AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊನ್ನಾಳಿಯ ನೆಚ್ಚಿನ ಶಾಸಕನಿಗೆ 59ನೇ ಹುಟ್ಟುಹಬ್ಬದ ಸಂಭ್ರಮ: ರೇಣುಕಾಚಾರ್ಯ, ಪತ್ನಿಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ!

ಹೊನ್ನಾಳಿ ಹೋರಿ ಎಂದೇ ಖ್ಯಾತಿ ಪಡೆದಿರುವ ಕ್ಷೇತ್ರದ ಶಾಸಕ M.P.ರೇಣುಕಾಚಾರ್ಯರಿಗೆ 59ನೇ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ, ಇಂದು ಶಾಸಕನ ಅಭಿಮಾನಿಗಳು ರೇಣುಕಾಚಾರ್ಯ ಮತ್ತು ಅವರ ಪತ್ನಿಗೆ ಹಾಲಿನ ಅಭಿಷೇಕ ಮಾಡಿದರು. ದಂಪತಿಗೆ ಅಭಿಮಾನಿಗಳು 2 ಬಿಂದಿಗೆ ಹಾಲು ಸುರಿದು ಸಂಭ್ರಮಿಸಿದರು.

ಹೊನ್ನಾಳಿಯ ನೆಚ್ಚಿನ ಶಾಸಕನಿಗೆ 59ನೇ ಹುಟ್ಟುಹಬ್ಬದ ಸಂಭ್ರಮ: ರೇಣುಕಾಚಾರ್ಯ, ಪತ್ನಿಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ!
ನೆಚ್ಚಿನ ಶಾಸಕ ರೇಣುಕಾಚಾರ್ಯ, ಪತ್ನಿಗೆ ಹಾಲಿನ ಅಭಿಷೇಕ!
KUSHAL V
|

Updated on: Mar 01, 2021 | 6:42 PM

Share

ದಾವಣಗೆರೆ: ಹೊನ್ನಾಳಿ ಕ್ಷೇತ್ರದ ಶಾಸಕ M.P.ರೇಣುಕಾಚಾರ್ಯರಿಗೆ 59ನೇ ಹುಟ್ಟುಹಬ್ಬದ ಸಂಭ್ರಮ. ಹಾಗಾಗಿ, ಇಂದು ಶಾಸಕನ ಅಭಿಮಾನಿಗಳು ರೇಣುಕಾಚಾರ್ಯ ಮತ್ತು ಅವರ ಪತ್ನಿಗೆ ಹಾಲಿನ ಅಭಿಷೇಕ ಮಾಡಿದರು. ದಂಪತಿಗೆ ಅಭಿಮಾನಿಗಳು 2 ಬಿಂದಿಗೆ ಹಾಲು ಸುರಿದು ಸಂಭ್ರಮಿಸಿದರು.

DVG RENUKACHARYA BIRTHDAY 1

ದಂಪತಿಗೆ ಅಭಿಮಾನಿಗಳು 2 ಬಿಂದಿಗೆ ಹಾಲು ಸುರಿದು ಸಂಭ್ರಮಿಸಿದರು

DVG RENUKACHARYA BIRTHDAY 2

ನೆಚ್ಚಿನ ಶಾಸಕ ರೇಣುಕಾಚಾರ್ಯ, ಪತ್ನಿಗೆ ಹಾಲಿನ ಅಭಿಷೇಕ!

DVG RENUKACHARYA BIRTHDAY 3

ಕೇಕ್​ ಸವಿದ ಶಾಸಕ ರೇಣುಕಾಚಾರ್ಯ

DVG RENUKACHARYA BIRTHDAY 4

ಕೇಕ್​ ಕತ್ತರಿಸಿ ಸಂಭ್ರಮಾಚರಣೆ

ರೇಣುಕಾಚಾರ್ಯರ ಜನ್ಮದಿನದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭವನ್ನು ಏಪರ್ಡಿಸಲಾಗಿತ್ತು. ಹೊನ್ನಾಳಿಯಲ್ಲಿ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ, ಸಚಿವರಾದ ಬಿ.ಸಿ.ಪಾಟೀಲ್, ಭೈರತಿ ಬಸವರಾಜ್ ಹಾಗೂ BJP ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ರಾಜುಗೌಡ ಮತ್ತು ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ವೇಳೆ, ಶಾಸಕ ರೇಣುಕಾಚಾರ್ಯ ಅವರ ಅಭಿನಂದನಾ ಸಮಾರಂಭಕ್ಕೆ ಬಂದ ಸಿಎಂ ಪುತ್ರ ವಿಜಯೇಂದ್ರಗೆ ಅಭಿಮಾನಿಗಳು ಸೇಬಿನ ಹಾರ ಹಾಕಿ ಸನ್ಮಾನಿಸಿದರು. ಅತ್ತ ವಿಜಯೇಂದ್ರ ಹೋಗುತ್ತಿದ್ದಂತೆ ಸಾರ್ವಜನಿಕರು ಸೇಬುಗಳಿಗೆ ಕಿತ್ತಾಟ ನಡೆಸಿದ್ದು ಸಹ ಸಿಕ್ಕಾಪಟ್ಟೆ ವೈರಲ್​ ಆಗಿದೆ. ನಾ ಮುಂದು ತಾ ಮುಂದು ಅಂತಾ ಆ್ಯಪಲ್​ಗಾಗಿ ಕೆಲ ಹೊತ್ತು ಹೋರಾಟ ಮಾಡಿದ ಸ್ಥಳೀಯರು ಬಳಿಕ ತಮ ಶಕ್ತ್ಯಾನುಸಾರ ಸೇಬುಗಳನ್ನು ಕಸಿದು ಕೊಂಡೊಯ್ದರು.

DVG RENUKACHARYA BIRTHDAY 5

ಸೇಬಿಗಾಗಿ ಸ್ಥಳೀಯರ ಸೆಣಸಾಟ!

‘ರೇಣುಕಾಚಾರ್ಯರಿಗೆ ಮಂತ್ರಿಗಿರಿ ಕೊಡದಿದ್ರೆ ಶಾಪ ತಟ್ಟುತ್ತೆ’ ಅತ್ತ, ರೇಣುಕಾಚಾರ್ಯರಿಗೆ ಮಂತ್ರಿಗಿರಿ ಕೊಡದಿದ್ರೆ ಶಾಪ ತಟ್ಟುತ್ತೆ. ಸಿದ್ದೇಶಣ್ಣ ಮಂತ್ರಿ ಸ್ಥಾನ ಕೊಡಿಸೇ ಕೊಡುಸ್ತಾರೆ ಎಂದು ಅಭಿನಂದನಾ ಸಮಾರಂಭದಲ್ಲಿ ಶಾಸಕ ರಾಜುಗೌಡ ಹೇಳಿದರು.

ನಿನ್ನೆ ರೇಣುಕಾಚಾರ್ಯರಿಗೆ ನೀವು ಹಾಲಿನ ಅಭಿಷೇಕ ಮಾಡಿದ್ರಿ. ನಾವಾಗಿದ್ದರೆ ಆಲ್ಕೋಹಾಲ್​​ನಲ್ಲಿ ಅಭಿಷೇಕವನ್ನು ಮಾಡುತ್ತಿದ್ವಿ ಎಂದು ಶಾಸಕ ರಾಜುಗೌಡ ಹೇಳಿದರು. ರೇಣುಕಾಚಾರ್ಯರಿಗೆ ಜನರಿಗೆ ನೆರವಾಗುವ ಸಚಿವಸ್ಥಾನ ಸಿಗಲಿ. ಸಿಎಂಗೆ ಇಬ್ಬರು ಮಕ್ಕಳಲ್ಲ ಇರೋದು, ಮೂರು ಜನ ಮಕ್ಕಳು. ಸಿಎಂ ಮೊದಲನೇ ಮಗ ಶಾಸಕ ಎಂ.ಪಿ.ರೇಣುಕಾಚಾರ್ಯ. ಬಳಿಕ ರಾಘವೇಂದ್ರ, ವಿಜಯೇಂದ್ರ. ಸಿಎಂ ಬಿಎಸ್​​ವೈಗೆ ರೇಣುಕಾಚಾರ್ಯ ಹನುಮಂತ ಇದ್ದಂತೆ ಎಂದು ಅಭಿನಂದನಾ ಸಮಾರಂಭದಲ್ಲಿ ಶಾಸಕ ರಾಜುಗೌಡ ಹೇಳಿದರು.

ಬಳಿಕ ಮಾತನಾಡಿದ ಬಿ.ವೈ.ವಿಜಯೇಂದ್ರ ರೇಣುಕಾಚಾರ್ಯ ಕೇವಲ ಹೊನ್ನಾಳಿಗೆ ಸೀಮಿತವಲ್ಲ. ರಾಜ್ಯಾದ್ಯಂತ ಅವರ ಅಭಿಮಾನಿಗಳಿದ್ದರೆ ಎಂದು ಶಾಸಕರನ್ನು ಹಾಡಿ ಹೊಗಳಿದರು.

ಇದನ್ನೂ ಓದಿ: VTU 2ನೇ ವರ್ಷದ ಇಂಜಿನಿಯರಿಂಗ್ 3ನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Follow Us
KUSHAL V
KUSHAL V
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ