ನಗರದಲ್ಲಿ ಇಂದೂ ಮುಂದುವರಿಯಲಿದೆ ನಿಷೇಧಾಜ್ಞೆ, ಟೌನ್‌ ಹಾಲ್‌ ಬಳಿ ಬಿಗಿಭದ್ರತೆ

ಬೆಂಗಳೂರು: ಪೌರತ್ವ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ಹಿನ್ನೆಲೆ ಇಂದೂ ಕೂಡ ನಿಷೇಧಾಜ್ಞೆ ಮುಂದುವರಿಯಲಿದೆ. ನಿನ್ನೆ ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆದಿತ್ತು. ಧರಣಿನಿರತರಾಗಿದ್ದ 244 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು 8 ಎಫ್​ಐಆರ್ ದಾಖಲಿಸಿದ್ದರು. ಹೀಗಾಗಿ ಇಂದು ಕೂಡ ಪ್ರತಿಭಟನೆ ನಡೆಸುವ ಸಾಧ್ಯತೆ ಹೆಚ್ಚಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಟೌನ್‌ ಹಾಲ್‌ ಬಳಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಹಾಗೂ ಸಿಎಆರ್‌ ತುಕಡಿಗಳ ನಿಯೋಜನೆ ಮಾಡಲಾಗಿದೆ. ಟೌನ್‌ ಹಾಲ್‌ ಸಂಪರ್ಕಿಸುವ ರಸ್ತೆ ದ್ವಾರದಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್​ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ನಗರದಲ್ಲಿ ಇಂದೂ ಮುಂದುವರಿಯಲಿದೆ ನಿಷೇಧಾಜ್ಞೆ, ಟೌನ್‌ ಹಾಲ್‌ ಬಳಿ ಬಿಗಿಭದ್ರತೆ
ಸಾಧು ಶ್ರೀನಾಥ್​

Updated on: Dec 20, 2019 | 9:12 AM

ಬೆಂಗಳೂರು: ಪೌರತ್ವ ತಿದ್ದುಪಡಿ ವಿರೋಧಿಸಿ ನಗರದಲ್ಲಿ ಪ್ರತಿಭಟನೆ ಹಿನ್ನೆಲೆ ಇಂದೂ ಕೂಡ ನಿಷೇಧಾಜ್ಞೆ ಮುಂದುವರಿಯಲಿದೆ. ನಿನ್ನೆ ನಿಷೇಧಾಜ್ಞೆ ನಡುವೆಯೂ ಪ್ರತಿಭಟನೆ ನಡೆದಿತ್ತು. ಧರಣಿನಿರತರಾಗಿದ್ದ 244 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು 8 ಎಫ್​ಐಆರ್ ದಾಖಲಿಸಿದ್ದರು.

ಹೀಗಾಗಿ ಇಂದು ಕೂಡ ಪ್ರತಿಭಟನೆ ನಡೆಸುವ ಸಾಧ್ಯತೆ ಹೆಚ್ಚಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಟೌನ್‌ ಹಾಲ್‌ ಬಳಿ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಹಾಗೂ ಸಿಎಆರ್‌ ತುಕಡಿಗಳ ನಿಯೋಜನೆ ಮಾಡಲಾಗಿದೆ. ಟೌನ್‌ ಹಾಲ್‌ ಸಂಪರ್ಕಿಸುವ ರಸ್ತೆ ದ್ವಾರದಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್​ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Published On - 7:31 am, Fri, 20 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us