AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HMT ವಶದಲ್ಲಿದ್ದ 150 ಕೋಟಿ ರೂ ಮೌಲ್ಯದ 5 ಎಕರೆ ಅರಣ್ಯ ಭೂಮಿ ಮರುವಶಕ್ಕೆ

ಕರ್ನಾಟಕ ಅರಣ್ಯ ಇಲಾಖೆಯು ಹೆಚ್‌ಎಂಟಿಯಿಂದ 5 ಎಕರೆ ಅರಣ್ಯ ಭೂಮಿಯನ್ನು ಮರುಪಡೆದುಕೊಂಡಿದೆ. ಪೀಣ್ಯದಲ್ಲಿರುವ ಈ ಭೂಮಿಯನ್ನು ಸುಪ್ರೀಂ ಕೋರ್ಟ್‌ನ "ಒಮ್ಮೆ ಅರಣ್ಯವಾಗಿದ್ದರೆ ಯಾವಾಗಲೂ ಅರಣ್ಯವೇ" ಎಂಬ ತೀರ್ಪಿನ ಆಧಾರದ ಮೇಲೆ ಮರುಸ್ವಾಧೀನಪಡಿಸಿಕೊಳ್ಳಲಾಗಿದೆ.

HMT ವಶದಲ್ಲಿದ್ದ 150 ಕೋಟಿ ರೂ ಮೌಲ್ಯದ 5 ಎಕರೆ ಅರಣ್ಯ ಭೂಮಿ ಮರುವಶಕ್ಕೆ
HMT ವಶದಲ್ಲಿದ್ದ 150 ಕೋಟಿ ರೂ ಮೌಲ್ಯದ 5 ಎಕರೆ ಅರಣ್ಯ ಭೂಮಿ ಮರುವಶಕ್ಕೆ
ಪ್ರಸನ್ನ ಗಾಂವ್ಕರ್​
| Edited By: |

Updated on: Oct 25, 2024 | 9:37 PM

Share

ಬೆಂಗಳೂರು, ಅಕ್ಟೋಬರ್​ 25: ಹೆಚ್ಎಂಟಿ ವಶದಲ್ಲಿದ್ದ ಸುಮಾರು 150 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದೆ. ಹೆಚ್ಎಂಟಿ ಬಳಿಯಿರುವ ಎಲ್ಲ ಅರಣ್ಯ ಭೂಮಿ ಮರುವಶಕ್ಕೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ (Eshwara Khandre) ಸೂಚನೆ ನೀಡಿದ್ದ ಬೆನ್ನಲ್ಲೇ ಇದೀಗ ಮರುವಶಕ್ಕೆ ಪಡೆದುಕೊಳ್ಳಲಾಗಿದೆ.

ಹೆಚ್​ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಇಂದು ಜೆಸಿಬಿಯೊಂದಿಗೆ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ, ಹೆಚ್​ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್​​ನ ಒಟ್ಟೂ 599 ಎಕರೆ ಅರಣ್ಯ ಇದರ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದೆ.

ಅರಣ್ಯ ಇಲಾಖೆ ಫಲಕವನ್ನು ನೆಟ್ಟು ಅಧಿಕಾರಿಗಳು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ. ಸದ್ಯ ಹೆಚ್​ಎಂಟಿ ಮತ್ತು ಅರಣ್ಯ ಇಲಾಖೆ ನಡುವೆ ಜಟಾಪಟಿ ನಡೆಯುತ್ತಿದೆ.

ಇದನ್ನೂ ಓದಿ: ಕಸ್ತೂರಿ ರಂಗನ್ ವರದಿ ಶಿಫಾರಸುಗಳ ಸಂಪೂರ್ಣ ಅನುಷ್ಠಾನ ಅಸಾಧ್ಯ: ಈಶ್ವರ್ ಖಂಡ್ರೆ

ಇನ್ನು ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದು, ಬೆಂಗಳೂರಿನಲ್ಲಿ ಹಸಿರು ಪ್ರದೇಶವನ್ನು ವೃದ್ಧಿಸಲು, ಹೆಚ್.ಎಂ.ಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನಲ್ಲಿ 5 ಎಕರೆ ಅರಣ್ಯ ಭೂಮಿಯನ್ನು ಇಂದು ಮರು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಸಚಿವ ಈಶ್ವರ ಖಂಡ್ರೆ ಟ್ವೀಟ್

ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾದರಿಯ ಬೃಹತ್ ಉದ್ಯಾನವನ್ನು ನಿರ್ಮಿಸುವ ಗುರಿಯೊಂದಿಗೆ, ಈ ಕ್ರಮವು ಉತ್ತರ ಬೆಂಗಳೂರಿನಲ್ಲಿ ಶುದ್ಧ ವಾತಾವರಣ ಒದಗಿಸಲು ನೆರವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು ಅರಣ್ಯ ವಲಯದ ಹೋಂಸ್ಟೇ, ರೆಸಾರ್ಟ್​​ಗಳಿಗೆ ಅರಣ್ಯ ಇಲಾಖೆ ನೋಟಿಸ್

“once a forest is always a forest” ಎಂಬ ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಗಮನದಲ್ಲಿಟ್ಟುಕೊಂಡು, ನಮ್ಮ ನೈಸರ್ಗಿಕ ಸಂಪತ್ತನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಅರಣ್ಯ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್