AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: ಇದು ಪೂರ್ವ ನಿಯೋಜಿತ ಕೃತ್ಯ ಎಂದು ಒಪ್ಪಿಕೊಂಡ ಗೃಹ ಸಚಿವ

Maddur stone pelting: ಸಕ್ಕರೆ ನಾಡು ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಅಹಿತಕರ ಘಟನೆ ನಡೆದಿದೆ. ಕಳೆದ ವರ್ಷದ ನಾಗಮಂಲದಲ್ಲಿ ಗಲಭೆಯಾಗಿತ್ತು. ಈ ಬಾರಿದ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಇನ್ನು ಈ ಬಗ್ಗೆ ಮುಖ್ಯಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಯಿಸಿದ್ದು, ಏನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಮದ್ದೂರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ: ಇದು ಪೂರ್ವ ನಿಯೋಜಿತ ಕೃತ್ಯ ಎಂದು ಒಪ್ಪಿಕೊಂಡ ಗೃಹ ಸಚಿವ
Maddur Stone Pelting
ರಮೇಶ್ ಬಿ. ಜವಳಗೇರಾ
|

Updated on:Sep 08, 2025 | 2:53 PM

Share

ತುಮಕೂರು, ಬೆಂಗಳೂರು/ಮಂಡ್ಯ, (ಸೆಪ್ಟೆಂಬರ್ 08): ಇದು ಶಾಂತಿಪ್ರಿಯನಾಗಿರೋ ಗಣೇಶನ ವಿಸರ್ಜನಾ ಮೆರವಣಿಗೆ (Ganesh idol immersion) ವೇಳೆ ಮಂಡ್ಯ (Mandya) ಜಿಲ್ಲೆಯ ಮದ್ದೂರಿನಲ್ಲಿ (Maddur )ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಂತವಾಗಿದ್ದ ಮದ್ದೂರಲ್ಲಿ ಕಿಡಿಗೇಡಿಗಳು ದ್ವೇಷದ ಕಿಡಿ ಹೊತ್ತಿಸಿದ್ದಾರೆ. ಹೌದು… ನಿನ್ನೆ (ಸೆಪ್ಟೆಂಬರ್ 08) ರಾತ್ರಿ ಮದ್ದೂರಲ್ಲಿ ಗಣೇಶ ಮೂರ್ತಿ ಮೆರವಣಿಗೆ ಸಮಯದಲ್ಲಿ ಕಲ್ಲು ತೂರಾಟ (Maddur stone pelting) ಮಾಡಿ ಕಿಡಿಗೇಡಿಗಳ ದುಷ್ಕೃತ್ಯದಿಂದ ಇಡೀ ಪಟ್ಟಣವೇ ಉದ್ವಿಗ್ನಗೊಂಡಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಫ್ರೀ ಪ್ಲಾನ್ ಮಾಡಿ ಕಲ್ಲು ತೂರಾಟ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ. ಈ ಸಂಬಂಧ ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ, ಜೆಡಿಎಸ್​ ನಾಯರ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಇದರ ಮಧ್ಯೆ ಗೃಹ ಸಚಿವ ಪರೇಶ್ವರ್ ಪ್ರತಿಕ್ರಿಯಿಸಿ, ಕಲ್ಲು ತೂರಾಟ ಪೂರ್ವ ನಿಯೋಜಿತ ಕೃತ್ಯ ಎನ್ನುವ ಮಾಹಿತಿ ಇದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಕ್ರಮಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಈ ಕಲ್ಲು ತೂರಾಟ ಪ್ರೀ ಪ್ಲ್ಯಾನ್ ಎಂದು ಸ್ಥಳೀಯರು ಆರೋಪಿಸಿದ್ದು, ಇದೀಗ ಗೃಹ ಸಚಿವರು ಸಹ ಇದು ಪೂರ್ವ ನಿಯೋಜಿತ ಕೃತ್ಯ ಎಂದು ಒಪ್ಪಿಕೊಂಡಿದ್ದಾರೆ.

ಪ್ರಕರಣ ಸಂಬಂಧ ಇಂದು(ಸೆಪ್ಟೆಂಬರ್ 08) ತುಮಕೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ನಿನ್ನೆ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿದೆ. ಪ್ರಕರಣ ಸಂಬಂಧ 20ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತರು ಮೆರವಣಿಗೆ ಮಾಡಿದ್ದಾರೆ. ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಸೂಚಿಸಲಾಗಿದ್ದು, ಪೊಲೀಸರು ಶಾಂತಿ ಕಾಪಾಡುವ ಕೆಲಸ ಮಾಡುತ್ತಾರೆ. ಒಂದು ವೇಳೆ ಪರಿಸ್ಥಿತಿ ಕೈಮೀರಿದರೆ ಪೊಲೀಸರು ಕಾನೂನು ಕ್ರಮಕೈಗೊಳ್ಳುತ್ತಾರೆ. ಕಲ್ಲು ತೂರಾಟ ಪೂರ್ವ ನಿಯೋಜಿತ ಕೃತ್ಯ ಅನ್ನೋ ಮಾಹಿತಿ ಇದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಕ್ರಮಕೈಗೊಳ್ಳುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಮದ್ದೂರು ಉದ್ವಿಗ್ನ: ಕಲ್ಲು ತೂರಿದವರ ವಿರುದ್ಧ ಭುಗಿಲೆದ್ದ ಆಕ್ರೋಶ, ಪ್ರತಿಭಟನೆ ವೇಳೆ ಮತ್ತೆ ಕಲ್ಲು ತೂರಾಟ, ಲಾಠಿಚಾರ್ಜ್

ಪ್ರಕರಣದ ಬಗ್ಗೆ ಸಿಎಂ ಹೇಳಿದ್ದೇನು?

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಮಸೀದಿ ಮುಂದೆ ಮೆರವಣಿಗೆ ಹೋಗುವಾಗ ಗಲಾಟೆ ಆಗಿದೆ. ಗುಂಪು ಕಟ್ಟಿಕೊಂಡು ಗಲಾಟೆ ಮಾಡಲು ಶುರು ಮಾಡಿದ್ದಾರೆ. ಹಾಗಾಗಿ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಕಲ್ಲು ತೂರಾಟ ಕೇಸ್ ​ನಲ್ಲಿ 21 ಆರೋಪಿಗಳನ್ನು ಬಂಧಿಸಲಾಗಿದೆ. ಹಿಂದೂ ಆಗಲಿ, ಮುಸ್ಲಿಂ ಆಗಲಿ ಯಾರೇ ತಪ್ಪು ಮಾಡಿದರೂ ಕ್ರಮವಾಗುತ್ತೆ ಎಮದು ತಿಳಿಸಿದರು.

ಇದನ್ನೂ ಓದಿ
Image
ಮದ್ದೂರು ಕಲ್ಲು ತೂರಾಟ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ HDK ಆಗ್ರಹ​
Image
ಮಸೀದಿ ಕಡೆಯಿಂದ ಕಲ್ಲೆಸೆತ, 21 ಮಂದಿ ಮುಸ್ಲಿಮರ ಬಂಧನ: ಸಚಿವ ಚಲುವರಾಯಸ್ವಾಮಿ
Image
ನಾವೇನು ಪಾಕಿಸ್ತಾನದಲ್ಲಿದ್ದೇವಾ? ಮದ್ದೂರು ಗಲಭೆ ಬಗ್ಗೆ ಅಶೋಕ್ ವಾಗ್ದಾಳಿ
Image
ಮಂಡ್ಯ ಮದ್ದೂರಿನಲ್ಲಿ ಮತ್ತೆ ಕಲ್ಲು ತೂರಾಟ: ಲಾಠಿಚಾರ್ಜ್

ಸುಳ್ಳು ಹೇಳುವುದರಲ್ಲಿ ಬಿಜೆಪಿಗರು ನಿಸ್ಸೀಮರು. ಉಸ್ತುವಾರಿ ಸಚಿವರು ಅಲ್ಲಿಗೆ ಹೋಗುತ್ತಿದ್ದಾರೆ. ಅವರ ಕೊಟ್ಟು ಮೇಲೆ ಮುಂದಿನ ಕ್ರಮ ಆಗುತ್ತೆ. ಗಲಾಟೆಗಳು ಎಲ್ಲೂ ನಡೆದಿಲ್ಲ. ಮದ್ದೂರಿನಲ್ಲಿ ಮಾತ್ರ ನಡೆದಿದೆ. ಈ ವರ್ಷ ನಾಗಮಂಗಲದಲ್ಲಿ‌ ಆಗಿಲ್ಲ. ಇದು ರಾಜಕೀಯ ಪಕ್ಷದ ಕೆಲಸ ಅಲ್ಲ. ಎಲ್ಲೆಲ್ಲಿ‌ ಗಲಾಟೆ ಆಗಿದೆ? ಎಂದು ಪ್ರಶ್ನಿಸಿದ ಸಿಎಂ, ಸಮಾಜದಲ್ಲಿ ನೆಮ್ಮದಿ‌ಕೆಡಿಸಿದ್ದೇ ಬಿಜೆಪಿರುವರು.ಇನ್ನು ಕುಮಾರಸ್ವಾಮಿ ಪಕ್ಷ ಪಥನದ ಹಾದಿ‌ಹಿಡಿಯದಂತೆ ನೋಡಿಕೊಳ್ಳಲಿ ಎಂದು ಟಾಂಗ್ ಕೊಟ್ಟರು.

ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹೇಳಿದ್ದಿಷ್ಟು

ಇನ್ನು ಪ್ರಕರಣ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಅವರು ಟಿವಿ9ಗೆ ಪ್ರತಿಕ್ರಿಯಿಸಿ,ರಾಜ್ಯದಲ್ಲಿ ಈಗಾಗಲೇ 77 ಸಾವಿರ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಮಾಡಿ 74 ಸಾವಿರ ಮೂರ್ತಿಗಳನ್ನ ವಿಸರ್ಜನೆ ಮಾಡಲಾಗಿದೆ. ಮದ್ದೂರು ಪಟ್ಟಣದಲ್ಲಿ ಮಸೀದಿ ಮುಂದೆ ಮೆರವಣಿಗೆ ವೇಳೆ ಕಲ್ಲು ತೂರಾಟ ಆರೋಪ ಬಂದಿದೆ. ಪೊಲೀಸರು ‌ಈಗಾಗಲೇ ನಿಯಂತ್ರಣ ಮಾಡಿದ್ದಾರೆ. 14 ಹೆಚ್ಚು ಜನರನ್ನ ಈಗಾಗಲೇ ಬಂಧಿಸಲಾಗಿದೆ. ಆರು ಜನರ ಬಂಧನ ಪ್ರಕ್ರಿಯೆ ನಡೆಯುತ್ತಿದೆ. ಇವತ್ತು ಮೆರವಣಿಗೆ ಮೇಲೆ ಕಾರ್ಯಕರ್ತರು ಇನ್ನೊಂದು ಧರ್ಮದ ಧಾರ್ಮಿಕ ಸ್ಥಳಕ್ಕೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಲಾಠಿಚಾರ್ಜ್ ಮಾಡಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ಇದೇ ರೀತಿ ನಡೆದಿದೆ ಎಂದು ಹೇಳಲು ಸಾಧ್ಯವಿಲ್ಲ. ಪೊಲೀಸರು ಉದ್ದೇಶ ಪೂರ್ವಕವಾಗಿ ತಪ್ಪು ಮಾಡಿದ್ರೆ ಕ್ರಮ. ಮದ್ದೂರು ಪಟ್ಟಣದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಇದರ ಹಿಂದೆ ಯಾರಿದ್ದರೇ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Mon, 8 September 25