AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬಾರಿ ಐ ಪೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೊಡಗಿನ ಪೊಲೀಸ್ ಕಾನ್ಸ್‌ಟೇಬಲ್‌

ಗೋಣಿಕೊಪ್ಪಲು ಠಾಣೆ ವ್ಯಾಪ್ತಿಯಲ್ಲಿ ಕಾರಿನಲ್ಲಿ ಸಾಗಿದ್ದ ಸಿಜೋಮ್‌ ತಮಗೆ ಅರಿವಿಲ್ಲದೆ ತಮ್ಮ ಮೊಬೈಲ್ ಬೀಳಿಸಿ ಕೊಂಡಿದ್ದರು. ಅದು ಕಾನ್ಸ್‌ಟೇಬಲ್‌ ರಾಘವೇಂದ್ರ ಅವರಿಗೆ ಸಿಕ್ಕಿತ್ತು. ಹಾಗಾಗಿ ಠಾಣೆಗೆ ಬಂದು ಮೊಬೈಲ್ ಪಡೆಯುವಂತೆ ಸೂಚಿಸಿದ್ದರು. ರಾಘವೇಂದ್ರ ಪ್ರಾಮಾಣಿಕತೆಗೆ ಗೋಣಿಕೊಪ್ಪ ಠಾಣೆ ಸಿಬ್ಬಂದಿ, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದುಬಾರಿ ಐ ಪೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕೊಡಗಿನ ಪೊಲೀಸ್ ಕಾನ್ಸ್‌ಟೇಬಲ್‌
ದುಬಾರಿ ಐ ಪೋನ್ ಹಿಂದುರುಗಿಸಿ ಪ್ರಾಮಾಣಿಕತೆ ಮೆರೆದ ಕೊಡಗಿನ ಪೊಲೀಸ್
Follow us
Gopal AS
| Updated By: ಸಾಧು ಶ್ರೀನಾಥ್​

Updated on: Dec 05, 2023 | 11:27 AM

ವಿರಾಜಪೇಟೆ,  ಡಿಸೆಂಬರ್​ 5: ಕೊಡಗಿನ ಕಲಿಗಳು- ಅವರು ಪೊಲೀಸರೆ ಇರಲೀ, ದೇಶ ಸೇವೆಗೆ ಟೊಂಕಕಟ್ಟಿ ನಿಲ್ಲುವ ಯೋಧರೇ ಆಗಿರಲಿ… ಅವರಲ್ಲಿ ಪ್ರಾಮಾಣಿಕತೆ ಎಂಬುದು ತುಸು ಹೆಚ್ಚಾಗಿಯೇ, ಬೇರೆಯವರಿಗೆ ಮಾದರಿಯಾಗುವಂತೆ ತುಂಬಿತುಳುಕುತ್ತಿರುತ್ತದೆ. ತಾಜಾ ಪ್ರಕರಣದಲ್ಲಿ ಪ್ರವಾಸಿಗರೊಬ್ಬರು ಆಕಸ್ಮಿಕವಾಗಿ ಕಳೆದುಕೊಂಡಿದ್ದ ದುಬಾರಿ ಐಫೋನ್ (iPhone) ಅನ್ನು ಪೊಲೀಸರು ಅದರ ಮಾಲೀಕರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಕೊಡಗು ( Kodagu) ಜಿಲ್ಲೆ‌ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಠಾಣೆಯ ಕಾನ್ಸ್‌ಟೇಬಲ್‌ (police constable) ರಾಘವೇಂದ್ರ ಈ ಸ್ತುತ್ಯರ್ಹ ಕಾರ್ಯವೆಸಗಿದ್ದಾರೆ.

ಕಾನ್ಸ್‌ಟೇಬಲ್‌ ರಾಘವೇಂದ್ರ ಅವರು ಮೊನ್ನೆ ಭಾನುವಾರ ಡಿಸೆಂಬರ್​ 3 ರಂದು ಆನೆಚೌಕೂರು ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ಸಂದರ್ಭ ರಸ್ತೆ ಬದಿ ದುಬಾರಿ ಬೆಲೆಯ ಐಫೋನ್ ಒಂದು ಅವರ ಕಣ್ಣಿಗೆ ಬಿದ್ದಿದೆ. ಐಫೋನ್ ನಲ್ಲಿ‌ ಬಹಳಷ್ಟು ಮಿಸ್ಡ್​​​ ಕಾಲ್ ಗಳಿದ್ದವು. ಅದರಲಿ ಅತಿ ಹೆಚ್ಚು ಮಿಸ್ಡ್​ ಕಾಲ್‌ ಬಂದ ನಂಬರ್ ಗೆ ರಾಘವೇಂದ್ರ ಕರೆ ಮಾಡಿದಾಗ ಆ ಮೊಬೈಲ್ ನ​ ಮಾಲೀಕ‌ ಕೇರಳ‌ ಮೂಲದ ಸಿಜೋಮ್ ಎಂಬುದು ಗೊತ್ತಾಗಿದೆ.

ಇದನ್ನೂ  ಓದಿ: ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಠಾಣೆಗೆ ಹಸ್ತಾಂತರಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್ ಸಿಬ್ಬಂದಿ

ಕಾರಿನಲ್ಲಿ ಅದೇ ದಾರಿಯಲ್ಲಿ ಸಾಗಿದ್ದ ಸಿಜೋಮ್‌ ತಮಗೆ ಅರಿವಿಲ್ಲದೆ ತಮ್ಮ ಮೊಬೈಲ್ ಬೀಳಿಸಿ ಕೊಂಡಿದ್ದರು. ಅವರನ್ನು ಸಂಪರ್ಕಿಸಿದ ಕಾನ್ಸ್‌ಟೇಬಲ್‌ ರಾಘವೇಂದ್ರ ಅವರು ಪೊಲೀಸ್​​ ಠಾಣೆಗೆ ಬಂದು ಮೊಬೈಲ್ ಪಡೆಯುವಂತೆ ಸೂಚಿಸಿದ್ದಾರೆ.‌ ಅದರಂತೆ ಸಿಜೋಮ್ ಠಾಣೆಗೆ‌ ದೌಡಾಯಿಸಿದ್ದಾರೆ. ಠಾಣೆಯಲ್ಲಿ ಕಾನ್ಸ್‌ಟೇಬಲ್‌ ರಾಘವೇಂದ್ರ ಮೊಬೈಲ್ ಹಿಂದಿರುಗಿಸಿದ್ದಾರೆ. ರಾಘವೇಂದ್ರ ಅವರ ಪ್ರಾಮಾಣಿಕತೆಗೆ ಗೋಣಿಕೊಪ್ಪ ಠಾಣೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಂಶಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ