AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಟಚ್; ಸ್ಟೇಷನ್ ಗೋಡೆಗಳ ಮೇಲೆ ಅರಳಿವೆ ಬಣ್ಣ ಬಣ್ಣದ ಚಿತ್ತಾರ

ದಕ್ಷಿಣ ಭಾರತದ ವಿವಿಧ ನಾಟ್ಯಗಳು ಮತ್ತು ನಾಟ್ಯದ ವಿವಿಧ ಭಂಗಿಗಳ ಚಿತ್ರಗಳನ್ನು ಪ್ರಸಿದ್ಧ ಕಲಾವಿದರಿಂದ ಈ ರೈಲ್ವೆ ನಿಲ್ದಾಣದಲ್ಲಿ ಚಿತ್ರಿಸಲಾಗಿದೆ. ಅದರಲ್ಲೂ ಕರಾವಳಿ ಪ್ರದೇಶದ ಕಥಕ್ಕಳಿ ನೃತ್ಯದ ಚಿತ್ರಗಳು ಜನರ ಆಕರ್ಷಣೆಯ ಕೇಂದ್ರವಾಗಿವೆ.‌

ಧಾರವಾಡದ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಟಚ್; ಸ್ಟೇಷನ್ ಗೋಡೆಗಳ ಮೇಲೆ ಅರಳಿವೆ ಬಣ್ಣ ಬಣ್ಣದ ಚಿತ್ತಾರ
ಧಾರವಾಡದ ರೈಲ್ವೆ ನಿಲ್ದಾಣದ ದೃಶ್ಯ
Follow us
preethi shettigar
|

Updated on: Mar 28, 2021 | 12:05 PM

ಧಾರವಾಡ: ಒಂದು ಕಾಲದಲ್ಲಿ ರೈಲು ನಿಲ್ದಾಣಕ್ಕೆ ಹೋಗಲು ಜನರು ಹಿಂದೇಟು ಹಾಕುತ್ತಿದ್ದರು. ಅಲ್ಲಿನ ಅಸುಚಿತ್ವ ಹಾಗೂ ಅವ್ಯವಸ್ಥೆಯಿಂದಾಗಿ ಜನರು ಆ ಕಡೆ ಅನಿವಾರ್ಯತೆ ಇದ್ದರೆ ಮಾತ್ರ ಹೋಗುತ್ತಿದ್ದರು. ಆದರೆ ಇದೀಗ ಎಲ್ಲವೂ ಬದಲಾಗಿದೆ. ಅದರಲ್ಲೂ ಜಿಲ್ಲೆಯ ರೈಲ್ವೆ ನಿಲ್ದಾಣಕ್ಕಂತೂ ಹೈಟೆಕ್ ಟಚ್ ಸಿಕ್ಕಿದ್ದು, ರೈಲ್ವೆ ನಿಲ್ದಾಣದಲ್ಲಿನ ಅಂದವಾದ ಚಿತ್ರಗಳು ಜನರನ್ನು ಆಕರ್ಷಿಸುತ್ತಿದೆ.

ಕೆಲ ದಿನಗಳ ಹಿಂದಷ್ಟೇ ಹಳೆ ಕಟ್ಟಡದಿಂದ ಮುಕ್ತವಾಗಿರುವ ಧಾರವಾಡದ ರೈಲ್ವೆ ನಿಲ್ದಾಣಕ್ಕೆ ಇದೀಗ ಹೈಟೆಕ್ ಆಗಿ ಮಾರ್ಪಾಡುಗೊಂಡಿದೆ. ಅದಗಲೇ ನಿಲ್ದಾಣದ ಹೊರ ಭಾಗದಲ್ಲಿ ನಿರ್ಮಿಸಲಾಗಿರುವ ವಾಲ್ ಗಾರ್ಡನ್ ಜನರ ಅಕರ್ಷಣೆಗೆ ಕಾರಣವಾಗಿದೆ. ಇದರ ಜೊತೆಗೆ ಇದೀಗ ಜನರನ್ನು ಆಕರ್ಷಿಸಲು ಬಗೆ ಬಗೆಯ ಬಣ್ಣದ ಚಿತ್ರಗಳು ಚಿತ್ರಿಸಲ್ಪಟ್ಟಿವೆ. ದಕ್ಷಿಣ ಭಾರತದ ವಿವಿಧ ನೃತ್ಯ ಪ್ರಕಾರಗಳ ಚಿತ್ರಗಳನ್ನು ಗೋಡೆಗಳ ಮೇಲೆ ಚಿತ್ರಿಸಲಾಗಿದ್ದು, ಇವೆಲ್ಲವೂ ರೈಲ್ವೆ ನಿಲ್ದಾಣದ ಅಂದವನ್ನು ದ್ವಿಗುಣಗೊಳಿಸಿವೆ.

ದಕ್ಷಿಣ ಭಾರತದ ವಿವಿಧ ನಾಟ್ಯಗಳು ಮತ್ತು ನಾಟ್ಯದ ವಿವಿಧ ಭಂಗಿಗಳ ಚಿತ್ರಗಳನ್ನು ಪ್ರಸಿದ್ಧ ಕಲಾವಿದರಿಂದ ಈ ರೈಲ್ವೆ ನಿಲ್ದಾಣದಲ್ಲಿ ಚಿತ್ರಿಸಲಾಗಿದೆ. ಅದರಲ್ಲೂ ಕರಾವಳಿ ಪ್ರದೇಶದ ಕಥಕ್ಕಳಿ ನೃತ್ಯದ ಚಿತ್ರಗಳು ಜನರ ಆಕರ್ಷಣೆಯ ಕೇಂದ್ರವಾಗಿವೆ.‌ ಇದುವರೆಗೂ ನಿಲ್ದಾಣದ ಹೊರ ಭಾಗದ ವಾಲ್ ಗಾರ್ಡನ್ ಜನರನ್ನು ಆಕರ್ಷಿಸುತ್ತಿತ್ತು. ಆದರೆ ಇದೀಗ ಇದರ ಜೊತೆಗೆ ಈ ಚಿತ್ರಗಳು ಕೂಡ ಜನರನ್ನ ತನ್ನತ್ತ ಸೆಳೆಯುತ್ತಿದೆ.

dharwad railway

ರೈಲ್ವೆ ನಿಲ್ದಾಣದ ಗೊಡೆಗಳ ಮೇಲೆ ಅರಳಿದ ಚಿತ್ರಕಲೆ

ತೀರಾ ಹಳೆಯ ಕಟ್ಟಡವನ್ನು ಹೊಂದಿದ್ದ ಈ ನಿಲ್ದಾಣವನ್ನು ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿಪಡಿಸಲಾಗುತ್ತಿದೆ. ಇಡೀ ಸ್ಟೇಷನ್​ಗೆ ಹೈಟೆಕ್ ಟಚ್ ನೀಡಲಾಗುತ್ತಿದೆ. ಅದರೊಂದಿಗೆ ಹೀಗೆ ಸ್ಥಳೀಯ ಹಾಗೂ ಪಾರಂಪರಿಕ ಕಲೆಗಳನ್ನು ಗೋಡೆಗಳ ಮೇಲೆ ಚಿತ್ರಿಸುವ ಮೂಲಕ ಜನರ ಕಣ್ಣಿಗೆ ಹಿತವಾದ ಅನುಭೂತಿಯನ್ನು ನೀಡುತ್ತಿರುವುದು ಸಂತಸದ ಸಂಗತಿಯಾಗಿದೆ.

dharwad railway

ದಕ್ಷಿಣ ಭಾರತದ ವಿವಿಧ ನೃತ್ಯ ಪ್ರಕಾರಗಳ ಚಿತ್ರ

dharwad railway

ಜನರನ್ನು ರೈಲ್ವೆ ನಿಲ್ದಾಣದತ್ತ ಆಕರ್ಷಿಸುತ್ತಿದೆ ಬಣ್ಣ ಬಣ್ಣದ ಚಿತ್ತಾರ

ಇದನ್ನೂ ಓದಿ:

ಪರಿಸರ ಸ್ನೇಹಿ ಗದಗ ರೈಲು ನಿಲ್ದಾಣ: ಹೈಟೆಕ್ ಟಚ್​ನಿಂದ ಈಗ ಆಕರ್ಷಣೆಯ ಕೇಂದ್ರ ಬಿಂದು

Women’s Day 2021: ಟೈಂ ಟೇಬಲ್ ಸುನೀತಾ; ಯಾವ ರೈಲು ಎಷ್ಟೊತ್ತಿಗೆ ಎಲ್ಲಿಗೆ ಬರಬೇಕು ನಿರ್ಧರಿಸೋದು ಇವರು..

ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ