AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಂಪತಿಯಿಂದ ಧನ್ವಂತರಿ ಹೋಮದ ಬಳಿಕ, ಕ್ಷೇತ್ರದ ಜನರಿಗೆ ಹೋಳಿಗೆ ಊಟ

Dhanvantari Homa: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ರೇಣುಕಾಚಾರ್ಯ ದಂಪತಿ ಸ್ವತಃ ತಾವೇ ಕುಳಿತು ಹೋಮ ಮಾಡಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಕೊರೊನಾ ಸಂಪೂರ್ಣ ನಿರ್ಮೂಲನೆ ಮಾಡಲೆಂದು ಇಂದು ಬೆಳಗ್ಗೆಯಿಂದ ಪ್ರಾರ್ಥನೆಯಲ್ಲಿ ತೊಡಗಿದ್ದಾರೆ.

ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಂಪತಿಯಿಂದ ಧನ್ವಂತರಿ ಹೋಮದ ಬಳಿಕ, ಕ್ಷೇತ್ರದ ಜನರಿಗೆ ಹೋಳಿಗೆ ಊಟ
ಕೊರೊನಾ ಕಂಟಕ ನಿವಾರಣೆ ನಿಮಿತ್ತ... ಹೊನ್ನಾಳಿ ಶಾಸಕ ರೇಣುಕಾಚಾರ್ಯ ದಂಪತಿಯಿಂದ ಧನ್ವಂತರಿ ಹೋಮ
ಸಾಧು ಶ್ರೀನಾಥ್​
|

Updated on:Jun 11, 2021 | 12:08 PM

Share

ಹೊನ್ನಾಳಿ ಶಾಸಕ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರು ಇಂದೂ ತಮ್ಮ ತನ ಸೇವೆಯನ್ನು ಮುಂದುವರಿಸಿದ್ದಾರೆ. ಕೊರೊನಾ ಮಹಾಮಾರಿಯಿಂದ ಕ್ಷೇತ್ರದ ಜನ ಸಂಕಷ್ಟಕ್ಕೆ ಸಿಲುಕಿರುವಾಗ ಶಾಸಕ ರೇಣುಕಾಚಾರ್ಯ ಅವರು ಒಂದಿಲ್ಲೊಂದು ರೂಪದಲ್ಲಿ ಅಹರ್ನಿಷಿಯಾಗಿ ಕ್ಷೇತ್ರದ ಜನತೆಯ ಸೇವೆಯಲ್ಲಿ ತೊಡಗಿದ್ದಾರೆ. ಇಂದು ಶುಕ್ರವಾರ, ಮನುಕುಲಕ್ಕೆ ಮಾರಕವಾಗಿ ಕಾಡುತ್ತಿರುವ ಕೊರೊನಾ ಸೋಂಕು ನಿವಾರಣೆಗಾಗಿ ಧನ್ವಂತರಿ ಹೋಮ ಹಾಗೂ ತಮ್ಮ ಜನತೆಯ ಆರೋಗ್ಯ ವೃದ್ಧಿಗಾಗಿ ಮೃತ್ಯುಂಜಯ ಹೋಮವನ್ನು ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ನಡೆಸುತ್ತಿದ್ದಾರೆ.

ರೇಣುಕಾಚಾರ್ಯ ದಂಪತಿಯಿಂದ ಹೋಮದ ಬಳಿಕ ಹೋಳಿಗೆ ಊಟ: ಮನುಕುಲಕ್ಕೆ ಮಾರಕವಾಗಿ ಕಾಡುತ್ತಿರುವ ಕೊರೊನಾ ಸೋಂಕು ನಿವಾರಣೆಗಾಗಿ ಧನ್ವಂತರಿ ಹೋಮ ಹಾಗು ನನ್ನ ಜನತೆಯ ಆರೋಗ್ಯ ವೃದ್ಧಿಗಾಗಿ ಮೃತ್ಯುಂಜಯ ಹೋಮವನ್ನು ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ನೆಡೆಸಲಾಗುತ್ತಿದ್ದು ನಂತರ ಮದ್ಯಾಹ್ನ ಎಲ್ಲಾ ಕೋವಿಡ್ ಸೋಂಕಿತ ಬಂಧುಗಳಿಗೆ ಹಾಗು ಸಿಬ್ಬಂದಿಗಳಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಿದ್ದೇನೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ರೇಣುಕಾಚಾರ್ಯ ದಂಪತಿ ಸ್ವತಃ ತಾವೇ ಕುಳಿತು ಹೋಮ ಮಾಡಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಕೊರೊನಾ ಸಂಪೂರ್ಣ ನಿರ್ಮೂಲನೆ ಮಾಡಲೆಂದು ಇಂದು ಬೆಳಗ್ಗೆಯಿಂದ ಪ್ರಾರ್ಥನೆಯಲ್ಲಿ ತೊಡಗಿದ್ದಾರೆ.

ಕೊರೋನಾಗೆ ಕ್ರಿಶ್ಚಿಯನ್ ವ್ಯಕ್ತಿ ಬಲಿ; ದೇಹವನ್ನು ಆಂಬುಲೆನ್ಸ್ ನಲ್ಲಿ ಸ್ವತಃ ತೆಗೆದುಕೊಂಡು ಹೋದ ರೇಣುಕಾಚಾರ್ಯ ಆಲ್ವಿನ್‌ ಸೆರೋರಾ ಎಂಬ ವ್ಯಕ್ತಿ ಶಿವಮೊಗ್ಗದ ಸೆಕ್ರಡ್​ಹಾರ್ಟ್ ಚರ್ಚ್ ಫಾದರ್, ತಾಯಿಯ ಯೋಗ ಕ್ಷೇಮ ವಿಚಾರಿಸಲು ಹೊನ್ನಾಳಿಗೆ ಬಂದಿದ್ದು‌ ಮೂರು ದಿನಗಳ ಹಿಂದೆ ಕೊರೊನಾ ಸೋಂಕಿನಿಂದ ಹೊನ್ನಾಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.

ಅವರು ನಿನ್ನೆ ಬೆಳಗ್ಗೆ ಮೃತಪಟ್ಟಿದ್ದು, ಅವರ ಸಂಬಂಧಿಕರು ಪತ್ತೆಯಾಗದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಅವರ ಅಂತ್ಯಸಂಸ್ಕಾರ ಮಾಡಲು ನಿಶ್ಚಯಿಸಿದ್ದರು. ಈ ಸಂದರ್ಭದಲ್ಲಿ ಹರಿಹರದ ಮಾಜಿ ಶಾಸಕರಾದ ಬಿಪಿ ಹರೀಶ್ ಅವರ ಮೂಲಕ ಹರಿಹರದ ಆರೋಗ್ಯ ಮತ್ತು ದಾರ್ಶನಿಕ ಮುಖ್ಯ ಗುರು ಆಂಟನಿ ಪೀಟರ್ ಸಾಗರ್ ಅವರು ನೆರವಿಗೆ ಬಂದಿದ್ದಾರೆ.

ಮೃತ ಆಲ್ವಿನ್‌ ಸೆರೋರಾ ಅವರ ದೇಹವನ್ನು ಕ್ರಿಶ್ಚಿನ್ ಪದ್ಧತಿಯ ಮೂಲಕ ಅಂತ್ಯಸಂಸ್ಕಾರ ಮಾಡುವುದಾಗಿ ಕೇಳಿಕೊಂಡ ಹಿನ್ನೆಲೆಯಲ್ಲಿ ಮೃತದೇಹವನ್ನು ರೇಣುಕಾಚಾರ್ಯ ಅವರ ತಂದೆ-ತಾಯಿ ಸ್ಮರಣಾರ್ಥ ಕೋವಿಡ್ ಸಂದರ್ಭದಲ್ಲಿ ಜನಸೇವೆಗೆಂದು ನೀಡಿರುವ ಆಂಬುಲೆನ್ಸ್ ನಲ್ಲಿ ನಿನ್ನೆ ತಡರಾತ್ರಿ ಕಳುಹಿಸಿಕೊಟ್ಟಿದ್ದಾರೆ.

(Honnali bjp mla MP Renukacharya couple perform dhanvantari homa to eradicate coronavirus)

MP Renukacharya: ಶಾಸಕ ರೇಣುಕಾಚಾರ್ಯರಿಂದ ಮತ್ತೊಂದು ಸತ್ಕಾರ್ಯ; ಕೊವಿಡ್ ಕೇರ್ ಸೆಂಟರ್​ನಲ್ಲಿ ಮೂರು ದಿನಗಳ ವಾಸ್ತವ್ಯ

Published On - 12:07 pm, Fri, 11 June 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ