AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರೈತರು, ಕನ್ನಡಪರ ಸಂಘಗಳ ಮೇಲೆ ಬೇಕೆಂದೇ ಹಿಂದಿನ ಸರ್ಕಾರ ಕೇಸ್ ಹಾಕಿದೆ; ಅದನ್ನೂ ಹಿಂಪಡೆಯಲಾಗುವುದು’

Araga Jnanendra: ಈಶ್ವರಪ್ಪ ಯಾವ ಹಿನ್ನೆಲೆಯಲ್ಲಿ ಆ ಹೇಳಿಕೆ ಕೊಟ್ಟಿದ್ದಾರೆ ಅಂತ ಇವತ್ತು ಸಿಎಂ ಬೊಮ್ಮಾಯಿ ಕೂಡ ಹೇಳಿದ್ದಾರೆ. ಪಕ್ಷದವರ, ಸಂಘಟನೆಯವರ, ಕಗ್ಗೊಲೆಯಾಗಿದೆ. ಹಿಂಸೆಯಾಗಿದೆ. ಆ ನೋವಿನ ಹಿನ್ನೆಲೆಯಲ್ಲಿ ಈಶ್ವರಪ್ಪ ಹಾಗೆ ಹೇಳಿದ್ದಾರೆ.

‘ರೈತರು, ಕನ್ನಡಪರ ಸಂಘಗಳ ಮೇಲೆ ಬೇಕೆಂದೇ ಹಿಂದಿನ ಸರ್ಕಾರ ಕೇಸ್ ಹಾಕಿದೆ; ಅದನ್ನೂ ಹಿಂಪಡೆಯಲಾಗುವುದು’
ಆರಗ ಜ್ಞಾನೇಂದ್ರ
TV9 Web
| Edited By: |

Updated on:Aug 10, 2021 | 3:16 PM

Share

ಬೆಂಗಳೂರು: ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಹಾಕಲಾಗಿರುವ ಸುಳ್ಳು ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕೋಟ ಶ್ರೀನಿವಾಸ್ ಪೂಜಾರಿ ಪತ್ರದ ವಿಚಾರವಾಗಿ ಇಂದು (ಆಗಸ್ಟ್ 10) ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ ಪತ್ರ ಕೊಟ್ಟಿದ್ದಾರೆ. ಆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸುತ್ತೇನೆ. ರೈತರು,ಕನ್ನಡ ಪರ ಸಂಘಗಳ ಮೇಲೆ ಕೂಡ ಬೇಕು ಅಂತಲೇ ಹಿಂದಿನ ಸರ್ಕಾರ ಕೇಸ್ ಹಾಕಿದ್ದಾರೆ. ಅದನ್ನು ಹಿಂಪಡೆಯುವಂತೆಯೂ ಆದೇಶ ನೀಡಲಾಗುವುದು ಎಂದು ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಅಪ್ಪಚ್ಚು ರಂಜನ್ ಸಚಿವ ಸ್ಥಾನ ಬೇಡಿಕೆ ವಿಚಾರವಾಗಿ ಅವರು ಮಾತನಾಡಿದ್ದಾರೆ. ಆ ಬಗ್ಗೆ ಗೊಂದಲ ಏನಿಲ್ಲ. ಸ್ಥಾನ ಖಾಲಿ ಇದೆ. ಅದಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅವ್ರು ಕೂಡ ಹಿರಿಯರಿದ್ದಾರೆ ಎಂದು ಜ್ಞಾನೇಂದ್ರ ತಿಳಿಸಿದ್ದಾರೆ. ಸಚಿವ ಹಾಗೂ ಮತ್ತೋರ್ವ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈಶ್ವರಪ್ಪ ಯಾವ ಹಿನ್ನೆಲೆಯಲ್ಲಿ ಆ ಹೇಳಿಕೆ ಕೊಟ್ಟಿದ್ದಾರೆ ಅಂತ ಇವತ್ತು ಸಿಎಂ ಬೊಮ್ಮಾಯಿ ಕೂಡ ಹೇಳಿದ್ದಾರೆ. ಪಕ್ಷದವರ, ಸಂಘಟನೆಯವರ, ಕಗ್ಗೊಲೆಯಾಗಿದೆ. ಹಿಂಸೆಯಾಗಿದೆ. ಆ ನೋವಿನ ಹಿನ್ನೆಲೆಯಲ್ಲಿ ಈಶ್ವರಪ್ಪ ಹಾಗೆ ಹೇಳಿದ್ದಾರೆ. ಅದನ್ನು ಉದ್ದ ಮಾಡೋದು ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬಿಜೆಪಿ, ಸಂಘ ಪರಿವಾರ ಕಾರ್ಯಕರ್ತರ ಮೇಲೆ ದುರುದ್ದೇಶಪೂರ್ವಕವಾಗಿ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಿನ್ನೆಯಷ್ಟೇ (ಆಗಸ್ಟ್ 9) ಪತ್ರದ ಮುಖೇನ ಮನವಿ ಮಾಡಿದ್ದರು. ಈ ಸಂಬಂಧ, ಇಂದು ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿ ಮಾತನಾಡಿದ್ದಾರೆ. ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರ ಮೇಲೆ ಹಾಕಿರುವ ದುರುದ್ದೇಶಪೂರಿತ ದೂರುಗಳ ಬಗ್ಗೆ ಸಿಎಂ ಬೊಮ್ಮಾಯಿ ಜೊತೆಗೆ ಚರ್ಚಿಸಲಾಗುವುದು. ಹಾಗೆಯೇ, ರೈತರು ಮತ್ತು ಕನ್ನಡಪರ ಸಂಘಗಳ ಮೇಲೆ, ಹಿಂದಿನ ಸರ್ಕಾರ ಬೇಕೆಂದೇ ಹಾಕಿರುವ ಪ್ರಕರಣಗಳನ್ನು ಕೂಡ ಹಿಂಪಡೆಯುವಂತೆ ಆದೇಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದಲೂ ಶುಭಾಶಯ ಕೋರಿ ಪೋಸ್ಟರ್, ಫುಲ್ ವೈರಲ್

(Home Minister Araga Jnanendra on False Cases against Kannada Organization People KS Eshwarappa Statement)

Published On - 2:52 pm, Tue, 10 August 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ