಸ್ವಾಮಿ ಹತ್ಯೆ ಕೇಸ್​ನಲ್ಲಿ ದರ್ಶನ್ (Darshan) ಜೈಲು ಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ದರ್ಶನ್‌ ಸಿಗರೇಟ್‌ ಸೇದಿರುವ ಫೋಟೋಗಳು ವೈರಲ್ ಆಗಿದ್ದವು. ದರ್ಶನ್​ ಫೋಟೋ ಜೊತೆಗೆ ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನಾ ಫೋಟೋ ಕೂಡ ವೈರಲ್ ಆಗಿತ್ತು. ಜೈಲಿನಲ್ಲಿ ದರ್ಶನ್ ಜೊತೆ ಕುಳಿತು ತಂಬಾಕು ಜಗಿಯುತ್ತಿದ್ದ ಆರೋಪದಿಡಿ ಆತನ ವಿರುದ್ಧ ಕೇಸ್​ ದಾಖಲಾಗಿತ್ತು. ಸದ್ಯ ಈ ಕೇಸ್​ಗೆ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ತಡೆ ನೀಡಿದೆ.

ಹೌದು. ಶ್ರೀನಿವಾಸ್​ ಅಲಿಯಾಸ್​ ಕುಳ್ಳ ಸೀನಾ ವಿರುದ್ಧದ ಕೇಸ್​ಗೆ ಹೈಕೋರ್ಟ್ ತಡೆ ನೀಡಿದೆ. ಫೋಟೋ ವೈರಲ್ ಆಗಿದ್ದಕ್ಕೆ ಕರ್ನಾಟಕ ಜೈಲು ಅಧಿನಿಯಮ 2022ರ ಸೆಕ್ಷನ್ 42 ಉಲ್ಲಂಘನೆ ಕೇಸ್ ದಾಖಲಿಸಲಾಗಿತ್ತು. ಯಾವುದೇ ಶಿಕ್ಷಾರ್ಹ ಅಪರಾಧ ಮಾಡಿಲ್ಲವೆಂದು ಶ್ರೀನಿವಾಸ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ದರ್ಶನ್​ಗೆ​ ರಾಜಾತಿಥ್ಯ ಬೆನ್ನಲ್ಲೇ ಜೈಲು ಇಲಾಖೆಗೆ ಸರ್ಜರಿ, ಅಧಿಕಾರಿಗಳ ವರ್ಗ

ಜೈಲು ಕೈಪಿಡಿಯಲ್ಲಿ ಒಂದೆಡೆ ಧೂಮಪಾನ ನಿಷೇಧವಿದೆ. ನಿಯಮದ ಮತ್ತೊಂದೆಡೆ ಸ್ಮೋಕಿಂಗ್ ಝೋನ್ ಬಗ್ಗೆ ಹೇಳಲಾಗಿದೆ. ನಿಯಮದಲ್ಲೇ ವೈರುಧ್ಯವಿರುವ ಹಿನ್ನೆಲೆ‌ ಕೇಸ್​ಗೆ ತಡೆ ಹೈಕೋರ್ಟ್ ಪೀಠ ಮಧ್ಯಂತರ ಆದೇಶ ಹೊರಡಿಸಿದೆ.

ಶ್ರೀನಿವಾಸ್ ಅಲಿಯಾಸ್​ ಕುಳ್ಳ ಸೀನಾ ಕೋಣನಕುಂಟೆ ಠಾಣಾ ವ್ಯಾಪ್ತಿಯ ರೌಡಿ ಶೀಟರ್. ತಲಘಟ್ಟಪುರ ಠಾಣಾ ವ್ಯಾಪ್ತಿಯ ಕೊಲೆ ಕೇಸ್​ನಲ್ಲಿ ಜೈಲುಪಾಲಾಗಿದ್ದಾನೆ.

ಇದನ್ನೂ ಓದಿ: ಜೈಲಿನಲ್ಲಿ ದರ್ಶನ್​ಗೆ ರಾಜ್ಯಾತಿಥ್ಯ: ಫೋಟೋ ಹೊರಬಿಟ್ಟಿದ್ದೇ ರಾಜ್ಯ ಸರ್ಕಾರ ಎಂದು ಜೋಶಿ

ಮತ್ತೊಂದು ಕಡೆ ವಿಲ್ಸನ್ ಗಾರ್ಡನ್ ನಾಗ ಬೇರೆ ಜೈಲಿಗೆ ಶಿಫ್ಟ್ ಆಗುವ ಆದೇಶ ಬಂದರೂ ಪೊಲೀಸರು ಆತನನ್ನ ವಶಕ್ಕೆ ತೆಗೆದುಕೊಂಡಿದ್ದರು. ಇತ್ತೀಚೆಗೆ ದಿಢೀರ್ ಬೆಳವಣಿಗೆಯಿಂದ ವಿಲ್ಸನ್ ಗಾರ್ಡನ್ ನಾಗನನ್ನ ಪೊಲೀಸರು ವಶಕ್ಕೆ ಪಡೆದಿದ್ದರು. ರಾಜತಿಥ್ಯ ಕೇಸ್ ಹೊರಬಂದ ಮೇಲೆ ಜೈಲಿನ ಮೇಲೆ ದಾಳಿ ನಡೆಸಿದ್ದ ಪೊಲೀಸರು ನಾಗ ಸೇರಿದಂತೆ ಅನೇಕ ಕೈದಿಗಳಿಂದ ಸುಮಾರು 15 ಮೊಬೈಲ್​ಗಳನ್ನ ವಶಕ್ಕೆ ಪಡೆದಿದ್ದರು. ಈ ಮೊಬೈಲ್ ಫೋನ್ ಪತ್ತೆ ಸಂಬಂಧ ಆರೋಪಿಗಳು ಜೈಲಿನಲ್ಲಿ ತನಿಖೆಗೆ ಸಹಕಾರ ನೀಡುತ್ತಿಲ್ಲ. ಹೀಗಾಗಿ ವಿಚಾರಣೆ ಮಾಡಬೇಕಿದೆ ಎಂದು ನಾಗ ಮತ್ತು ಮತ್ತೊಬ್ಬ ರೌಡಿಶೀಟರ್ ವೇಲುನನ್ನ ಮೂರು ದಿನ ಕಸ್ಟಡಿಗೆ ಪಡೆದುಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಹರಿಹರ ಪಂಚಮಸಾಲಿ ಮಠದಲ್ಲಿ 'ಲೆಕ್ಕ ಕೊಡಿ' ಅಭಿಯಾನ
ಹರಿಹರ ಪಂಚಮಸಾಲಿ ಮಠದಲ್ಲಿ 'ಲೆಕ್ಕ ಕೊಡಿ' ಅಭಿಯಾನ
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಜನ!
ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಜನ!
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!
ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡು, 17 ಕಿ.ಮೀ ನಡೆದ ನಾಯಿಗಳು
ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡು, 17 ಕಿ.ಮೀ ನಡೆದ ನಾಯಿಗಳು