AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13 ದಿನದಿಂದ ನಾಪತ್ತೆಯಾಗಿದ್ದ ಗುಜರಿ ಅಂಗಡಿ ಮಾಲೀಕನಿಗೂ ಕೊರೊನಾ ಅಟ್ಯಾಕ್

ಬೆಂಗಳೂರು: ಹೊಂಗಸಂದ್ರದಲ್ಲಿ ಪತ್ತೆಯಾದ ಮೊದಲ ಕೊರೊನಾ ಕೇಸ್​ಗೆ ಸಂಬಂಧಿಸಿ ಬಿಹಾರಿ ಸೋಂಕಿತನ ಮೂಲ‌ ಹುಡುಕುತ್ತಾ ಹೋದಾಗ ಇಡೀ ರಾಜ್ಯವನ್ನೇ ನಡುಗಿಸುವ ಮತ್ತೊಂದು ಸಂಗತಿ ಪತ್ತೆಯಾಗಿದೆ. ಹೊಂಗಸಂದ್ರದ ಮೊದಲ ಕೊರೊನಾ ಕೇಸ್ ದೃಢವಾಗುತ್ತಿದ್ದಂತೆ ಸೋಂಕಿತನಿಗೆ ಕೆಲಸ ಕೊಟ್ಟಿದ್ದ ಗುಜರಿ ಅಂಗಡಿ ಮಾಲೀಕ ಎಸ್ಕೇಪ್ ಆಗಿದ್ದ. ಸದ್ಯ 13 ದಿನಗಳ ಬಳಿಕ ಪತ್ತೆಯಾಗಿದ್ದಾನೆ. ಹಿನ್ನೆಲೆ: 419ನೇ ಸೋಂಕಿತ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈತನಿಗೆ ಕೊರೊನಾ ಪಾಸಿಟಿವ್ ಬಂದ ಕೂಡಲೇ ಗುಜರಿ ಅಂಗಡಿಯ ಮಾಲೀಕ ನಾಪತ್ತೆಯಾಗಿದ್ದ, ನಾಪತ್ತೆಯಾದ ವ್ಯಕ್ತಿಗಾಗಿ ಅಧಿಕಾರಿಗಳು […]

13 ದಿನದಿಂದ ನಾಪತ್ತೆಯಾಗಿದ್ದ ಗುಜರಿ ಅಂಗಡಿ ಮಾಲೀಕನಿಗೂ ಕೊರೊನಾ ಅಟ್ಯಾಕ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 06, 2020 | 1:02 PM

Share

ಬೆಂಗಳೂರು: ಹೊಂಗಸಂದ್ರದಲ್ಲಿ ಪತ್ತೆಯಾದ ಮೊದಲ ಕೊರೊನಾ ಕೇಸ್​ಗೆ ಸಂಬಂಧಿಸಿ ಬಿಹಾರಿ ಸೋಂಕಿತನ ಮೂಲ‌ ಹುಡುಕುತ್ತಾ ಹೋದಾಗ ಇಡೀ ರಾಜ್ಯವನ್ನೇ ನಡುಗಿಸುವ ಮತ್ತೊಂದು ಸಂಗತಿ ಪತ್ತೆಯಾಗಿದೆ. ಹೊಂಗಸಂದ್ರದ ಮೊದಲ ಕೊರೊನಾ ಕೇಸ್ ದೃಢವಾಗುತ್ತಿದ್ದಂತೆ ಸೋಂಕಿತನಿಗೆ ಕೆಲಸ ಕೊಟ್ಟಿದ್ದ ಗುಜರಿ ಅಂಗಡಿ ಮಾಲೀಕ ಎಸ್ಕೇಪ್ ಆಗಿದ್ದ. ಸದ್ಯ 13 ದಿನಗಳ ಬಳಿಕ ಪತ್ತೆಯಾಗಿದ್ದಾನೆ.

ಹಿನ್ನೆಲೆ: 419ನೇ ಸೋಂಕಿತ ಗುಜರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈತನಿಗೆ ಕೊರೊನಾ ಪಾಸಿಟಿವ್ ಬಂದ ಕೂಡಲೇ ಗುಜರಿ ಅಂಗಡಿಯ ಮಾಲೀಕ ನಾಪತ್ತೆಯಾಗಿದ್ದ, ನಾಪತ್ತೆಯಾದ ವ್ಯಕ್ತಿಗಾಗಿ ಅಧಿಕಾರಿಗಳು ಶೋಧ ನಡೆಸುತ್ತಿದ್ದರು. ನಾಪತ್ತೆಯಾದ 13 ದಿನಗಳ ಬಳಿಕ ಸಿಕ್ಕಿಬಿದ್ದಿದ್ದಾನೆ.

ಗುಜರಿ ಅಂಗಡಿಯ ಮಾಲೀಕ ಮೇ 3ರಂದು ಲಾಲ್‌ಬಾಗ್ ರಸ್ತೆಯಲ್ಲಿ ತಲೆತಿರುಗಿ ಬಿದ್ದಿದ್ದರು. ಕೂಡಲೇ ಮದೀನಾ ನಗರದ ಕ್ಲಿನಿಕ್‌ಗೆ ಆತನನ್ನು ದಾಖಲಿಸಲಾಗಿತ್ತು. ಅತಿಯಾದ ಜ್ವರ ಇದ್ದ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಸ್ಯಾಂಪಲ್ ಪರೀಕ್ಷೆ ವೇಳೆ ಈತನಿಗೂ ಕೊರೊನಾ ಇರುವುದು ದೃಢಪಟ್ಟಿದೆ. ಈತ ಯಾರೆಂಬ ಬಗ್ಗೆ ಅಧಿಕಾರಿಗಳು ತನಿಖೆ ವೇಳೆ ಗುಜರಿ ಅಂಗಡಿ ಮಾಲೀಕನೆಂಬುದು ಬಯಲಾಗಿದೆ.

10 ದಿನಗಳ ಕಾಲ ಈ ವ್ಯಕ್ತಿ ಹಲವು ಸ್ಥಳಗಳಲ್ಲಿ ಓಡಾಡಿದ್ದ. ಆದ್ರೆ ಈ ಬಗ್ಗೆ ಸೋಂಕಿತ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡ್ತಿಲ್ಲ. ಹೀಗಾಗಿ ಆತನ ಮೊಬೈಲ್ ಲೊಕೇಷನ್‌ ಆಧರಿಸಿ ವ್ಯಕ್ತಿ ಓಡಾಟದ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈತನಿಗೆ ತಬ್ಲೀಗ್ ನಂಟಿರುವ ಬಗ್ಗೆ ಅಧಿಕಾರಿಗಳ ಅನುಮಾನ ವ್ಯಕ್ತಪಡಿಸಿದ್ದಾರೆ.

Published On - 1:02 pm, Wed, 6 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು