AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಜೆಸಿಬಿ ಬಳಸಿ ದೇವಸ್ಥಾನ ತೆರವಿಗೆ ಮುಂದಾದ ಪಾಲಿಕೆ ಅಧಿಕಾರಿಗಳು.. ಮಾಜಿ ಸಚಿವ, ಹಿಂದೂಪರ ಸಂಘಟನೆಗಳಿಂದ ಆಕ್ರೋಶ

ಏಕಾಏಕಿ ಜೆಸಿಬಿ ಬಳಸಿ ದೇವಸ್ಥಾನವನ್ನು ಪಾಲಿಕೆ ಅಧಿಕಾರಿಗಳು ಕೆಡವಿದ್ದಾರೆ. ಇದಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಮತ್ತು ಬೆಂಬಲಿಗರು ಅಡ್ಡಿ ಪಡಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಹಿಂದೂಪರ ಸಂಘಟನೆಗಳ ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳಕ್ಕೆ ಹಿಂದೂಪರ ಸಂಘಟನೆಗಳು ಬರುತ್ತಿದ್ದಂತೆ ದೇಗುಲ ತೆರವು ಸ್ಥಗಿತಗೊಳಿಸಿ ಪಾಲಿಕೆ ಅಧಿಕಾರಿಗಳು ವಾಪಸ್ ಹೋಗಿದ್ದಾರೆ...

ಏಕಾಏಕಿ ಜೆಸಿಬಿ ಬಳಸಿ ದೇವಸ್ಥಾನ ತೆರವಿಗೆ ಮುಂದಾದ ಪಾಲಿಕೆ ಅಧಿಕಾರಿಗಳು.. ಮಾಜಿ ಸಚಿವ, ಹಿಂದೂಪರ ಸಂಘಟನೆಗಳಿಂದ ಆಕ್ರೋಶ
ಏಕಾಏಕಿ ಜೆಸಿಬಿ ಬಳಸಿ ದೇವಸ್ಥಾನ ತೆರವಿಗೆ ಮುಂದಾದ ಪಾಲಿಕೆ ಅಧಿಕಾರಿಗಳು
Follow us
TV9 Web
| Updated By: ಆಯೇಷಾ ಬಾನು

Updated on: Jun 20, 2021 | 8:49 AM

ತುಮಕೂರು: ಜಿಲ್ಲೆಯಲ್ಲಿ ರಾತ್ರೋರಾತ್ರಿ ಗಣಪತಿ ದೇಗುಲ ತೆರವುಗೊಳಿಸಲಾಗಿದೆ. ಪಾಲಿಕೆ ಅಧಿಕಾರಿಗಳು ತುಮಕೂರಿನ ವಿನಾಯಕ ನಗರದ ಹಳೇ ಮಾರುಕಟ್ಟೆಯಲ್ಲಿದ್ದ ಗಣಪತಿ ದೇವಸ್ಥಾನದ ಗೋಪುರವನ್ನು ಕೆಡವಿದ್ದಾರೆ. ತರಕಾರಿ ಮಾರುಕಟ್ಟೆ ವ್ಯಾಪಾರಿಗಳು ಈ ದೇಗುಲವನ್ನು ನಿರ್ಮಿಸಿದ್ದರು.

ಏಕಾಏಕಿ ಜೆಸಿಬಿ ಬಳಸಿ ದೇವಸ್ಥಾನವನ್ನು ಪಾಲಿಕೆ ಅಧಿಕಾರಿಗಳು ಕೆಡವಿದ್ದಾರೆ. ಇದಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಮತ್ತು ಬೆಂಬಲಿಗರು ಅಡ್ಡಿ ಪಡಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಹಿಂದೂಪರ ಸಂಘಟನೆಗಳ ಆಕ್ರೋಶ ಹೊರ ಹಾಕಿದ್ದಾರೆ. ಸ್ಥಳಕ್ಕೆ ಹಿಂದೂಪರ ಸಂಘಟನೆಗಳು ಬರುತ್ತಿದ್ದಂತೆ ದೇಗುಲ ತೆರವು ಸ್ಥಗಿತಗೊಳಿಸಿ ಪಾಲಿಕೆ ಅಧಿಕಾರಿಗಳು ವಾಪಸ್ ಹೋಗಿದ್ದಾರೆ. ಸದ್ಯ ದೇವಾಲಯದ ಗರ್ಭಗುಡಿ, ವಿಗ್ರಹ ಮಾತ್ರ ಇದೆ.

ಇನ್ನು ಹಾಸನದಲ್ಲಿ ನಿಧಿ ಆಸೆಗೆ ಪುರಾತನ ಕಾಲದ ದೇವಾಲಯದ ಗರ್ಭಗುಡಿಯನ್ನು ಅಗೆದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಆಲೂರು ಠಾಣೆ ಪೊಲೀಸರು ಸುಮಾರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಹಾಸನ ಸಹಕಾರಿ ಸಂಘಗಳ ಉಪ ನಿಬಂಧಕ ನಾರಾಯಣ್, ಅರ್ಚಕ ತಿಪ್ಪೇಸ್ವಾಮಿ, ಜ್ಯೋತಿಷಿ ಮಂಜುನಾಥ್, ಚನ್ನರಾಯಪಟ್ಟಣ ಮೂಲದ ಜಯರಾಮ್, ಚೇತನ್, ಮಂಜುನಾಥ್, ಹಾಸನ ಮೂಲದ ಕುಮಾರ್ ಬಂಧಿತ ಆರೋಪಿಗಳು.

ಜಿಲ್ಲೆಯ ಆಲೂರು ತಾಲೂಕಿನ ಕೆ.ಹೊಸಕೋಟೆ ಸಮೀಪದ ಪಾರ್ವತಮ್ಮನ ಬೆಟ್ಟದಲ್ಲಿರುವ ದೇಗುಲದಲ್ಲಿ ಬಂಧಿತರು ಕೃತ್ಯವೆಸಗಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ನಿಧಿಗಾಗಿ ದೇವಾಲಯದ ಗರ್ಭಗುಡಿಯನ್ನು ಅಗೆದಿರುವ ಬಗ್ಗೆ ದೇವಾಲಯದ ಆಡಳಿತ ಮಂಡಳಿ ಪೊಲೀಸರಿಗೆ ದೂರನ್ನು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದರು. ತನಿಖೆ ವೇಳೆ ಆರೋಪಿಗಳು ನಾಲ್ಕು ದಿನಗಳ ಹಿಂದೆ ರಾತ್ರೊ ರಾತ್ರಿ ಬೆಟ್ಟದ ಮೇಲೆ ಶೋಧ ನಡೆಸಿರುವುದು ಬೆಳಕಿಗೆ ಬಂದಿದೆ.

demolish temple in tumkur

ಏಕಾಏಕಿ ಜೆಸಿಬಿ ಬಳಸಿ ದೇವಸ್ಥಾನ ತೆರವಿಗೆ ಮುಂದಾದ ಪಾಲಿಕೆ ಅಧಿಕಾರಿಗಳು

ಇದನ್ನೂ ಓದಿ: Gold Rate Today: ವೀಕೆಂಡ್​ನಲ್ಲಿ ಆಭರಣದ ಬೆಲೆ ಎಷ್ಟು? ಚಿನ್ನದ ದರ ಮತ್ತಷ್ಟು ಇಳಿಕೆಯೇ? ದರ ವಿವರ ಹೀಗಿದೆ

ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು