AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೈತರು, ಕನ್ನಡಪರ ಸಂಘಗಳ ಮೇಲೆ ಬೇಕೆಂದೇ ಹಿಂದಿನ ಸರ್ಕಾರ ಕೇಸ್ ಹಾಕಿದೆ; ಅದನ್ನೂ ಹಿಂಪಡೆಯಲಾಗುವುದು’

Araga Jnanendra: ಈಶ್ವರಪ್ಪ ಯಾವ ಹಿನ್ನೆಲೆಯಲ್ಲಿ ಆ ಹೇಳಿಕೆ ಕೊಟ್ಟಿದ್ದಾರೆ ಅಂತ ಇವತ್ತು ಸಿಎಂ ಬೊಮ್ಮಾಯಿ ಕೂಡ ಹೇಳಿದ್ದಾರೆ. ಪಕ್ಷದವರ, ಸಂಘಟನೆಯವರ, ಕಗ್ಗೊಲೆಯಾಗಿದೆ. ಹಿಂಸೆಯಾಗಿದೆ. ಆ ನೋವಿನ ಹಿನ್ನೆಲೆಯಲ್ಲಿ ಈಶ್ವರಪ್ಪ ಹಾಗೆ ಹೇಳಿದ್ದಾರೆ.

‘ರೈತರು, ಕನ್ನಡಪರ ಸಂಘಗಳ ಮೇಲೆ ಬೇಕೆಂದೇ ಹಿಂದಿನ ಸರ್ಕಾರ ಕೇಸ್ ಹಾಕಿದೆ; ಅದನ್ನೂ ಹಿಂಪಡೆಯಲಾಗುವುದು’
ಆರಗ ಜ್ಞಾನೇಂದ್ರ
TV9 Web
| Edited By: |

Updated on:Aug 10, 2021 | 3:16 PM

Share

ಬೆಂಗಳೂರು: ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಹಾಕಲಾಗಿರುವ ಸುಳ್ಳು ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕೋಟ ಶ್ರೀನಿವಾಸ್ ಪೂಜಾರಿ ಪತ್ರದ ವಿಚಾರವಾಗಿ ಇಂದು (ಆಗಸ್ಟ್ 10) ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ ಪತ್ರ ಕೊಟ್ಟಿದ್ದಾರೆ. ಆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸುತ್ತೇನೆ. ರೈತರು,ಕನ್ನಡ ಪರ ಸಂಘಗಳ ಮೇಲೆ ಕೂಡ ಬೇಕು ಅಂತಲೇ ಹಿಂದಿನ ಸರ್ಕಾರ ಕೇಸ್ ಹಾಕಿದ್ದಾರೆ. ಅದನ್ನು ಹಿಂಪಡೆಯುವಂತೆಯೂ ಆದೇಶ ನೀಡಲಾಗುವುದು ಎಂದು ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಅಪ್ಪಚ್ಚು ರಂಜನ್ ಸಚಿವ ಸ್ಥಾನ ಬೇಡಿಕೆ ವಿಚಾರವಾಗಿ ಅವರು ಮಾತನಾಡಿದ್ದಾರೆ. ಆ ಬಗ್ಗೆ ಗೊಂದಲ ಏನಿಲ್ಲ. ಸ್ಥಾನ ಖಾಲಿ ಇದೆ. ಅದಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅವ್ರು ಕೂಡ ಹಿರಿಯರಿದ್ದಾರೆ ಎಂದು ಜ್ಞಾನೇಂದ್ರ ತಿಳಿಸಿದ್ದಾರೆ. ಸಚಿವ ಹಾಗೂ ಮತ್ತೋರ್ವ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈಶ್ವರಪ್ಪ ಯಾವ ಹಿನ್ನೆಲೆಯಲ್ಲಿ ಆ ಹೇಳಿಕೆ ಕೊಟ್ಟಿದ್ದಾರೆ ಅಂತ ಇವತ್ತು ಸಿಎಂ ಬೊಮ್ಮಾಯಿ ಕೂಡ ಹೇಳಿದ್ದಾರೆ. ಪಕ್ಷದವರ, ಸಂಘಟನೆಯವರ, ಕಗ್ಗೊಲೆಯಾಗಿದೆ. ಹಿಂಸೆಯಾಗಿದೆ. ಆ ನೋವಿನ ಹಿನ್ನೆಲೆಯಲ್ಲಿ ಈಶ್ವರಪ್ಪ ಹಾಗೆ ಹೇಳಿದ್ದಾರೆ. ಅದನ್ನು ಉದ್ದ ಮಾಡೋದು ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬಿಜೆಪಿ, ಸಂಘ ಪರಿವಾರ ಕಾರ್ಯಕರ್ತರ ಮೇಲೆ ದುರುದ್ದೇಶಪೂರ್ವಕವಾಗಿ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿನ್ನೆಯಷ್ಟೇ (ಆಗಸ್ಟ್ 9) ಪತ್ರದ ಮುಖೇನ ಮನವಿ ಮಾಡಿದ್ದರು. ಈ ಸಂಬಂಧ, ಇಂದು ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿ ಮಾತನಾಡಿದ್ದಾರೆ. ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ಮೇಲೆ ಹಾಕಿರುವ ದುರುದ್ದೇಶಪೂರಿತ ದೂರುಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆಗೆ ಚರ್ಚಿಸಲಾಗುವುದು. ಹಾಗೆಯೇ, ರೈತರು ಮತ್ತು ಕನ್ನಡಪರ ಸಂಘಗಳ ಮೇಲೆ, ಹಿಂದಿನ ಸರ್ಕಾರ ಬೇಕೆಂದೇ ಹಾಕಿರುವ ಪ್ರಕರಣಗಳನ್ನು ಕೂಡ ಹಿಂಪಡೆಯುವಂತೆ ಆದೇಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದಲೂ ಶುಭಾಶಯ ಕೋರಿ ಪೋಸ್ಟರ್, ಫುಲ್ ವೈರಲ್

(Home Minister Araga Jnanendra on False Cases against Kannada Organization People KS Eshwarappa Statement)

Published On - 2:52 pm, Tue, 10 August 21

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!