AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು ನೀಡುತ್ತಿದ್ದ ಸಮನ್ಸ್ ಖಾಸಗೀಕರಣಕ್ಕೆ ಚಿಂತನೆ: ಆರಗ ಜ್ಞಾನೇಂದ್ರ

Araga Jnanendra: ಪೋಸ್ಟ್ ಆಫೀಸ್​ಗಳಿಗೆ ಹಣಕೊಟ್ಟು ಮಾಡಿಸಬೇಕು ಎಂದಿದೆ. ಪೊಲೀಸರಿಗೆ ಎಲ್ಲಾ ರೀತಿಯ ಟ್ರೇನಿಂಗ್ ಕೊಟ್ಟಿರುತ್ತೇವೆ. ಅವರನ್ನ ಪೋಸ್ಟ್​​ಮ್ಯಾನ್ ಕೆಲಸಕ್ಕೆ ಹಚ್ಚೋದು ಸರಿಯಲ್ಲ ಎಂದು ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಪೊಲೀಸರು ನೀಡುತ್ತಿದ್ದ ಸಮನ್ಸ್ ಖಾಸಗೀಕರಣಕ್ಕೆ ಚಿಂತನೆ: ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ (ಸಂಗ್ರಹ ಚಿತ್ರ)
TV9 Web
| Edited By: |

Updated on: Sep 08, 2021 | 6:00 PM

Share

ಬೆಳಗಾವಿ: ಪೊಲೀಸರು ನೀಡುತ್ತಿದ್ದ ಸಮನ್ಸ್ ಖಾಸಗೀಕರಣಕ್ಕೆ ಚಿಂತನೆ ನಡೆಸಲಾಗಿರುವ ಬಗ್ಗೆ ಸುಳಿವು ಲಭ್ಯವಾಗಿದೆ. ಈ ಬಗ್ಗೆ, ಬೆಳಗಾವಿ ಜಿಲ್ಲೆ ಕಿತ್ತೂರಲ್ಲಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಬೇರೆ ಏಜೆನ್ಸಿ ಮೂಲಕ ಸಮನ್ಸ್ ಕೊಡಿಸುವ ಚಿಂತನೆ ಇದೆ. ಇದರಿಂದ ಇಲಾಖೆಯಲ್ಲಿ ಮ್ಯಾನ್ ಪವರ್ ಉಳಿಯುತ್ತದೆ. ಇಲ್ಲದಿದ್ರೆ ಪೋಸ್ಟ್ ಆಫೀಸ್ ಮೂಲಕ ಮಾಡುವ ಚಿಂತನೆ ಇದೆ. ಪೋಸ್ಟ್ ಆಫೀಸ್​ಗಳಿಗೆ ಹಣಕೊಟ್ಟು ಮಾಡಿಸಬೇಕು ಎಂದಿದೆ. ಪೊಲೀಸರಿಗೆ ಎಲ್ಲಾ ರೀತಿಯ ಟ್ರೇನಿಂಗ್ ಕೊಟ್ಟಿರುತ್ತೇವೆ. ಅವರನ್ನ ಪೋಸ್ಟ್​​ಮ್ಯಾನ್ ಕೆಲಸಕ್ಕೆ ಹಚ್ಚೋದು ಸರಿಯಲ್ಲ ಎಂದು ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ನಟಿ, ಸ್ಟಾರ್ ನಿರೂಪಕಿ​ ಅನುಶ್ರೀ ಡ್ರಗ್ಸ್​ ಕೇಸ್​ ವಿಚಾರವಾಗಿ ಆರಗ ಜ್ಞಾನೇಂದ್ರ ಧಾರವಾಡದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಆ ಬಗ್ಗೆ ಈಗಾಗಲೇ ವಿಚಾರಣೆ ಆಗಿದೆ, ಚಾರ್ಜ್​​ಶೀಟ್ ಸಹ​ ಸಲ್ಲಿಕೆ ಆಗಿದೆ. ಮತ್ತೇನಾದರೂ ಇದ್ದರೆ ಪುನಃ ಕೇಸ್​​ನ ವಿಚಾರಣೆ ಆಗುತ್ತೆ. ಕೋರ್ಟ್ ಹಾಗೂ ಪೊಲೀಸರು ಹೆಸರು ಪ್ರಸ್ತಾಪಿಸಿಲ್ಲ. ಮಧ್ಯದಲ್ಲಿ ಯಾರೋ ಹೆಸರು ಪ್ರಸ್ತಾಪ ಮಾಡುತ್ತಿದ್ದಾರೆ. ಅದನ್ನು ತೆಗೆದುಕೊಂಡು ನಾವೇನು ಮಾಡಬೇಕು? ಆ ಬಗ್ಗೆ ನಾನು ಪ್ರತಿಕ್ರಿಯಿಸಲು ಆಗುತ್ತಾ ಎಂದು ಆರಗ ಜ್ಞಾನೇಂದ್ರ ಪ್ರಶ್ನಿಸಿದ್ದಾರೆ.

ಕರಾವಳಿ ಪ್ರದೇಶದಲ್ಲಿ ತುಂಬಾ ವಿಚಿತ್ರ ಶಕ್ತಿಗಳು ತಲೆ ಎತ್ತುವ ಸ್ಥಿತಿಯಿದೆ. ಗೋವಾದಿಂದ ಕೇರಳದ ಗಡಿಯವರೆಗೆ ಕಟ್ಟೆಚ್ಚರ ವಹಿಸಬೇಕಿದೆ. ಮೀನುಗಾರರ ವೇಷದಲ್ಲಿ ಬಂದು ಮುಂಬೈನಲ್ಲಿ ನಡೆಸಿದ ಕೃತ್ಯ ಎಲ್ಲರಿಗೂ ಗೊತ್ತಿದೆ. ಹೀಗಾಗಿ ಕರಾವಳಿ ಕಾವಲು ಪಡೆ ಇನ್ನಷ್ಡು ಬಲಗೊಳ್ಳಬೇಕು. ಕರಾವಳಿ ಕಾವಲು ಪಡೆ ಸ್ಪೀಡ್ ಬೋಟ್​ಗಳನ್ನು ಇನ್ನಷ್ಟು ಒದಗಿಸಲು ಸಿದ್ದರಾಗಿದ್ದೇವೆ. ದೇಶ ವಿರೋಧಿ ಕೃತ್ಯ, ದಂದೆ ನಡೆಸುವವರ ಮೇಲೆ ಕಣ್ಗಾವಲು ಇಡಲು ಹೇಳಿದ್ದೇವೆ. ಪಟ್ಟಣ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥಿತ ಭಂಗ ಮಾಡುವ ರೌಡಿ ಪಡೆಗಳನ್ನು ಮೆಟ್ಟಿ ನಿಲ್ಲಬೇಕು ಎಂದು ತಿಳಿಸಿದ್ದೇನೆ. ಜನರ ನೆಮ್ಮದಿ ಬದುಕಿಗೆ ತೊಂದರೆ ಉಂಟುಮಾಡುವ ದುಷ್ಕರ್ಮಿಗಳನ್ನು ಮಟ್ಟ ಹಾಕಲು ಸೂಚಿಸಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಈ ಮೊದಲು ತಿಳಿಸಿದ್ದರು.

ಅನೇಕ ಮಾನದಂಡಗಳನ್ನು ಆಧರಿಸಿ ರೌಡಿ ಶೀಟರ್ ಪಟ್ಟಿಯನ್ನು ಪರಾಮರ್ಶೆ ಮಾಡುತ್ತೇವೆ. ರಾಜ್ಯದಾದ್ಯಂತ ಸಣ್ಣಪುಟ್ಟ ಚಳುವಳಿಗಾರರ ಮೇಲೆ ರೌಡಿಶಿಟ್ ಹಣೆ ಪಟ್ಟಿ ಕಟ್ಟಿದ್ದಾರೆ. ಇದರಲ್ಲಿ ಯಾವುದೇ ಬೇರೆ ಉದ್ದೇಶವಿಲ್ಲ. ಜತೆಗೆ ರಾಜಕೀಯ ಕಾರಣಕ್ಕೂ ನಾವು ಹೀಗೆ ಮಾಡಿಲ್ಲ. ರೌಡಿ ಶೀಟರ್ ಮಾನದಂಡದ ಆಧಾರದ ಮೇಲೆ ಪಟ್ಟಿಯನ್ನು ಪರಾಮರ್ಶನೆ ಮಾಡುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಆರಗ ಜ್ಞಾನೇಂದ್ರ, ಸಿಟಿ ರವಿ ಡ್ರಗ್ಸ್ ತಗೊಂಡಂತೆ ಮಾತಾಡ್ತಾರೆ; ಅವರ ಕೂದಲನ್ನು ಪರೀಕ್ಷೆಗೆ ಕಳಿಸಬೇಕು: ಶಿವರಾಜ್ ತಂಗಡಗಿ

ಇದನ್ನೂ ಓದಿ: ಕರ್ನಾಟಕ ಭೂ ಕಂದಾಯ ಕಾಯಿದೆಯಡಿ ಆದಾಯ ಮಿತಿಗೆ ತಿದ್ದುಪಡಿ ತರಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ