AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ

ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆಯಲ್ಲಿ ಅತ್ಯಂತ ಗಮನ ಸೆಳೆದಿರುವುದು ಗೃಹ ಇಲಾಖೆಯನ್ನು ಪ್ರಿಯಾಂಕ್‌ ಖರ್ಗೆ ಅವರಿಗೆ ನೀಡಲಾಗಿದ್ದು, ಇಂದು (ಜೂನ್ 05) ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದಾರೆ. ಬೆಂಗಳೂರು ಟ್ರಾಫಿಕ್​ ಸಮಸ್ಯೆ, ಮಹಿಳೆಯರ ಸುರಕ್ಷತೆ ಹಾಗೂ ಡ್ರಗ್ಸ್​ ಮಾಫಿಯಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
Priyank Kharge
ಪ್ರದೀಪ್​ ಚಿಕ್ಕಾಟಿ
| Edited By: |

Updated on: Jun 05, 2026 | 8:30 PM

Share

ಬೆಂಗಳೂರು, (ಜೂನ್ 05): ಗೃಹ ಸಚಿವರಾದ ಬಳಿಕ ಪ್ರಿಯಾಂಕ್ ಖರ್ಗೆ (Priyank Kharge) ಅವರು ಇಂದು (ಜೂನ್ 05) ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದರು. ಈ ವೇಳೆ ಬೆಂಗಳೂರು ಟ್ರಾಫಿಕ್​ ಸಮಸ್ಯೆ, ಮಹಿಳೆಯರ ಸುರಕ್ಷತೆ ಹಾಗೂ ಡ್ರಗ್ಸ್​ ಮಾಫಿಯಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ.  ಇನ್ನು ಸಭೆ ಬಳಿಕ ಮಾತನಾಡಿದ ಖರ್ಗೆ, ಕಾನೂನು ಎಲ್ಲರಿಗೂ ಒಂದೆ. ಯಾರೇ ಇದ್ರೂ ಕಾನೂನಿನ ಚೌಕಟ್ಟಿನಲ್ಲಿದ್ರೆ ಓಕೆ. ಅದನ್ನ ಮೀರಿ ಮಾಡಿದ್ರೆ ಕ್ರಮ ಕೈಗೊಳ್ಳುವುದು ಖಚಿತ ಎಂದು ಖಡಕ್ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಮುಖ್ಯಾಂಶಗಳು

  • ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ
  • ಗೃಹ ಸಚಿವರಾದ ಬಳಿಕ ಮೊಲದ ಇಲಾಖಾ ಸಭೆ ಮಾಡಿದ ಪ್ರಿಯಾಂಕ್
  • ಕಾನೂನು ಎಲ್ಲರಿಗೂ ಒಂದೇ, ಕಾನೂನು ಮೀರಿದರೆ ಕ್ರಮ ಎಂದ ನೂತನ ಗೃಹ ಸಚಿವ

ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದಲ್ಲಿ ನನಗೊಂದು ದೊಡ್ಡ ಜವಾಬ್ದಾರಿ ವಹಿಸಿದ್ದಾರೆ. ಗೃಹ ಇಲಾಖೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದೇನೆ. ಪರಮೇಶ್ವರ್ ಸಾಹೇಬರ ಕಾರ್ಯಕ್ರಮಗಳ ಬಗ್ಗೆ ಯಾವುದನ್ನು ಮುಂದುವರಿಸಬೇಕೆಂದು ಮಾಹಿತಿ ಪಡೆದಿದ್ದೇನೆ. ಬೆಂಗಳೂರು ಟ್ರಾಫಿಕ್​ ಸಮಸ್ಯೆ, ಮಹಿಳೆಯರ ಸುರಕ್ಷತೆ ಮತ್ತು ಡ್ರಗ್ಸ್​ ಮಾಫಿಯಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಜೊತೆಗೆ ಸಭೆಯಲ್ಲಿ ಕೆಲ ಸಲಹೆ ಸೂಚನೆಗಳನ್ನ ನೀಡಿದ್ದೇನೆ. ಕಾನೂನು ಎಲ್ಲರಿಗೂ ಒಂದೇ, ಕಾನೂನು ಮೀರಿದರೆ ಕ್ರಮ ಎಂದು ಹೇಳಿದರು.

ಇದನ್ನೂ ಓದಿ: ರಾಮಲಿಂಗಾರೆಡ್ಡಿಗೆ ಮಾತು ಕೊಟ್ಟಿದ್ದು ನಿಜ: ಖಾತೆ ಹಂಚಿಕೆ ಒಳ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್

ದ್ವೇಷ ಹುಟ್ಟಿಸುವ ಭಾಷಣ ಮಾಡಿದ್ರೆ ಕ್ರಮ

ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ಧಿ ವಿಚಾರದ ಬಗ್ಗೆ ಮಾತನಾಡಿ, ಐಟಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯಿಂದ ಚರ್ಚೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ದ್ವೇಷ ಹುಟ್ಟಿಸುವ ಹಾಗೆ ಭಾಷಣ ಮಾಡಿದ್ರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಸೋಷಿಯಲ್ ಮೀಡಿಯಾ ಬಗ್ಗೆ ಗಮನವಹಿಸಲಾಗುತ್ತಿದೆ. ಕಾನೂನಾತ್ಮಕವಾಗಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಆಗುತ್ತೆ ಎಂದು ಸ್ಪಷ್ಟಪಡಿಸಿದರು.

ರೌಡಿ ಪಡೆ ರಚನೆ ಮಾಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿರುವ ಬಗ್ಗೆ ಈಗಲೇ ಹೇಳುವುದಕ್ಕೆ ಆಗಲ್ಲ. ಈ ಯೋಜನೆ ಬಗ್ಗೆ ಬ್ಲೂ ಪ್ರಿಂಟ್ ರೆಡಿ ಮಾಡಬೇಕು. ಮುಂದಿನ ದಿನದಲ್ಲಿ ಈ ಬಗ್ಗೆ ಹೇಳುತ್ತೇವೆ ಎಂದು ಹೇಳಿದ ಖರ್ಗೆ,ವಿವಿಐಪಿ ಸಂಚಾರದ ವೇಳೆ ಜನರಿಗೆ ಸಮಸ್ಯೆ ಬಗ್ಗೆ ಇವತ್ತು ಚರ್ಚೆ ಮಾಡಿದ್ದೇವೆ. ಬೇರೆ ಏನಾದ್ರು ಮಾಡಬಹುದಾ ಗಮನವಹಿಸಲು ಹೇಳಿದ್ದೇನೆ. ಅದಕ್ಕೆ ಸ್ವಲ್ಪ ಸಮಯ ಹಿಡಿಯುತ್ತೆ ಎಂದು ತಿಳಿಸಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Pradeep Chikkati
Pradeep Chikkati

ಕ್ರೈಂ ವರದಿಗಾರನಾಗಿ ಟಿವಿ9 ಕನ್ನಡದಲ್ಲಿ ಕೆಲಸ

Read More
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!