AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದಲ್ಲಿ ನಮ್ಮ ಪೊಲೀಸರಿಗಾಗಿ ಐಷಾರಾಮಿ ಕ್ಯಾಬಿನ್ಸ್.. ಕಿಚನ್, ಟಾಯ್ಲೆಟ್, ರೆಸ್ಟ್ ರೂಂ ಸೌಲಭ್ಯ ಲಭ್ಯ

ದೇವನಹಳ್ಳಿ: ಅತಿ ಹೆಚ್ಚು ಪ್ರಯಾಣಿಕರ ಆಗಮನ ಮತ್ತು ನಿರ್ಗಮನದ ಜೊತೆಗೆ ಹಚ್ಚ ಹಸಿರಿನ ಪರಿಸರದಿಂದ ಪ್ರಸಿದ್ಧಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದೀಗ ಮತ್ತೊಂದು ಸೇವೆ ನೀಡುವುದರ ಮೂಲಕ ಸುದ್ದಿಯಲ್ಲಿದೆ. ಬೆಂಗಳೂರಿನಲ್ಲಿ ಹಗಲು-ರಾತ್ರಿ ಗಾಳಿ, ಮಳೆ, ಬಿಸಿಲು ಅನ್ನದೆ ಸಾರ್ವಜನಿಕರ ಸೇವೆಗಾಗಿ ದಿನದ 24 ಗಂಟೆಯೂ ದುಡಿಯುವ ಪೊಲೀಸರ ಅನುಕೂಲಕ್ಕಾಗಿ ಹೈಟೆಕ್ ಕ್ಯಾಬಿನ್​ಗಳನ್ನ ನಿರ್ಮಾಣ ಮಾಡಿಕೊಟ್ಟಿದೆ. ಹೌದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಉಪಕ್ರಮದ ಅಡಿಯಲ್ಲಿ ಬೆಂಗಳೂರು ಸಿಟಿ ಪೊಲೀಸರ ಅನುಕೂಲಕ್ಕಾಗಿ […]

ವಿಮಾನ ನಿಲ್ದಾಣದಲ್ಲಿ ನಮ್ಮ ಪೊಲೀಸರಿಗಾಗಿ ಐಷಾರಾಮಿ ಕ್ಯಾಬಿನ್ಸ್.. ಕಿಚನ್, ಟಾಯ್ಲೆಟ್, ರೆಸ್ಟ್ ರೂಂ ಸೌಲಭ್ಯ ಲಭ್ಯ
ಪೊಲೀಸರಿಗಾಗಿ ಸಿದ್ಧವಾಯ್ತು ಹೈಟೆಕ್ ಕ್ಯಾಬಿನ್ಸ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Dec 09, 2020 | 10:33 AM

Share

ದೇವನಹಳ್ಳಿ: ಅತಿ ಹೆಚ್ಚು ಪ್ರಯಾಣಿಕರ ಆಗಮನ ಮತ್ತು ನಿರ್ಗಮನದ ಜೊತೆಗೆ ಹಚ್ಚ ಹಸಿರಿನ ಪರಿಸರದಿಂದ ಪ್ರಸಿದ್ಧಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇದೀಗ ಮತ್ತೊಂದು ಸೇವೆ ನೀಡುವುದರ ಮೂಲಕ ಸುದ್ದಿಯಲ್ಲಿದೆ.

ಬೆಂಗಳೂರಿನಲ್ಲಿ ಹಗಲು-ರಾತ್ರಿ ಗಾಳಿ, ಮಳೆ, ಬಿಸಿಲು ಅನ್ನದೆ ಸಾರ್ವಜನಿಕರ ಸೇವೆಗಾಗಿ ದಿನದ 24 ಗಂಟೆಯೂ ದುಡಿಯುವ ಪೊಲೀಸರ ಅನುಕೂಲಕ್ಕಾಗಿ ಹೈಟೆಕ್ ಕ್ಯಾಬಿನ್​ಗಳನ್ನ ನಿರ್ಮಾಣ ಮಾಡಿಕೊಟ್ಟಿದೆ. ಹೌದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಉಪಕ್ರಮದ ಅಡಿಯಲ್ಲಿ ಬೆಂಗಳೂರು ಸಿಟಿ ಪೊಲೀಸರ ಅನುಕೂಲಕ್ಕಾಗಿ 7 ಹೈಟೆಕ್ ಕ್ಯಾಬಿನ್​ಗಳನ್ನ ನಿರ್ಮಾಣ ಮಾಡಿಸಿದ್ದು ಈಗಾಗಲೇ ಬೆಂಗಳೂರು ಸಿಟಿ ಪೊಲೀಸರಿಗೆ 7 ಕ್ಯಾಬಿನ್​ಗಳನ್ನ ಹಸ್ತಾಂತರ ಮಾಡಿದ್ದಾರೆ.

ನೆರವು ಶಿರ್ಷಿಕೆಯಡಿಯಲ್ಲಿ .. ಜತೆಗೆ ಪ್ರತಿಯೊಂದು ಕ್ಯಾಬಿನ್​ನಲ್ಲೂ ಎಲ್ಇಡಿ ವಿದ್ಯುತ್ ಬಲ್ಬ್, ಸೀಲಿಂಗ್ ಪ್ಯಾನ್ಸ್, ಎಲೆಕ್ಟಿಕ್ ಸಾಕೆಟ್ ಏರ್ ಕಂಡೀಷನ್, ಅಡುಗೆ ಮನೆ ಶೌಚಾಲಯದ ಜೊತೆಗೆ ವಿಶ್ರಾಂತಿ ಕೊಠಡಿ ಮತ್ತು ಕ್ಯಾಬಿನ್​ನ ಮೇಲ್ಭಾಗದಲ್ಲಿ 300 ಲೀಟರ್ ನೀರಿನ ಸಾಮರ್ಥ್ಯವುಳ್ಳ ಟ್ಯಾಂಕ್ ಅನ್ನು ಅಳವಡಿಸಿದ್ದಾರೆ.

ಈಗಾಗಲೇ ಈ ಮಾದರಿ ಹೈಟೆಕ್ ಪೊಲೀಸ್ ಕ್ಯಾಬಿನ್​ಗಳನ್ನ ನೆರವು ಶಿರ್ಷಿಕೆಯಡಿಯಲ್ಲಿ ಸಿಲಿಕಾನ್ ಸಿಟಿಯ ಟೌನ್ ಹಾಲ್ ಸೇರಿದಂತೆ 7 ಕಡೆ ಸ್ಥಾಪನೆ ಮಾಡಿದ್ದು, ದಿನಪೂರ್ತಿ ಕೆಲಸ ಮಾಡಿ ದಣಿಯುವ ಪೊಲೀಸರು ಮನೆಯ ರೀತಿ ಕ್ಯಾಬಿನ್​ನಲ್ಲಿ ವಿಶ್ರಾಂತಿ ಪಡೆಯಲು ಅನುಕೂಲವಾಗಲಿದೆ.

KIABಯಲ್ಲಿ ಟೇಕಾಫ್ ವೇಳೆ ತಾಂತ್ರಿಕ ದೋಷ: 1 ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲಿ ಹಾರಾಡಿದ ವಿಮಾನ

Published On - 10:29 am, Wed, 9 December 20

Follow Us
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಸರ್ಕಾರಿ ಮನೆಗಾಗಿ ಸಿದ್ದರಾಮಯ್ಯ ಆಪ್ತರ ನಡುವೆ ಕಿತ್ತಾಟ!
ಸರ್ಕಾರಿ ಮನೆಗಾಗಿ ಸಿದ್ದರಾಮಯ್ಯ ಆಪ್ತರ ನಡುವೆ ಕಿತ್ತಾಟ!
ಚಾಮರಾಜನಗರ: ಅಸನೂರು ಬಳಿ ಕಬ್ಬು ತುಂಬಿದ ಲಾರಿಯ ಅಡ್ಡಗಟ್ಟಿದ ಕಾಡಾನೆಗಳು
ಚಾಮರಾಜನಗರ: ಅಸನೂರು ಬಳಿ ಕಬ್ಬು ತುಂಬಿದ ಲಾರಿಯ ಅಡ್ಡಗಟ್ಟಿದ ಕಾಡಾನೆಗಳು