AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಸಮಯಪ್ರಜ್ಞೆ ಮೆರೆದ ರೇಣುಕಾಚಾರ್ಯ; ರಾತ್ರೋರಾತ್ರಿ 25 ಆಕ್ಸಿಜನ್ ಸಿಲಿಂಡರ್​ ತಂದುಕೊಟ್ಟು 45 ಜನರನ್ನು ಉಳಿಸಿದ ಶಾಸಕ

ಹೊನ್ನಾಳಿ ತಾಲೂಕು ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ (ಮೇ 18) ಮತ್ತೆ ಆಕ್ಸಿಜನ್ ಅಭಾವ ಉಂಟಾಗಿದೆ. ಕೂಡಲೇ ಎಚ್ಚೆತ್ತ ವೈದ್ಯರು ಮೆಡಿಕಲ್ ಆಕ್ಸಿಜನ್ ಕೊರತೆ ಬಗ್ಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಶಾಸಕರು ರಾತ್ರೋರಾತ್ರಿ ಭದ್ರಾವತಿ, ಹರಿಹರದಿಂದ ಮೆಡಿಕಲ್​ ಆಕ್ಸಿಜನ್​ ತರಲು ವ್ಯವಸ್ಥೆ ಮಾಡಿದ್ದಾರೆ.

ಮತ್ತೆ ಸಮಯಪ್ರಜ್ಞೆ ಮೆರೆದ ರೇಣುಕಾಚಾರ್ಯ; ರಾತ್ರೋರಾತ್ರಿ 25 ಆಕ್ಸಿಜನ್ ಸಿಲಿಂಡರ್​ ತಂದುಕೊಟ್ಟು 45 ಜನರನ್ನು ಉಳಿಸಿದ ಶಾಸಕ
ರೇಣುಕಾಚಾರ್ಯ
Follow us
Skanda
|

Updated on: May 19, 2021 | 7:33 AM

ದಾವಣಗೆರೆ: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಉಲ್ಬಣಿಸಿದ ನಂತರ ಅನೇಕ ಸಾವು ನೋವುಗಳು ವೈದ್ಯಕೀಯ ಸೌಲಭ್ಯಗಳ ಕೊರತೆ ಕಾರಣದಿಂದ ಆಗಿವೆ. ಹಲವು ಸೋಂಕಿತರು ಆಕ್ಸಿಜನ್ ಕೊರತೆಯಿಂದಾಗಿ ಪ್ರಾಣಬಿಟ್ಟಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಕೆಲ ದಿನಗಳ ಹಿಂದಷ್ಟೇ ಹೊನ್ನಾಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ತಲೆದೋರಿದಾಗ ಅಲ್ಲಿನ ಶಾಸಕ ಎಂ.ಪಿ.ರೇಣುಕಾಚಾರ್ಯ ನಡುರಾತ್ರಿ ಧಾವಿಸಿ ತಮ್ಮದೇ ಕಾರಿನಲ್ಲಿ ಆಕ್ಸಿಜನ್ ಪೂರೈಕೆ ಮಾಡಿದ್ದರು. ಶಾಸಕರ ಈ ಕಾರ್ಯ ಜನ ಸಾಮಾನ್ಯರಿಂದ ಭಾರೀ ಮೆಚ್ಚುಗೆ ಗಳಿಸಿತ್ತು. ಇದೀಗ ಮತ್ತೆ ಎಂ.ಪಿ.ರೇಣುಕಾಚಾರ್ಯ ಅವರ ಸಮಯಪ್ರಜ್ಞೆಯಿಂದ ಸುಮಾರು 45 ಜನರ ಪ್ರಾಣ ಉಳಿದಿದ್ದು, ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ರಾತ್ರೋರಾತ್ರಿ ಒಟ್ಟು 25 ಸಿಲಿಂಡರ್ ವ್ಯವಸ್ಥೆ ಮಾಡುವ ಮೂಲಕ ಜನಮನ ಗೆದ್ದಿದ್ದಾರೆ.

ಹೊನ್ನಾಳಿ ತಾಲೂಕು ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ (ಮೇ 18) ಮತ್ತೆ ಆಕ್ಸಿಜನ್ ಅಭಾವ ಉಂಟಾಗಿದೆ. ಕೂಡಲೇ ಎಚ್ಚೆತ್ತ ವೈದ್ಯರು ಮೆಡಿಕಲ್ ಆಕ್ಸಿಜನ್ ಕೊರತೆ ಬಗ್ಗೆ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಶಾಸಕರು ರಾತ್ರೋರಾತ್ರಿ ಭದ್ರಾವತಿ, ಹರಿಹರದಿಂದ ಮೆಡಿಕಲ್​ ಆಕ್ಸಿಜನ್​ ತರಲು ವ್ಯವಸ್ಥೆ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಒಟ್ಟು 45 ಜನ ಆಕ್ಸಿಜನ್​ ಬೆಡ್​ನಲ್ಲಿದ್ದ ಕಾರಣ ತುಸು ಹೆಚ್ಚೇ ಪ್ರಮಾಣದ ಆಕ್ಸಿಜನ್​ ಬೇಕಾಗಿದ್ದು, ಅದಕ್ಕಾಗಿ ಮಾಹಿತಿ ಕಲೆಹಾಕಿದ್ದಾರೆ.

ನಂತರ ಶಿವಮೊಗ್ಗ ಜಿಲ್ಲೆ ಭದ್ರಾವತಿಯಿಂದ 20 ಆಕ್ಸಿಜನ್ ಸಿಲಿಂಡರ್ ಹಾಗೂ ದಾವಣಗೆರೆ ಜಿಲ್ಲೆ ಹರಿಹರದಿಂದ 5 ಸಿಲಿಂಡರ್ ವ್ಯವಸ್ಥೆ ಮಾಡಿದ್ದಾರೆ. ಆ ಮೂಲಕ ಒಟ್ಟು 25 ಆಕ್ಸಿಜನ್ ಸಿಲಿಂಡರ್ ಹೊನ್ನಾಳಿ ಆಸ್ಪತ್ರೆಗೆ ಬಂದು ತಲುಪಿದ್ದು, ಶಾಸಕರು ತುರ್ತಾಗಿ ಸ್ಪಂದಿಸಿದ ಕಾರಣ 45 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಒಂದುವೇಳೆ ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದೇ ಇದ್ದರೆ ಭಾರೀ ಅನಾಹುತ ಆಗುತ್ತಿತ್ತಾದ್ದರಿಂದ ಶಾಸಕರ ಕಾರ್ಯ ವೈಖರಿಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.

ಕೆಲದಿನಗಳ ಹಿಂದೆಯಷ್ಟೇ ಇದೇ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆ ಎದುರಾದಾಗ ಆಕ್ಸಿಜನ್​ ವ್ಯವಸ್ಥೆ ಮಾಡಲು ಸಿಬ್ಬಂದಿಯ ಜತೆಗೆ ಸ್ವತಃ ಶಾಸಕರೇ ಹರಿಹರಕ್ಕೆ ತೆರಳಿ, ರಾತ್ರಿ 2 ಗಂಟೆ ಸುಮಾರಿಗೆ ತಮ್ಮ ವಾಹನದಲ್ಲೇ ಆಕ್ಸಿಜನ್ ಸಿಲಿಂಡರ್ ತಂದುಕೊಟ್ಟಿದ್ದರು. ಆ ಮೂಲಕ ಆಕ್ಸಿಜನ್​ ಬೆಡ್​ನಲ್ಲಿದ್ದ ಸುಮಾರು 20 ಜನರ ಜೀವವನ್ನು ಅಪಾಯದಿಂದ ಪಾರು ಮಾಡಿದ್ದರು. ಆಗಲೂ ಶಾಸಕರ ಸಮಯ ಪ್ರಜ್ಞೆಗೆ ಹಾಗೂ ತಾವೇ ಮುಂದೆ ನಿಂತು ತಮ್ಮ ವಾಹನದಲ್ಲೇ ಆಕ್ಸಿಜನ್ ಪೂರೈಕೆ ಮಾಡಿದ್ದಕ್ಕೆ ಜನರು ಭೇಷ್​ ಎಂದಿದ್ದರು.

(Honnali MLA MP Renukacharya provides 25 medical oxygen cylinders at midnight and saved 45 lives)

ಇದನ್ನೂ ಓದಿ: ಕೊರೊನಾ ಸೋಂಕಿತರಿಗಾಗಿ ಸ್ವತಃ ಇಡ್ಲಿ ತಯಾರಿಸಿದ ಎಂ.ಪಿ ರೇಣುಕಾಚಾರ್ಯ 

ತಾವೇ ಖುದ್ದಾಗಿ ತೆರಳಿ, ರಾತ್ರಿ 2 ಗಂಟೆಗೆ ಆಕ್ಸಿಜನ್​ ತಂದುಕೊಟ್ಟ ರೇಣುಕಾಚಾರ್ಯ; 20 ರೋಗಿಗಳು ಅಪಾಯದಿಂದ ಪಾರು

ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ