AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿ ಐ ಪೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೊಡಗಿನ ಪೊಲೀಸ್ ಕಾನ್ಸ್‌ಟೇಬಲ್‌

ಗೋಣಿಕೊಪ್ಪಲು ಠಾಣೆ ವ್ಯಾಪ್ತಿಯಲ್ಲಿ ಕಾರಿನಲ್ಲಿ ಸಾಗಿದ್ದ ಸಿಜೋಮ್‌ ತಮಗೆ ಅರಿವಿಲ್ಲದೆ ತಮ್ಮ ಮೊಬೈಲ್ ಬೀಳಿಸಿ ಕೊಂಡಿದ್ದರು. ಅದು ಕಾನ್ಸ್‌ಟೇಬಲ್‌ ರಾಘವೇಂದ್ರ ಅವರಿಗೆ ಸಿಕ್ಕಿತ್ತು. ಹಾಗಾಗಿ ಠಾಣೆಗೆ ಬಂದು ಮೊಬೈಲ್ ಪಡೆಯುವಂತೆ ಸೂಚಿಸಿದ್ದರು. ರಾಘವೇಂದ್ರ ಪ್ರಾಮಾಣಿಕತೆಗೆ ಗೋಣಿಕೊಪ್ಪ ಠಾಣೆ ಸಿಬ್ಬಂದಿ, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದುಬಾರಿ ಐ ಪೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೊಡಗಿನ ಪೊಲೀಸ್ ಕಾನ್ಸ್‌ಟೇಬಲ್‌
ದುಬಾರಿ ಐ ಪೋನ್ ಹಿಂದುರುಗಿಸಿ ಪ್ರಾಮಾಣಿಕತೆ ಮೆರೆದ ಕೊಡಗಿನ ಪೊಲೀಸ್
ಗೋಪಾಲ್​ ಸೋಮಯ್ಯ
| Edited By: ಸಾಧು ಶ್ರೀನಾಥ್​|

Updated on: Dec 05, 2023 | 11:27 AM

Share

ವಿರಾಜಪೇಟೆ,  ಡಿಸೆಂಬರ್​ 5: ಕೊಡಗಿನ ಕಲಿಗಳು- ಅವರು ಪೊಲೀಸರೆ ಇರಲೀ, ದೇಶ ಸೇವೆಗೆ ಟೊಂಕಕಟ್ಟಿ ನಿಲ್ಲುವ ಯೋಧರೇ ಆಗಿರಲಿ… ಅವರಲ್ಲಿ ಪ್ರಾಮಾಣಿಕತೆ ಎಂಬುದು ತುಸು ಹೆಚ್ಚಾಗಿಯೇ, ಬೇರೆಯವರಿಗೆ ಮಾದರಿಯಾಗುವಂತೆ ತುಂಬಿತುಳುಕುತ್ತಿರುತ್ತದೆ. ತಾಜಾ ಪ್ರಕರಣದಲ್ಲಿ ಪ್ರವಾಸಿಗರೊಬ್ಬರು ಆಕಸ್ಮಿಕವಾಗಿ ಕಳೆದುಕೊಂಡಿದ್ದ ದುಬಾರಿ ಐಫೋನ್ (iPhone) ಅನ್ನು ಪೊಲೀಸರು ಅದರ ಮಾಲೀಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಕೊಡಗು ( Kodagu) ಜಿಲ್ಲೆ‌ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಠಾಣೆಯ ಕಾನ್ಸ್‌ಟೇಬಲ್‌ (police constable) ರಾಘವೇಂದ್ರ ಈ ಸ್ತುತ್ಯರ್ಹ ಕಾರ್ಯವೆಸಗಿದ್ದಾರೆ.

ಕಾನ್ಸ್‌ಟೇಬಲ್‌ ರಾಘವೇಂದ್ರ ಅವರು ಮೊನ್ನೆ ಭಾನುವಾರ ಡಿಸೆಂಬರ್​ 3 ರಂದು ಆನೆಚೌಕೂರು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ಸಂದರ್ಭ ರಸ್ತೆ ಬದಿ ದುಬಾರಿ ಬೆಲೆಯ ಐಫೋನ್ ಒಂದು ಅವರ ಕಣ್ಣಿಗೆ ಬಿದ್ದಿದೆ. ಐಫೋನ್ ನಲ್ಲಿ‌ ಬಹಳಷ್ಟು ಮಿಸ್ಡ್​​​ ಕಾಲ್ ಗಳಿದ್ದವು. ಅದರಲಿ ಅತಿ ಹೆಚ್ಚು ಮಿಸ್ಡ್​ ಕಾಲ್‌ ಬಂದ ನಂಬರ್ ಗೆ ರಾಘವೇಂದ್ರ ಕರೆ ಮಾಡಿದಾಗ ಆ ಮೊಬೈಲ್ ನ​ ಮಾಲೀಕ‌ ಕೇರಳ‌ ಮೂಲದ ಸಿಜೋಮ್ ಎಂಬುದು ಗೊತ್ತಾಗಿದೆ.

ಇದನ್ನೂ  ಓದಿ: ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಠಾಣೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್ ಸಿಬ್ಬಂದಿ

ಕಾರಿನಲ್ಲಿ ಅದೇ ದಾರಿಯಲ್ಲಿ ಸಾಗಿದ್ದ ಸಿಜೋಮ್‌ ತಮಗೆ ಅರಿವಿಲ್ಲದೆ ತಮ್ಮ ಮೊಬೈಲ್ ಬೀಳಿಸಿ ಕೊಂಡಿದ್ದರು. ಅವರನ್ನು ಸಂಪರ್ಕಿಸಿದ ಕಾನ್ಸ್‌ಟೇಬಲ್‌ ರಾಘವೇಂದ್ರ ಅವರು ಪೊಲೀಸ್​​ ಠಾಣೆಗೆ ಬಂದು ಮೊಬೈಲ್ ಪಡೆಯುವಂತೆ ಸೂಚಿಸಿದ್ದಾರೆ.‌ ಅದರಂತೆ ಸಿಜೋಮ್ ಠಾಣೆಗೆ‌ ದೌಡಾಯಿಸಿದ್ದಾರೆ. ಠಾಣೆಯಲ್ಲಿ ಕಾನ್ಸ್‌ಟೇಬಲ್‌ ರಾಘವೇಂದ್ರ ಮೊಬೈಲ್ ಹಿಂದಿರುಗಿಸಿದ್ದಾರೆ. ರಾಘವೇಂದ್ರ ಅವರ ಪ್ರಾಮಾಣಿಕತೆಗೆ ಗೋಣಿಕೊಪ್ಪ ಠಾಣೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಂಶಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್