AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್! ಮುಂದಿನ ವರ್ಷ ಶಾಲಾ ಮಕ್ಕಳು ಹೆಚ್ಚು ಓದಬೇಕಿಲ್ಲ!

ಬೆಂಗಳೂರು: ಥ್ಯಾಂಕ್ಸ್ ಟು ಕೊರೊನಾ ವೈರಸ್, ಮುಂದಿನ ಶೈಕ್ಷಣಿಕ ವರ್ಷ ವಿಳಂಬವಾಗುವ ಹಿನ್ನೆಲೆ ಶಾಲಾ ಮಕ್ಕಳು ಹೆಚ್ಚು ಓದ ಬೇಕಿಲ್ಲ! ಪ್ರಾಥಮಿಕ, ಪ್ರೌಢಶಿಕ್ಷಣ‌ ಸಚಿವ ಸುರೇಶ್‌ಕುಮಾರ್ ಈ ಕುರಿತು ಸುಳಿವು ನೀಡಿದ್ದಾರೆ. 15 ದಿನ, 1 ತಿಂಗಳು, ಒಂದೂವರೆ ತಿಂಗಳು ಹಾಗೂ 2 ತಿಂಗಳ ಹಂತವಾರು ಹೆಚ್ಚುವರಿ ಪಠ್ಯಗಳನ್ನ ಗುರುತಿಸಿ ಅವುಗಳನ್ನು ಕೈಬಿಡುವ ಬಗ್ಗೆ ವಿಸ್ತೃತ ವರದಿ ಸಲ್ಲಿಕೆಗೆ ಸೂಚನೆ ನೀಡಲಾಗಿದೆ. ಪಠ್ಯ ಪುಸ್ತಕ ಪ್ರವೇಶಿಸಲಿದೆ ಮಾರಕ ಕೊರೊನಾ ವೈರಸ್! 1ರಿಂದ 10ನೇ ತರಗತಿ ಹಾಗೂ ಪದವಿ […]

ಕೊರೊನಾ ಎಫೆಕ್ಟ್! ಮುಂದಿನ ವರ್ಷ ಶಾಲಾ ಮಕ್ಕಳು ಹೆಚ್ಚು ಓದಬೇಕಿಲ್ಲ!
ಸಾಧು ಶ್ರೀನಾಥ್​
|

Updated on:May 07, 2020 | 7:22 PM

Share

ಬೆಂಗಳೂರು: ಥ್ಯಾಂಕ್ಸ್ ಟು ಕೊರೊನಾ ವೈರಸ್, ಮುಂದಿನ ಶೈಕ್ಷಣಿಕ ವರ್ಷ ವಿಳಂಬವಾಗುವ ಹಿನ್ನೆಲೆ ಶಾಲಾ ಮಕ್ಕಳು ಹೆಚ್ಚು ಓದ ಬೇಕಿಲ್ಲ! ಪ್ರಾಥಮಿಕ, ಪ್ರೌಢಶಿಕ್ಷಣ‌ ಸಚಿವ ಸುರೇಶ್‌ಕುಮಾರ್ ಈ ಕುರಿತು ಸುಳಿವು ನೀಡಿದ್ದಾರೆ. 15 ದಿನ, 1 ತಿಂಗಳು, ಒಂದೂವರೆ ತಿಂಗಳು ಹಾಗೂ 2 ತಿಂಗಳ ಹಂತವಾರು ಹೆಚ್ಚುವರಿ ಪಠ್ಯಗಳನ್ನ ಗುರುತಿಸಿ ಅವುಗಳನ್ನು ಕೈಬಿಡುವ ಬಗ್ಗೆ ವಿಸ್ತೃತ ವರದಿ ಸಲ್ಲಿಕೆಗೆ ಸೂಚನೆ ನೀಡಲಾಗಿದೆ.

ಪಠ್ಯ ಪುಸ್ತಕ ಪ್ರವೇಶಿಸಲಿದೆ ಮಾರಕ ಕೊರೊನಾ ವೈರಸ್! 1ರಿಂದ 10ನೇ ತರಗತಿ ಹಾಗೂ ಪದವಿ ಪೂರ್ವ ಶಿಕ್ಷಣದವರೆಗೆ 2020-21ನೇ ಸಾಲಿನ ಶಾಲಾ ಪಠ್ಯಗಳನ್ನು ಕಡಿತಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಕಡಿತಗೊಳಿಸಬಹುದಾದಂತಹ ಹೆಚ್ಚುವರಿ ಪಠ್ಯವನ್ನು ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶೈಕ್ಷಣಿಕ ವರ್ಷದಲ್ಲಿ ಕಳೆದುಕೊಳ್ಳುವ ಅವಧಿಯ ಆಧಾರದಲ್ಲಿ ಮಕ್ಕಳ ಕಲಿಕೆಗೆ ಹೊರೆಯಾಗದ ರೀತಿ ಪಠ್ಯ ಕೈಬಿಡಲು ಸೂಚನೆ ನೀಡಲಾಗಿದೆ. ಹೆಚ್ಚುವರಿ ಪಠ್ಯವನ್ನು ಗುರುತಿಸಿ ವಿಸ್ತೃತ ವರದಿ ಸಲ್ಲಿಕೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಾರಕ ಕೊವಿಡ್‌ ಬಗ್ಗೆಯೂ ಪಠ್ಯ ಅಳವಡಿಸುವಂತೆ ಸೂಚನೆ ಸಿಕ್ಕಿದೆ. ಈ ಬಗ್ಗೆ ಕೂಡಲೇ ಕ್ರಿಯಾ ಯೋಜನೆ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ.

Published On - 7:20 pm, Thu, 7 May 20

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್