Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ 3 ನೇ ಅಲೆ ಎದುರಿಸಲು ಸಿದ್ಧತೆ ನಡೆಸಿ’ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್‌ ವಾರ್ನಿಂಗ್

ರಾಜ್ಯದ ಜನರ ಕೊರೊನಾ ಸಂಕಷ್ಟಕ್ಕೆ ಮಿಡಿಯುತ್ತಿರುವ ಹೈಕೋರ್ಟ್, ಇದೀಗ 3 ನೇ ಅಲೆ ಎದುರಿಸಲು ಸರ್ವ ಸಿದ್ಧತೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ರೆಮ್‌ಡಿಸಿವಿರ್ ಕೊರತೆಯ ಬಗ್ಗೆ ವಿಚಾರಣೆ ನಡೆಸ್ತಿರೋ ಹೈಕೋರ್ಟ್ ನೀಡಿದ ಸೂಚನೆಗಳೇನು, ಸರ್ಕಾರ ಮಾಡಬೇಕಾದದ್ದು ಏನು ಅನ್ನೋ ಬಗ್ಗೆ ಒಂದು ವರದಿ ಇಲ್ಲಿದೆ.

‘ಕೊರೊನಾ 3 ನೇ ಅಲೆ ಎದುರಿಸಲು ಸಿದ್ಧತೆ ನಡೆಸಿ’ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್‌ ವಾರ್ನಿಂಗ್
ಕರ್ನಾಟಕ ಹೈಕೋರ್ಟ್
Follow us
ಆಯೇಷಾ ಬಾನು
|

Updated on:May 13, 2021 | 8:37 AM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತಂದೊಡ್ಡಿರುವ ದುಸ್ಥಿತಿ ಎದುರಿಸಲು ಜನಸಾಮಾನ್ಯರ ನೆರವಿಗೆ ನಿಂತಿರೋ ಹೈಕೋರ್ಟ್ ಸಂಕಷ್ಟ ನಿವಾರಣೆಗೆ ಸರ್ಕಾರಕ್ಕೆ ಹಲವು ಸೂಚನೆಗಳನ್ನು ನೀಡಿದೆ. ಇದೀಗ 2 ನೇ ಅಲೆ ಎದುರಿಸಲು ವಿಫಲವಾಗಿರುವ ಸರ್ಕಾರಕ್ಕೆ 3 ನೇ ಅಲೆ ಎದುರಿಸಲು ಈಗಲೇ ಸಿದ್ಧವಿರುವಂತೆ ಎಚ್ಚರಿಸಿದೆ. ಕೇಂದ್ರ ಸರ್ಕಾರ ಈಗಾಗಲೇ ರಾಜ್ಯದಲ್ಲಿರಬೇಕಾಗಿದ್ದ ಸೌಕರ್ಯಗಳ ಪಟ್ಟಿಯನ್ನು ರಾಜ್ಯ ಸರ್ಕಾರಕ್ಕೆ ನೀಡಿದೆ. ಇದನ್ನು ಪರಿಶೀಲಿಸಿರುವ ಹೈಕೋರ್ಟ್, ರಾಜ್ಯ ಸರ್ಕಾರ ಆಸ್ಪತ್ರೆಗಳ ಬೆಡ್ ಲಭ್ಯತೆ ಸುಧಾರಿಸಲು ಕ್ರಿಯಾ ಯೋಜನೆ ರಚಿಸಿ 2 ವಾರದಲ್ಲಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಸರ್ಕಾರ ಮಾಡಬೇಕಾಗಿದ್ದೇನು? ರಾಜ್ಯದ ಬೆಡ್ ವ್ಯವಸ್ಥೆ ಸುಧಾರಿಸಲು ಕೇಂದ್ರ ಸರ್ಕಾರ ಮಾರ್ಗಸೂಚಿ ನೀಡಿದೆ. ರಾಜ್ಯ ಕೊರೊನಾ ಸೋಂಕು ಎದುರಿಸಲು 66,333 ಆಕ್ಸಿಜನ್ ಬೆಡ್, 13,969 ಐಸಿಯು, 8,382 ವೆಂಟಿಲೇಟರ್ ಬೆಡ್ ಬೇಕೆಂದು ಹೇಳಿದೆ. ಆದರೆ ರಾಜ್ಯದಲ್ಲಿ ಸದ್ಯ 45,754 ಆಕ್ಸಿಜನ್ ಬೆಡ್, 5,305 ಐಸಿಯು ಬೆಡ್, 4,109 ವೆಂಟಿಲೇಟರ್ ಬೆಡ್ ಮಾತ್ರವಿದೆ. ಬೆಡ್ ಹೆಚ್ಚಿಸಲು ರೂಪುರೇಷೆ ಸಿದ್ದಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಕಟ್ಟಪ್ಪಣೆ ಮಾಡಿದೆ. ಇದೇ ವೇಳೆ ಏರ್ ಫೋರ್ಸ್ ಜಾಲಹಳ್ಳಿಯಲ್ಲಿ ಸರ್ವಸಜ್ಜಿತ 100 ಬೆಡ್ ವ್ಯವಸ್ಥೆ ಕಲ್ಪಿಸಿದೆ. ಆದರೆ ಈವರೆಗೂ ಈ ಬೆಡ್ ಬಳಸಲು ಬಿಬಿಎಂಪಿ ವಿಫಲವಾಗಿರುವ ಬಗ್ಗೆ ವಿವರಣೆ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈಕೋರ್ಟ್ ತಾಕೀತು ಮಾಡಿದೆ. ರೈಲ್ವೆ ಇಲಾಖೆ ಒದಗಿಸಿರುವ ಬೆಡ್ ಗಳನ್ನು ಬಳಸಿಕೊಳ್ಳದ ಸರ್ಕಾರಕ್ಕೂ ವಿವರಣೆ ನೀಡುವಂತೆ ಸೂಚನೆ ನೀಡಿದೆ.

ಇನ್ನು ಹೈಕೋರ್ಟ್ ಸೂಚನೆ ನಂತರ ರಾಜ್ಯಕ್ಕೆ ರೆಮ್‌ಡಿಸಿವಿರ್ ಹಂಚಿಕೆ ಪ್ರಮಾಣ ಹೆಚ್ಚಳ ಮಾಡಲಾಗಿದೆ ಪ್ರತಿ ದಿನಕ್ಕೆ 40,000 ನಂತೆ ರೆಮ್‌ಡಿಸಿವಿರ್ ಹಂಚಿಕೆ ಮಾಡಿರುವುದಾಗಿ ಹೈಕೋರ್ಟ್‌ಗೆ ಕೇಂದ್ರ ಸರ್ಕಾರ ಹೇಳಿದೆ. ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ರೆಮ್‌ಡಿಸಿವಿರ್ ಬಳಕೆಯಾಗುತ್ತಿದೆಯೇ ಎಂಬ ಬಗ್ಗೆ ಆಡಿಟಿಂಗ್ ಅಗತ್ಯವಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಇನ್ನು ರಾಜ್ಯದಲ್ಲಿ ವ್ಯಾಕ್ಸಿನೇಷನ್‌ ಬಗ್ಗೆಯೂ ಸರ್ಕಾರಕ್ಕೆ ಸೂಚನೆ ನೀಡಿರುವ ಹೈಕೋರ್ಟ್ ಇಂದು ಈ ಸಂಬಂಧ ವಿಚಾರಣೆ ನಡೆಸಲಿದೆ.

ಇದನ್ನೂ ಓದಿ: Explainer: ಮಕ್ಕಳಿಗೆ ಸಮಸ್ಯೆ ತಂದೊಡ್ಡುವ ಕೊರೊನಾ 3ನೇ ಅಲೆ ಎದುರಿಸಲು ಸಿದ್ಧತೆ ಹೇಗಿರಬೇಕು? ತಜ್ಞರ ಅಭಿಪ್ರಾಯ ಇಲ್ಲಿದೆ

Published On - 8:32 am, Thu, 13 May 21

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ