AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Verdict: ಹಿಜಾಬ್​ ವಿವಾದದ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೆಗೆ ಬಿಗಿ ಭದ್ರತೆ

ಹೈಕೋರ್ಟ್ ನೀಡಿರುವ ತೀರ್ಪಿಗೆ ಇಸ್ಲಾಂ ಸಮುದಾದ ಮುಖಂಡರಿಂದ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದ್ದು, ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆಯೂ ಹೇಳುತ್ತಿದ್ದಾರೆ.​​

Hijab Verdict: ಹಿಜಾಬ್​ ವಿವಾದದ  ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೆಗೆ ಬಿಗಿ ಭದ್ರತೆ
ಕರ್ನಾಟಕ ಉಚ್ಚ ನ್ಯಾಯಾಲಯ
TV9 Web
| Edited By: |

Updated on:Mar 15, 2022 | 11:32 AM

Share

ಬಹುದಿನಗಳಿಂದ ಬಾಕಿ ಇದ್ದ ಹಿಜಾಬ್​ ವಿವಾದಕ್ಕೊಂದು (Hijab Row)ಅಂತ್ಯ ಸಿಕ್ಕಿದೆ. ಇಸ್ಲಾಂನಲ್ಲಿ ಹಿಜಾಬ್​ ಕಡ್ಡಾಯವೆಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಹೀಗಾಗಿ ಶಾಲಾ-ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ. ಸರ್ಕಾರಗಳು ಏನು ವಸ್ತ್ರ ಸಂಹಿತೆ ರೂಪಿಸಿವೆಯೋ ಅದೇ ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್​ನ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್​ ಅವಷ್ಠಿ ನೇತೃತ್ವದ ನ್ಯಾ.ಕೃಷ್ಣ ಎಸ್​. ದೀಕ್ಷಿತ್​ ಮತ್ತು ಜೆ.ಎಂ.ಖಾಜಿ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಈ ತೀರ್ಪು ಹೊರಬೀಳುತ್ತಿದ್ದಂತೆ ಹೈಕೋರ್ಟ್​ ಸಿಜೆ ರಿತು ರಾಜ್​ ಅವಷ್ಠಿ ಅವರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆ, ಹಿಂಸಾಚಾರ, ಗಲಾಟೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಹೈಕೋರ್ಟ್ ನೀಡಿರುವ ತೀರ್ಪಿಗೆ ಇಸ್ಲಾಂ ಸಮುದಾದ ಮುಖಂಡರಿಂದ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದ್ದು, ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆಯೂ ಹೇಳುತ್ತಿದ್ದಾರೆ.​​  ಹಿಜಾಬ್​ ವಿವಾದ ಕರ್ನಾಟಕದಲ್ಲಿ ಶುರುವಾಗಿ ತಿಂಗಳ ಮೇಲಾಯಿತು. ಇದು ರಾಷ್ಟ್ರವ್ಯಾಪಿ ಪಸರಿಸಿತ್ತು. ಪಾಕಿಸ್ತಾನ ಕೂಡ ಪ್ರತಿಕ್ರಿಯಿಸಿತ್ತು. ಇನ್ನು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೊಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಫೆ.5ರಂದು ಮಧ್ಯಂತರ ಆದೇಶ ನೀಡಿದ್ದ ನ್ಯಾಯಾಲಯ, ಅಂತಿಮ ತೀರ್ಪಿನವರೆಗೂ ಸರ್ಕಾರಗಳು ವಿಧಿಸಿರುವ ವಸ್ತ್ರಸಂಹಿತೆಯನ್ನು ಪಾಲನೆ ಮಾಡಬೇಕು ಎಂದಿತ್ತು. ಅದೇ ಆದೇಶವನ್ನೇ ಇಂದು ಎತ್ತಿ ಹಿಡಿದಿದೆ.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ ನಿರ್ಬಂಧವನ್ನು ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರ ಪರ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ, ದೇವದತ್ ಕಾಮತ್​, ರವಿವರ್ಮ ಕುಮಾರ್ ವಾದಮಂಡಿಸಿದ್ದರು. ಸಂವಿಧಾನ, ಧಾರ್ಮಿಕ ನೆಲೆಗಟ್ಟು, ಕಾನೂನು ಕಾರಣಗಳನ್ನು ಉಲ್ಲೇಖಿಸಿ, ಹಿಜಾಬ್​ ಧರಿಸಲು ಅವಕಾಶ ಮಾಡಿಕೊಡಬೇಕು ಎಂದು ಕೋರ್ಟ್​ಗೆ ಕೇಳಿಕೊಂಡಿದ್ದರು. ಹಿಜಾಬ್​ ತೀರ್ಪು ಬರುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, ಶಿಕ್ಷಣವನ್ನು ಹಾಳು ಮಾಡಿಕೊಳ್ಳಬೇಡಿ. ಹೈಕೋರ್ಟ್ ತೀರ್ಪನ್ನು ಪ್ರತಿಯೊಬ್ಬರೂ ಪಾಲನೆ ಮಾಡಲೇಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಲೆ-ಕಾಲೇಜುಗಳಲ್ಲಿ ಹಿಜಾಬ್​ ಧರಿಸಲು ಅವಕಾಶವಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ: ಹೈಕೋರ್ಟ್​

Published On - 11:29 am, Tue, 15 March 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​