AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘20 ವರ್ಷಗಳ ಹಿಂದೆ ಅಕ್ರಮ ಗಣಿಗಾರಿಕೆ ಮಾಡಿದ್ದವನಿಗೆ ಲೈಸೆನ್ಸ್ ನವೀಕರಣ ಮಾಡಿಕೊಟ್ಟಿದ್ದಾರೆ.. ಶೇಮ್ ಶೇಮ್ ಕಾಂಗ್ರೆಸ್’

ಇದಕ್ಕೆಲ್ಲ ನೀವೇ ಕಾರಣ ಎಂದ ಬಸವರಾಜ ಬೊಮ್ಮಾಯಿ ಅಕ್ರಮ ಗಣಿಗಾರಿಕೆ ಮಾಡಿದವನಿಗೆ ಲೈಸೆನ್ಸ್ ನವೀಕರಣ ಮಾಡಿದ್ದಾರೆ. 20 ವರ್ಷಗಳ ಹಿಂದೆ ಅಕ್ರಮ ಗಣಿಗಾರಿಕೆ ಮಾಡಿದ್ದ. ಅಂತಹವನಿಗೆ ಲೈಸೆನ್ಸ್ ನವೀಕರಣ ಮಾಡಿಕೊಟ್ಟಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

‘20 ವರ್ಷಗಳ ಹಿಂದೆ ಅಕ್ರಮ ಗಣಿಗಾರಿಕೆ ಮಾಡಿದ್ದವನಿಗೆ ಲೈಸೆನ್ಸ್ ನವೀಕರಣ ಮಾಡಿಕೊಟ್ಟಿದ್ದಾರೆ.. ಶೇಮ್ ಶೇಮ್ ಕಾಂಗ್ರೆಸ್’
ಬಸವರಾಜ ಬೊಮ್ಮಾಯಿ
KUSHAL V
|

Updated on:Feb 02, 2021 | 7:37 PM

Share

ಬೆಂಗಳೂರು: ಯಾರು ಸತ್ಯಹರಿಶ್ಚಂದ್ರರು? ಯಾರ ಕಾಲದಲ್ಲಿ ಏನೇನು ಆಗಿದೆ ಎಂದು ಜನರಿಗೆ ಗೊತ್ತಿದೆ ಎಂದು ವಿಧಾನ ಪರಿಷತ್​ನಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿವಮೊಗ್ಗ ತಾಲೂಕಿನ ಹುಣಸೋಡು ಬಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರು ಪ್ರತಿಕ್ರಿಯಿಸಿದ್ದಾರೆ.

ಇದಕ್ಕೆಲ್ಲ ನೀವೇ ಕಾರಣ ಎಂದ ಬಸವರಾಜ ಬೊಮ್ಮಾಯಿ ಅಕ್ರಮ ಗಣಿಗಾರಿಕೆ ಮಾಡಿದವನಿಗೆ ಲೈಸೆನ್ಸ್ ನವೀಕರಣ ಮಾಡಿದ್ದಾರೆ. 20 ವರ್ಷಗಳ ಹಿಂದೆ ಅಕ್ರಮ ಗಣಿಗಾರಿಕೆ ಮಾಡಿದ್ದ. ಅಂತಹವನಿಗೆ ಲೈಸೆನ್ಸ್ ನವೀಕರಣ ಮಾಡಿಕೊಟ್ಟಿದ್ದಾರೆ. ನಿಮ್ಮ ಅವಧಿಯಲ್ಲಿ ಹಾಸನದಲ್ಲಿ ಕಲ್ಲು ಸ್ಫೋಟದ ವೇಳೆ ಜನರು ಮೃತಪಟ್ಟಾಗ ನೀವು ನ್ಯಾಯಾಂಗ ತನಿಖೆಗೆ ಕೊಡ್ಲಿಲ್ಲ. ಈಗ ಕೇಳ್ತಾರೆ. ಎಲ್ಲದಕ್ಕೂ ಕಾರಣ ಕಾಂಗ್ರೆಸ್​ನವರೇ. ಶೇಮ್ ಶೇಮ್ ಕಾಂಗ್ರೆಸ್ ಎಂದು ಹೇಳಿದರು.

ಜೊತೆಗೆ, ಗಣಿ ಮಾಲೀಕ ಕುಲಕರ್ಣಿ ವಿರುದ್ಧ ಹಿಂದೆಯೂ ಕೇಸ್ ಆಗಿದೆ. ಬಿಡದಿಯಲ್ಲಿ 16,400 ಜಿಲೆಟಿನ್ ಕಡ್ಡಿ ಸೀಜ್ ಮಾಡಿದ್ದೇವೆ. ಇದಲ್ಲದೆ, 18‌ ಜಿಲ್ಲೆಗಳಲ್ಲಿ ಜಿಲೆಟಿನ್ ಕಡ್ಡಿ ಜಪ್ತಿ ಮಾಡಿದ್ದೇವೆ. ಇನ್ಮುಂದೆ ಲೈಸೆನ್ಸ್​ ಇದ್ದರಷ್ಟೇ ಸ್ಫೋಟಕ ಸಾಗಿಸಲು ಅವಕಾಶ ಕೊಡುತ್ತೇವೆ ಎಂದು ಹೇಳಿದರು.

ನಾವು ಸ್ಫೋಟ ಪ್ರಕರಣದ ತನಿಖೆ ಇಲ್ಲಿಗೆ ಮುಗಿಸುವುದಿಲ್ಲ. ಮೂಲಕ್ಕೆ ಹೋಗುತ್ತೇವೆ. ಎಷ್ಟೇ ಪ್ರಭಾವಿಯಾದರೂ ಬಿಡಲ್ಲ. ಹುಣಸೋಡು ಕೇಸ್​ನ ಮಧ್ಯಂತರ ವರದಿ ಕೊಡಲು ಹೇಳಿದ್ದೇನೆ . ಮಧ್ಯಂತರ ವರದಿ ಆಧರಿಸಿ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸುತ್ತೇವೆ. ವರದಿ ಬಂದ 24 ಗಂಟೆಗಳಲ್ಲಿ ಕ್ರಮ ಕೈಗೊಳ್ಳುತ್ತೇವೆ. ಪೂರ್ಣ ವರದಿಗಾಗಿ ನಾನು ಕಾಯುತ್ತಾ ಕೂರುವುದಿಲ್ಲ ಎಂದು ಬೊಮ್ಮಾಯಿ ಹೇಳಿದರು.

ಹುಣಸೋಡು ಸ್ಫೋಟ ಕೇಸ್​ NIAಗೆ ಕೊಡುವ ಅಗತ್ಯವಿಲ್ಲ. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ ಎಂದು ವಿಧಾನಪರಿಷತ್​ನಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಸ್ಯಾಂಡಲ್​ವುಡ್​ಗೆ ಶಾಕ್​ ಕೊಟ್ಟ ರಾಜ್ಯ ಸರ್ಕಾರ: ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ

Published On - 7:35 pm, Tue, 2 February 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?