AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರುಗಳಿಗೆ ಕರ್ನಾಟಕದಲ್ಲೇ ಅತಿ ಹೆಚ್ಚು ತೆರಿಗೆ! ಐಷಾರಾಮಿ ಕಾರುಗಳ ಟ್ಯಾಕ್ಸ್ ಕಡಿಮೆ ಮಾಡಲು ಸರ್ಕಾರಕ್ಕೆ ಪತ್ರ

ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಬೇರೆಬೇರೆ ರಾಜ್ಯಗಳಲ್ಲಿ ರಿಜಿಸ್ಟ್ರೇಷನ್ ಆಗಿರುವ ಐಷಾರಾಮಿ ಕಾರುಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದಕ್ಕೆ ಕಾರಣ ರಾಜ್ಯದ ದುಬಾರಿ ಟ್ಯಾಕ್ಸ್. ದೇಶದಲ್ಲೇ ಅತಿ ಹೆಚ್ಚು ಟ್ಯಾಕ್ಸ್ ಕರ್ನಾಟಕದಲ್ಲಿ ವಿಧಿಸಲಾಗುತ್ತಿದೆ ಎನ್ನಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಟ್ಯಾಕ್ಸ್ ಇಳಿಸಿ ಎಂದು ಕರ್ನಾಟಕ ಟೂರ್ಸ್ ಅಂಡ್ ಟ್ರಾವೆಲ್ಸ್ ಅಸೋಸಿಯೇಷನ್ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದೆ.

ಕಾರುಗಳಿಗೆ ಕರ್ನಾಟಕದಲ್ಲೇ ಅತಿ ಹೆಚ್ಚು ತೆರಿಗೆ! ಐಷಾರಾಮಿ ಕಾರುಗಳ ಟ್ಯಾಕ್ಸ್ ಕಡಿಮೆ ಮಾಡಲು ಸರ್ಕಾರಕ್ಕೆ ಪತ್ರ
ಸಾಂದರ್ಭಿಕ ಚಿತ್ರ
Kiran Surya
| Edited By: |

Updated on:Feb 28, 2025 | 7:50 AM

Share

ಬೆಂಗಳೂರು, ಫೆಬ್ರವರಿ 28: ಬೇರೆಬೇರೆ ರಾಜ್ಯದಲ್ಲಿ ರಿಜಿಸ್ಟ್ರೇಷನ್ ಆಗಿರುವ ವಾಹನಗಳ ಸಂಖ್ಯೆ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ. ಅದಕ್ಕೆ ಕಾರಣ ಕರ್ನಾಟಕದಲ್ಲಿ ಕಾರಿನ ಮೇಲಿರುವ ದುಬಾರಿ ತೆರಿಗೆ ಎನ್ನಲಾಗಿದೆ. ದೇಶದಲ್ಲೇ ವಾಹನಗಳಿಗೆ ಅತಿಹೆಚ್ಚು ತೆರಿಗೆ ಇರುವುದು ಕರ್ನಾಟಕದಲ್ಲಿ. ನಮ್ಮ ರಾಜ್ಯದಲ್ಲಿ ಶೇ 18+1 ರಷ್ಟು ಟ್ಯಾಕ್ಸ್ ಕಟ್ಟಬೇಕು. ಬೇರೆ ರಾಜ್ಯಕ್ಕೆ ಹೋಲಿಕೆ‌ ಮಾಡಿದ್ರೆ ನಮ್ಮ ರಾಜ್ಯದಲ್ಲಿ ಟ್ಯಾಕ್ಸ್ ಹೆಚ್ಚಾಗಿದೆ. ಹೀಗಾಗಿ ಐಷಾರಾಮಿ ಕಾರುಗಳ ಟ್ಯಾಕ್ಸ್ ಕಡಿಮೆ ಮಾಡಿ ಎಂದು ‘ಕರ್ನಾಟಕ ಟೂರ್ಸ್ ಅಂಡ್ ಟ್ರಾವೆಲ್ಸ್ ಅಸೋಸಿಯೇಷನ್’ ಸರ್ಕಾರಕ್ಕೆ ಪತ್ರ ಬರೆದಿದೆ.

ರಾಜ್ಯದ ದುಬಾರಿ ತೆರಿಗೆಯಿಂದಾಗಿ ಕಾರು ಮಾಲೀಕರು ಬೇರೆ ರಾಜ್ಯದಿಂದ ಕಾರು ಖರೀದಿ ಮಾಡುತ್ತಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ನೂರಾರು ಕೋಟಿ ರುಪಾಯಿ ನಷ್ಟ ಉಂಟಾಗುತ್ತಿದೆ. ರಾಜ್ಯದಲ್ಲಿ ಐಷಾರಾಮಿ ಕಾರುಗಳನ್ನು ಖರೀದಿ ಮಾಡಲು ಆಗ್ತಿಲ್ಲ. ನೆರೆಹೊರೆಯ ರಾಜ್ಯದಲ್ಲಿ ಟ್ಯಾಕ್ಸ್ ಕಡಿಮೆ ಇದೆ. ಆದರೆ ನಮ್ಮ ರಾಜ್ಯದಲ್ಲಿ ತುಂಬಾ ಹೆಚ್ಚಾಗಿದೆ, ದಯವಿಟ್ಟು ಟ್ಯಾಕ್ಸ್ ಕಡಿಮೆ ಮಾಡಿ ಎಂಬುದಾಗಿ ಪತ್ರದ ಮೂಲಕ ಮನವಿ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಟ್ರಾವೆಲ್ಸ್ ಆಪರೇಟರ್ ಅಸೋಸಿಯೇಷನ್ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ತಿಳಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ಮಾತ್ರ ಶೇ 18 ರಷ್ಟು ಟ್ಯಾಕ್ಸ್ ಮತ್ತು 1 ರಷ್ಟು ಸೆಸ್ ವಿಧಿಸಲಾಗುತ್ತಿದೆ. ಒಂದು ಕೋಟಿ ರುಪಾಯಿ ಮೌಲ್ಯದ ಕಾರು ಖರೀದಿ ಮಾಡಿದರೆ, ಬರೋಬ್ಬರಿ 19 ಲಕ್ಷ ರುಪಾಯಿ ಪಾವತಿ ಮಾಡಬೇಕು. 2 ಕೋಟಿ ರುಪಾಯಿ ಕಾರು ಖರೀದಿ ಮಾಡಿದ್ರೆ, 38 ಲಕ್ಷ ರೂ. ತೆರಿಗೆ ಪಾವತಿಸಬೇಕು. ಇಷ್ಟೊಂದು ತೆರಿಗೆ ಪಾವತಿಸಿ ಐಷಾರಾಮಿ ಕಾರುಗಳನ್ನು ತಂದು ಟ್ರಾವೆಲ್ಸ್ ನಡೆಸಲು ಆಗ್ತಿಲ್ಲ. ಇದರಿಂದ ನಮಗೆ ತುಂಬಾ ಸಮಸ್ಯೆ ಆಗ್ತಿದೆ. ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಟ್ಯಾಕ್ಸ್ ಕಡಿಮೆ ಮಾಡಿ ಎಂದು ಸಾರಿಗೆ ಸಚಿವರಿಗೆ ಮತ್ತು ಸಿಎಂಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ಅರಮನೆ ವಿವಾದ; ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಒಪ್ಪದ ಸುಪ್ರೀಂ
Image
ಕರ್ನಾಟಕದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧ
Image
ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೂ ಬರಬಹುದು ಕ್ಯಾನ್ಸರ್‌!
Image
ಬಿಸಿಲ ಶಾಖಕ್ಕೆ ಎಸಿ ಖರೀದಿಯತ್ತ ಮುಖ ಮಾಡಿದ ಸಿಟಿ ಮಂದಿ: ಬೆಲೆ ಶಾಕ್​

ನೆರೆ ರಾಜ್ಯಗಳಲ್ಲಿ ಎಷ್ಟಿದೆ ತೆರಿಗೆ?

ನೆರೆಯ ರಾಜ್ಯಗಳಾದ ಮಹಾರಾಷ್ಟ್ರದಲ್ಲಿ ಶೇ 7.5 ರಷ್ಟು ಟ್ಯಾಕ್ಸ್ ಪಾವತಿ ಮಾಡಬೇಕು, ಆಂಧ್ರಪ್ರದೇಶದಲ್ಲಿ ಶೇ 12 ರಿಂದ 14 ರಷ್ಟು, ತಮಿಳುನಾಡಿನಲ್ಲಿ ಶೇ 10 ರಿಂದ 15 ರಷ್ಟು, ಕೇರಳದಲ್ಲಿ ಶೇ 6 ರಿಂದ 15 ರಷ್ಟು ಟ್ಯಾಕ್ಸ್ ಇದೆ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಶೇ 13 ರಿಂದ 18 ರಷ್ಟು ಟ್ಯಾಕ್ಸ್ ಇದೆ ಎಂದು ಅಸೋಸಿಯೇಷನ್ ಹೇಳಿದೆ.

ಸಾರಿಗೆ ಸಚಿವರು ಏನಂದ್ರು?

ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕಳೆದ ವಾರ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಅಸೋಸಿಯೇಷನ್​ಗಳು ಸಿಎಂಗೆ ಟ್ಯಾಕ್ಸ್ ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ. ಸಿಎಂ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಅರಮನೆ ಜಮೀನು ವಿವಾದ; ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಒಪ್ಪದ ಸುಪ್ರೀಂ ಕೋರ್ಟ್

ಒಟ್ಟಿನಲ್ಲಿ ನಮ್ಮ ರಾಜ್ಯದಲ್ಲಿ ವಿಪರೀತ ಟ್ಯಾಕ್ಸ್ ಇದೆ ಎಂಬ ಕಾರಣಕ್ಕೆ ಟ್ರಾವೆಲ್ಸ್ ಮಾಲೀಕರು ಬೇರೆಬೇರೆ ರಾಜ್ಯದಿಂದ ಕಾರು ಖರೀದಿ ಮಾಡಲು ಮುಂದಾದ್ರೆ, ಇದರಿಂದ ರಾಜ್ಯ ಸರ್ಕಾರಕ್ಕೆ ನೂರಾರು ಕೋಟಿ ರುಪಾಯಿ ನಷ್ಟ ಉಂಟಾಗುತ್ತಿದೆ ಎಂಬುದು ಟ್ರಾವೆಲ್ಸ್ ಮಾಲೀಕರ ಆರೋಪ. ಇದಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಸಿಎಂ ಟ್ಯಾಕ್ಸ್ ಏನಾದರೂ ಕಡಿಮೆ ಮಾಡುತ್ತಾರೆಯೇ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 am, Fri, 28 February 25

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ