AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿಗೆ ನೋಟಿಸ್ ನೀಡುವ ಬಗ್ಗೆ ಪೊಲೀಸರು ನಿರ್ಧರಿಸ್ತಾರೆ -ಬಸವರಾಜ್ ಬೊಮ್ಮಾಯಿ

ಡಿಕೆಶಿಗೆ ನೋಟಿಸ್ ನೀಡುವ ಬಗ್ಗೆ ಪೊಲೀಸರು ನಿರ್ಧರಿಸ್ತಾರೆ. ಪ್ರಕರಣದಲ್ಲಿ ಆಗ್ತಿರುವ ತಿರುವುಗಳಿಂದ ಎಸ್​ಐಟಿ ತನಿಖೆ ವಿಚಲಿತಗೊಳ್ಳುವುದಿಲ್ಲ ಅಂತಾ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಡಿಕೆಶಿಗೆ ನೋಟಿಸ್ ನೀಡುವ ಬಗ್ಗೆ ಪೊಲೀಸರು ನಿರ್ಧರಿಸ್ತಾರೆ -ಬಸವರಾಜ್ ಬೊಮ್ಮಾಯಿ
ಬಸವರಾಜ್ ಬೊಮ್ಮಾಯಿ
Follow us
KUSHAL V
|

Updated on:Mar 26, 2021 | 9:40 PM

ಬೆಂಗಳೂರು: ಸಿಡಿಯಲ್ಲಿದ್ದ ಲೇಡಿ ಮಾತಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಲೇಡಿ ಮಾತಾಡಿದ ಆಡಿಯೋ ಮಾಧ್ಯಮಗಳಲ್ಲಿ ಬಂದಿದೆ. ಈ ಬಗ್ಗೆ ಎಸ್‌ಐಟಿ ಕಾನೂನು ರೀತಿ ತನಿಖೆ ನಡೆಸಲಿದೆ. ನಾನು ಯಾರ ಮೇಲೂ ಒತ್ತಡ ಹಾಕಲ್ಲ. ಯುವತಿಗೆ ಭದ್ರತೆ ನೀಡಲು ಸಿದ್ಧ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದರು. ಎಲ್ಲಾ ದೂರುಗಳ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

ಈ ಮಧ್ಯೆ, ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿ ಎಸ್ಐಟಿ ವಿಚಾರಣೆಗೆ ಒಳಪಡಿಸುತ್ತಾ ಎಂಬ ಪ್ರಶ್ನೆಗೆ ಗೃಹ ಸಚಿವ ಬೊಮ್ಮಯಿ ಪ್ರತಿಕ್ರಿಯಿಸಿದ್ದಾರೆ. ಅದು ಪೊಲೀಸರು ಮಾಡುವ ಕೆಲಸ. ವಿಚಾರಣೆ ಮಾಡೋದು ಬಿಡೋದು ಎಸ್​ಐಟಿ ಅವರಿಗೆ ಬಿಟ್ಟಿದ್ದು. ಡಿಕೆಶಿಗೆ ನೋಟಿಸ್ ನೀಡುವ ಬಗ್ಗೆ ಪೊಲೀಸರು ನಿರ್ಧರಿಸ್ತಾರೆ. ಪ್ರಕರಣದಲ್ಲಿ ಆಗ್ತಿರುವ ತಿರುವುಗಳಿಂದ ಎಸ್​ಐಟಿ ತನಿಖೆ ವಿಚಲಿತಗೊಳ್ಳುವುದಿಲ್ಲ ಅಂತಾ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

‘ಧ್ವನಿ ಹೊಂದಾಣಿಕೆ ಆದರೆ ಪ್ರಕರಣ ಇತ್ಯರ್ಥ ಆದಂತೆ’ ಇತ್ತ, ಧ್ವನಿ ಹೊಂದಾಣಿಕೆ ಆದರೆ ಪ್ರಕರಣ ಇತ್ಯರ್ಥ ಆದಂತೆ. ಯುವತಿ ಕರೆತಂದು ಧ್ವನಿ ಟೆಸ್ಟ್​ ಮಾಡಿಸಬೇಕು ಎಂದು ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಗೃಹ ಸಚಿವರ ಭೇಟಿ ಬಳಿಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಆಡಿಯೋ ರಿಲೀಸ್​ ಆಗಿದೆ ಎಂದು ಫೋನ್​ ಬಂದಿದೆ. ನಾನು ಆಡಿಯೋವನ್ನು ಕೇಳಿಲ್ಲ, ಕೇಳುತ್ತೇನೆ. ಎಸ್​​ಐಟಿ ತನಿಖೆ ಮಾಡುತ್ತಿದೆ, ತನಿಖೆಯಲ್ಲಿ ಗೊತ್ತಾಗುತ್ತದೆ. ಆ ಮಹಾನಾಯಕ ಯಾರು ಎಂದು ರಮೇಶ್​ ಹೇಳಬೇಕು. ಇಲ್ಲದಿದ್ದರೆ ಆ ವಿಡಿಯೋದಲ್ಲಿರುವ ಯುವತಿ ಹೇಳಬೇಕು. ಯುವತಿ ಕರೆತಂದು ತನಿಖೆ ಮಾಡಿದರೆ ಗೊತ್ತಾಗುತ್ತದೆ. ನಾನು ಗೃಹ ಸಚಿವರ ಜೊತೆಗೆ ಇದರ ಬಗ್ಗೆ ಮಾತನಾಡಿಲ್ಲ. ಬೆಳಗಾವಿ ಚುನಾವಣೆ ವಿಚಾರವಾಗಿ ಭೇಟಿ ಮಾಡಿದ್ದೇನೆ. ಸದ್ಯಕ್ಕೆ ರಮೇಶ್ ಜಾಮೀನು ತೆಗೆದುಕೊಳ್ಳಲ್ಲ ಅಂದಿದ್ದಾರೆ. ವಕೀಲರ ಜೊತೆ ಚರ್ಚೆ ಮಾಡಿ ಮುಂದಿನ ಹೋರಾಟ ನಡೆಸುತ್ತೇವೆ ಎಂದು ಗೃಹ ಸಚಿವರ ಭೇಟಿ ಬಳಿಕ ಶಾಸಕ ಬಾಲಚಂದ್ರ ಹೇಳಿದರು.

ಇದನ್ನೂ ಓದಿ: CD ಪ್ರಕರಣದಲ್ಲಿ ಡಿಕೆಶಿ ಹೆಸರು ಹೊರಬರುತ್ತೆ ಎಂದು ಮೊದಲೇ ಮಾಹಿತಿ ಪಡೆದುಕೊಂಡಿದ್ರಾ ಸಿದ್ದರಾಮಯ್ಯ?

Published On - 9:27 pm, Fri, 26 March 21

ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ