AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hijab Verdict: ಹಿಜಾಬ್​ ವಿವಾದದ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೆಗೆ ಬಿಗಿ ಭದ್ರತೆ

ಹೈಕೋರ್ಟ್ ನೀಡಿರುವ ತೀರ್ಪಿಗೆ ಇಸ್ಲಾಂ ಸಮುದಾದ ಮುಖಂಡರಿಂದ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದ್ದು, ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆಯೂ ಹೇಳುತ್ತಿದ್ದಾರೆ.​​

Hijab Verdict: ಹಿಜಾಬ್​ ವಿವಾದದ  ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೆಗೆ ಬಿಗಿ ಭದ್ರತೆ
ಕರ್ನಾಟಕ ಉಚ್ಚ ನ್ಯಾಯಾಲಯ
TV9 Web
| Updated By: Lakshmi Hegde|

Updated on:Mar 15, 2022 | 11:32 AM

Share

ಬಹುದಿನಗಳಿಂದ ಬಾಕಿ ಇದ್ದ ಹಿಜಾಬ್​ ವಿವಾದಕ್ಕೊಂದು (Hijab Row)ಅಂತ್ಯ ಸಿಕ್ಕಿದೆ. ಇಸ್ಲಾಂನಲ್ಲಿ ಹಿಜಾಬ್​ ಕಡ್ಡಾಯವೆಂದು ಎಲ್ಲಿಯೂ ಉಲ್ಲೇಖಿಸಿಲ್ಲ. ಹೀಗಾಗಿ ಶಾಲಾ-ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರುವಂತಿಲ್ಲ. ಸರ್ಕಾರಗಳು ಏನು ವಸ್ತ್ರ ಸಂಹಿತೆ ರೂಪಿಸಿವೆಯೋ ಅದೇ ಕಡ್ಡಾಯ ಎಂದು ಕರ್ನಾಟಕ ಹೈಕೋರ್ಟ್​ನ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ನೀಡಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತು ರಾಜ್​ ಅವಷ್ಠಿ ನೇತೃತ್ವದ ನ್ಯಾ.ಕೃಷ್ಣ ಎಸ್​. ದೀಕ್ಷಿತ್​ ಮತ್ತು ಜೆ.ಎಂ.ಖಾಜಿ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಈ ತೀರ್ಪು ಹೊರಬೀಳುತ್ತಿದ್ದಂತೆ ಹೈಕೋರ್ಟ್​ ಸಿಜೆ ರಿತು ರಾಜ್​ ಅವಷ್ಠಿ ಅವರ ಬೆಂಗಳೂರಿನಲ್ಲಿರುವ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಯಾವುದೇ ಅಹಿತಕರ ಘಟನೆ, ಹಿಂಸಾಚಾರ, ಗಲಾಟೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಹೈಕೋರ್ಟ್ ನೀಡಿರುವ ತೀರ್ಪಿಗೆ ಇಸ್ಲಾಂ ಸಮುದಾದ ಮುಖಂಡರಿಂದ ಈಗಾಗಲೇ ವಿರೋಧ ವ್ಯಕ್ತವಾಗುತ್ತಿದ್ದು, ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆಯೂ ಹೇಳುತ್ತಿದ್ದಾರೆ.​​  ಹಿಜಾಬ್​ ವಿವಾದ ಕರ್ನಾಟಕದಲ್ಲಿ ಶುರುವಾಗಿ ತಿಂಗಳ ಮೇಲಾಯಿತು. ಇದು ರಾಷ್ಟ್ರವ್ಯಾಪಿ ಪಸರಿಸಿತ್ತು. ಪಾಕಿಸ್ತಾನ ಕೂಡ ಪ್ರತಿಕ್ರಿಯಿಸಿತ್ತು. ಇನ್ನು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೊಡುವಂತೆ ಮುಸ್ಲಿಂ ವಿದ್ಯಾರ್ಥಿನಿಯರು ಹೈಕೋರ್ಟ್​ ಮೆಟ್ಟಿಲೇರಿದ್ದರು. ಫೆ.5ರಂದು ಮಧ್ಯಂತರ ಆದೇಶ ನೀಡಿದ್ದ ನ್ಯಾಯಾಲಯ, ಅಂತಿಮ ತೀರ್ಪಿನವರೆಗೂ ಸರ್ಕಾರಗಳು ವಿಧಿಸಿರುವ ವಸ್ತ್ರಸಂಹಿತೆಯನ್ನು ಪಾಲನೆ ಮಾಡಬೇಕು ಎಂದಿತ್ತು. ಅದೇ ಆದೇಶವನ್ನೇ ಇಂದು ಎತ್ತಿ ಹಿಡಿದಿದೆ.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ ನಿರ್ಬಂಧವನ್ನು ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರ ಪರ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ, ದೇವದತ್ ಕಾಮತ್​, ರವಿವರ್ಮ ಕುಮಾರ್ ವಾದಮಂಡಿಸಿದ್ದರು. ಸಂವಿಧಾನ, ಧಾರ್ಮಿಕ ನೆಲೆಗಟ್ಟು, ಕಾನೂನು ಕಾರಣಗಳನ್ನು ಉಲ್ಲೇಖಿಸಿ, ಹಿಜಾಬ್​ ಧರಿಸಲು ಅವಕಾಶ ಮಾಡಿಕೊಡಬೇಕು ಎಂದು ಕೋರ್ಟ್​ಗೆ ಕೇಳಿಕೊಂಡಿದ್ದರು. ಹಿಜಾಬ್​ ತೀರ್ಪು ಬರುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ, ಶಿಕ್ಷಣವನ್ನು ಹಾಳು ಮಾಡಿಕೊಳ್ಳಬೇಡಿ. ಹೈಕೋರ್ಟ್ ತೀರ್ಪನ್ನು ಪ್ರತಿಯೊಬ್ಬರೂ ಪಾಲನೆ ಮಾಡಲೇಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಾಲೆ-ಕಾಲೇಜುಗಳಲ್ಲಿ ಹಿಜಾಬ್​ ಧರಿಸಲು ಅವಕಾಶವಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ: ಹೈಕೋರ್ಟ್​

Published On - 11:29 am, Tue, 15 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ