AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಶಾಲೆಗಳಿಗೆ ಪೊಲೀಸರ ನಿಯೋಜನೆ, ರಬಕವಿ ಬನಹಟ್ಟಿಯಲ್ಲಿ 13 ಆರೋಪಿಗಳ ಬಂಧನ

ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಎದುರು ಪೊಲೀಸರನ್ನು ನಿಯೋಜಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ

ಬೆಳಗಾವಿಯಲ್ಲಿ ಶಾಲೆಗಳಿಗೆ ಪೊಲೀಸರ ನಿಯೋಜನೆ, ರಬಕವಿ ಬನಹಟ್ಟಿಯಲ್ಲಿ 13 ಆರೋಪಿಗಳ ಬಂಧನ
ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು, ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು
TV9 Web
| Edited By: |

Updated on: Feb 09, 2022 | 5:08 PM

Share

ಬೆಳಗಾವಿ: ಹಿಜಾಬ್ ಬಗ್ಗೆ ಹೈಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳ ಬಂದೋಬಸ್ತ್​ಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ. ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಎದುರು ಪೊಲೀಸರನ್ನು ನಿಯೋಜಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಕಾಲೇಜುಗಳಿಗೆ ಸರ್ಕಾರ 3 ದಿನ ರಜೆ ಘೋಷಿಸಿದ್ದರೂ ಪೊಲೀಸರನ್ನು ನಿಯೋಜಿಸಿರುವುದು ಎಲ್ಲರ ಗಮನ ಸೆಳೆದಿದೆ.

ಹಿಜಾಬ್-ಕೇಸರಿ ಶಾಲು ಗಲಾಟೆ: ರಬಕವಿ-ಬನಹಟ್ಟಿಯಲ್ಲಿ 13 ಮಂದಿ ಬಂಧನ ಬಾಗಲಕೋಟೆ: ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ಹಿಜಾಬ್-ಕೇಸರಿ ಶಾಲು ಗಲಾಟೆ ವೇಳೆ ಕಲ್ಲುತೂರಾಟ ನಡೆಸಿದ 13 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬನಹಟ್ಟಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್​ ಹೇಳಿದ್ದಾರೆ. ಶಿಕ್ಷಕರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಸ್ತುತ ರಬಕವಿ-ಬನಹಟ್ಟಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು. ನಿಯಮ ಮೀರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.

ಹೊಡೆದವರು ವಿದ್ಯಾರ್ಥಿಗಳಲ್ಲ: ಹಲ್ಲೆಗೊಳಗಾದ ಶಿಕ್ಷಕನ ಹೇಳಿಕೆ ಹಿಜಾಬ್-ಕೇಸರಿ ಶಾಲು ವಿವಾದದಿಂದಾಗಿ ರಬಕವಿ-ಬನಹಟ್ಟಿ ನಗರದಲ್ಲಿ ನಡೆದ ಗಲಾಟೆ ವೇಳೆ ಹಲ್ಲೆಗೊಳಗಾಗಿದ್ದ ಶಿಕ್ಷಕ ಮಂಜುನಾಥ ನಾಯಕ್ ಘಟನೆಯ ಬಗ್ಗೆ ವಿವರ ನೀಡಿದ್ದಾರೆ. ಇವರು ಹಳಿಂಗಳಿ ಗ್ರಾಮದ ಅಲ್ಲಮಪ್ರಭು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಮ್ಮ ಶಾಲಾ ಸಮಿತಿಯಲ್ಲಿ ಒಬ್ಬರು ಮೃತಪಟ್ಟಿದ್ದರು. ಹೀಗಾಗಿ ಶಾಲೆಗೆ ರಜೆ ಕೊಟ್ಟಿದ್ದೆವು. ಮಕ್ಕಳನ್ನು ಮನೆಗೆ ಕಳಿಸಿ ಬನಹಟ್ಟಿಗೆ ಬರುತ್ತಿದ್ದೆ. ಸರ್ಕಾರಿ ಪಿಯು ಕಾಲೇಜು ಬಳಿ ಪ್ರತಿಭಟನೆ ನಡೆಯುತ್ತಿತ್ತು. ಅಲ್ಲಿಯೇ ನಿಂತು ಮೊಬೈಲ್​ನಿಂದ ಫೋಟೊ ನಾಲ್ಕು ಪೊಟೊ ಕ್ಲಿಕ್ಕಿಸಿದೆ. ಆ ಹೊತ್ತಿಗೆ ಪ್ರತಿಭಟನೆ ಮುಗಿಯುವ ಹಂತಕ್ಕೆ ಬಂದಿತ್ತು ಎಂದು ಹೇಳಿದರು.

ಈ ವೇಳೆ ಟೆಂಪೊ ಒಂದು ಜಾನುವಾರು ಸಾಗಿಸುತ್ತಿತ್ತು. ಕೆಲ ಮುಸ್ಲಿಂ ಯುವಕರು ಅದನ್ನು ತಡೆದರು. ಪ್ರತಿಭಟನೆ ಮುಗಿದಿದೆ ಬಿಡಿ ಎಂದರೂ ಅವರು ಕೇಳಲಿಲ್ಲ. ಕೊನೆಗೆ ಇರಲಿ ಬಿಡಪ್ಪಾ ಗಾಡಿ ವಾಪಸ್ ತೆಗೆದುಕೊಂಡು ಹೋಗು ಅಂತ ಹೇಳುತ್ತಿದ್ದೆ. ಅಷ್ಟರಲ್ಲೇ ಹಿಂದಿನಿಂದ ನನ್ನ ತಲೆಗೆ ಏಟು ಬಿತ್ತು. ಅದು ಕಲ್ಲು ಅಥವಾ ರಾಡ್ ಅಂತ ಗೊತ್ತಾಗಿಲ್ಲ. ನಂತರ ತಿರುಗಿ ನೋಡುವಷ್ಟರಲ್ಲಿ ಮುಖಕ್ಕೆ ಪಂಚ್ ಬಿತ್ತು. ಹಿಂದಿನಿಂದ ಒಬ್ಬರೂ ಸೊಂಟಕ್ಕೆ ಒದ್ದರು. ತಲೆಗೆ ಏಟು ಬಿದ್ದು ರಕ್ತ ಸೋರುವಾಗ ಹಿಂದೂ ಸಂಘಟನೆಗಳ ಕಾರ್ಯಕರ್ತರು ನನ್ನನ್ನು ಆಸ್ಪತ್ರೆಗೆ ಸಾಗಿಸಿದರು ಎಂದು ನೆನಪಿಸಿಕೊಂಡರು.

ನಾನೊಬ್ಬ ಆರ್​ಎಸ್​ಎಸ್​ ಕಾರ್ಯಕರ್ತನಾಗಿದ್ದೆ. ಆದರೆ ಒಂದು ವರ್ಷದಿಂದ ಸಕ್ರಿಯನಾಗಿಲ್ಲ. ನನಗೆ ಯಾರು, ಏಕೆ ಹೊಡೆದರು ಎನ್ನುವುದು ಗೊತ್ತಿಲ್ಲ. ಆದರೆ ಇಷ್ಟು ಮಾತ್ರ ನಿಜ, ಯಾವುದೇ ವಿದ್ಯಾರ್ಥಿ ನನ್ನ ಮೇಲೆ ಹಲ್ಲೆ ಮಾಡಿಲ್ಲ. ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು. ಮೂಲತಃ ಅಂಕೋಲ ತಾಲ್ಲೂಕು ಅಗಸೂರು ಗ್ರಾಮದ ಮಂಜುನಾಥ ನಾಯಕ್ ಕಳೆದ ಹನ್ನೊಂದು ವರ್ಷಗಳಿಂದ ಜಮಖಂಡಿ, ರಬಕವಿ-ಬನಹಟ್ಟಿಯಲ್ಲಿ ನೆಲೆಸಿದ್ದಾರೆ. ಸದ್ಯ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಉಡುಪಿ ಹಿಜಾಬ್ ವಿವಾದದ ಹಿಂದೆ ವಿದೇಶಿ ಕುಮ್ಮಕ್ಕು: ಉಡುಪಿ ಶಾಸಕ ರಘುಪತಿ ಭಟ್ ಆರೋಪ

ಇದನ್ನೂ ಓದಿ: ಹಿಜಾಬ್ ವಿವಾದ ಪ್ರಕರಣ ವರ್ಗಾವಣೆ: ಸರ್ಕಾರದ ಮಟ್ಟದಲ್ಲಿ ಸಭೆ ಬಳಿಕ ಮುಂದಿನ ನಿರ್ಧಾರ ಎಂದ ಆರಗ ಜ್ಞಾನೇಂದ್ರ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ