AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇಯಲ್ಲಿ ಮತ್ತೊಂದು ಕಂಟಕ: ಪ್ರಯಾಣಿಕರಿಗೆ ಪ್ರಾಣ ಭಯ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಯಡವಟ್ಟು ಹಾಗೂ ಕಳ್ಳರ ಕೈಚಳಕದಿಂದಾಗಿ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ ಮತ್ತೆ ಸುದ್ದಿಯಾಗುತ್ತಿದೆ. ಎಕ್ಸ್​​ಪ್ರೆಸ್​ ವೇ ಪಕ್ಕದಲ್ಲಿ ಹಾಕಲಾಗಿರುವ ಹೈಟೆನ್ಷನ್ ವಿದ್ಯುತ್ ಕಂಬಗಳು ಸರ್ವೀಸ್ ರಸ್ತೆ ಹಾಗೂ ಹೆದ್ದಾರಿಗೆ ಬೀಳುತ್ತಿದ್ದು, ವಾಹನ ಸಂಚಾರರು ಪ್ರಾಣ ಭಯದಲ್ಲೇ ಸಂಚರಿಸುವಂತಾಗಿದೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇಯಲ್ಲಿ ಮತ್ತೊಂದು ಕಂಟಕ: ಪ್ರಯಾಣಿಕರಿಗೆ ಪ್ರಾಣ ಭಯ
ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇಯಲ್ಲಿ ಮತ್ತೊಂದು ಕಂಟಕ
ಪ್ರಶಾಂತ್​ ಬಿ.
| Edited By: |

Updated on:May 03, 2024 | 7:52 AM

Share

ಮಂಡ್ಯ, ಮೇ 3: ಸದಾ ಒಂದಿಲ್ಲೊಂದು ವಿವಾದಗಳಿಂದಲೇ ಆರಂಭದಲ್ಲಿ ಖ್ಯಾತಿ ಪಡೆದಿದ್ದ ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್​ ವೇ (Bengaluru Mysuru Expressway) ಇದೀಗ ಮತ್ತೆ ಸುದ್ದಿಯಾಗತೊಡಗಿದೆ. ಈ ಹೆದ್ದಾರಿಯಲ್ಲಿ ವಾಹನ ಸವಾರರು ಭಯದಲ್ಲೇ ಸಂಚರಿಸುವಂತಹ ಪರಿಸ್ಥಿತಿ ಮತ್ತೆ ನಿರ್ಮಾಣವಾಗಿದೆ. ಹೆದ್ದಾರಿ ಪಕ್ಕದಲ್ಲಿ ಸ್ಥಾಪಿಸಲಾಗಿರುವ ಹೈಟೆನ್ಷನ್ ವಿದ್ಯುತ್ ಕಂಬಗಳು (High Tension Power Pole) ಸರ್ವೀಸ್​ ರಸ್ತೆ, ಹೆದ್ದಾರಿ ಮೇಲೆ ಉರಳುತ್ತಿರುವುದೇ ಇದಕ್ಕೆ ಕಾರಣ. ಕಳಪೆ ಕಾಮಗಾರಿ ಹಾಗೂ ಕಳ್ಳರ ಕೈಚಳಕದಿಂದ ವಿದ್ಯುತ್ ಕಂಬಗಳು ಸರ್ವಿಸ್ ರಸ್ತೆ ಹಾಗೂ ಹೆದ್ದಾರಿ ಮೇಲೆ ಉರಳಿ ಬೀಳುತ್ತಿವೆ.

ಇತ್ತೀಚಿಗೆ ಬೈಕ್ ಸವಾರರೊಬ್ಬರ ಮೇಲೆ ವಿದ್ಯುತ್ ಕಂಬ ಬಿದ್ದಿತ್ತು. ಅಲ್ಲದೆ ಜೋರು ಗಾಳಿ ಬೀಸಿದ್ದರಿಂದ ಹೆದ್ದಾರಿ ಮೇಲೆ ಕಂಬ ಬಿದ್ದು ಗಂಟೆಗಟ್ಟಲೇ ಟ್ರಾಫಿಕ್ ಉಂಟಾಗಿತ್ತು. ಅದೃಷ್ಟವಶಾತ್ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದರು. ಮತ್ತೆ ಜೋರು ಗಾಳಿ ಬಂದರೆ ಅದೇ ಪರಿಸ್ಥಿತಿ ಎದುರಾಗಲಿದೆ. ಪ್ರಾಣ ಹಾನಿ ಕೂಡ ಉಂಟಾಗುವ ಸಾಧ್ಯತೆ ಇದೆ.

ವಿದ್ಯುತ್ ಕಂಬಗಳು ಬೀಳಲು ಕಾರಣವೇನು?

ಎಕ್ಸ್​​ಪ್ರೆಸ್​ ವೇ ನಿರ್ಮಾಣದ ಸಮಯದಲ್ಲಿ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೂರಾರು ಹೈಟೆನ್ಷನ್ ವಿದ್ಯುತ್ ಕಂಬಗಳನ್ನು ಸ್ಥಾಪಿಸಿದೆ. ಆದರೆ ವಿದ್ಯುತ್ ಕಂಬದಲ್ಲಿ ಅಳವಡಿಸಿರುವ ಅಲ್ಯೂಮಿನಿಯಂ ಸಪೋರ್ಟಿಂಗ್ ರಾಡ್​​ಗಳನ್ನು ಕಳ್ಳರು ಕದ್ದೊಯ್ಯುತ್ತಿದ್ದಾರೆ. ನೂರಾರು ಕಂಬಗಳಲ್ಲಿ ಕಳೆದ 9 ತಿಂಗಳಿಂದ ಸಪೋರ್ಟಿಂಗ್ ರಾಡ್​​​ಗಳು ಇಲ್ಲ. ಹೀಗಾಗಿ ಎತ್ತರ ವಿದ್ಯುತ್ ಕಂಬಗಳು ಗಾಳಿಗೆ ಬಾಗಿವೆ.

ವಿದ್ಯುತ್ ಕಂಬದ ಅಲ್ಯೂಮಿನಿಯಂ ಸಪೋರ್ಟಿಂಗ್ ರಾಡ್​​ಗಳನ್ನು ಕಳ್ಳರು ಕದ್ದೊಯ್ದಿರುವುದು

ಕಳಪೆ ಕಾಮಗಾರಿಯ ಕಾರಣ ಹಾಗೂ ಜೋರು ಗಾಳಿ ಬಂದಾಗ ಕಂಬಗಳು ರಸ್ತೆಗೆ ಬೀಳುತ್ತಿವೆ. ಹೀಗಾಗಿಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಹುತಗಳು ಸಂಭವಿಸುತ್ತಿವೆ. ಇದು ಸ್ಥಳೀಯರ ಆಕ್ರೋಶಕ್ಕೂ ಕೂಡ ಕಾರಣವಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ವಿಚಾರಣಾಧೀನ ಕೈದಿಯ ಹೊಟ್ಟೆಯೊಳಗಿತ್ತು ಮೊಬೈಲ್ ಫೋನ್!

ಒಟ್ಟಾರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸರ್ವೀಸ್ ರಸ್ತೆಯಲ್ಲಿ ಅನಾಹುತ ಸಂಭವಿಸುತ್ತಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಮತ್ತೊಂದು ದುರಂತ ಸಂಭವಿಸುವ ಮೊದಲು ಉಳಿದ ವಿದ್ಯುತ್ ಕಂಬಗಳನ್ನು ಸರಿಪಡಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:52 am, Fri, 3 May 24

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್