AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

31 ವರ್ಷಗಳಿಂದ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ ಮಾಲತೇಶಪ್ಪ ನಿಧನ

ಕಳೆದ 31 ವರ್ಷಗಳಿಂದ ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ ಮಾಲತೇಶಪ್ಪ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಈ ಬಾರಿ ಮೈಲಾರ ಲಿಂಗೇಶ್ವರನ ಕಾರಣಿಕ ನುಡಿಯುವ ಮೊದಲೇ ದೇಗುಲ ಮುಂದಿನ ಕಟ್ಟೆಯಲ್ಲಿದ್ದ ಕಲ್ಲಿನ ತ್ರಿಶೂಲ ಕಳಚಿಬಿದ್ದಿದ್ದು, ಇದು ಅಪಶಕುನದ ಸೂಚನೆ ಎಂದು ಭಕ್ತರು ಆತಂಕ ವ್ಯಕ್ತಪಡಿಸಿದ್ದರು.

31 ವರ್ಷಗಳಿಂದ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ ಮಾಲತೇಶಪ್ಪ ನಿಧನ
ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ
TV9 Web
| Edited By: |

Updated on: Jun 22, 2021 | 10:42 AM

Share

ವಿಜಯನಗರ: ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ ಮಾಲತೇಶಪ್ಪ ನಿಧನರಾಗಿದ್ದಾರೆ. ಕಳೆದ 31 ವರ್ಷಗಳಿಂದ ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ ಮಾಲತೇಶಪ್ಪ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮೈಲಾರ ಕಾರ್ಣಿಕ ಭಾರೀ ಪ್ರಸಿದ್ಧವಾಗಿದ್ದು, ಕಾರ್ಣಿಕ ಕೇಳಲೆಂದೇ ಅಸಂಖ್ಯಾತ ಭಕ್ತರು ಆಗಮಿಸುತ್ತಿದ್ದರು. ಅಲ್ಲದೇ, ಕಾರ್ಣಿಕವನ್ನು ವರ್ಷದ ಭವಿಷ್ಯವಾಣಿ ಎಂದೇ ನಂಬಲಾಗುವುದರಿಂದ ಅದರ ಆಧಾರದ ಮೇಲೆ ಆ ವರ್ಷ ಏನಾಗಬಹುದು ಎಂಬ ಲೆಕ್ಕಾಚಾರವನ್ನೂ ಹಾಕಲಾಗುತ್ತದೆ. ಇದೀಗ ಕಾರ್ಣಿಕ ನುಡಿಯುತ್ತಿದ್ದ ಗೊರವಯ್ಯ ಮಾಲತೇಶಪ್ಪ ಅವರ ನಿಧನ ಭಕ್ತಾದಿಗಳಲ್ಲಿ ಕಳವಳ ಮೂಡಿಸಿದೆ.

ಮುತ್ತಿನರಾಶಿ ಮೂರು ಭಾಗ ಆದೀತಲೆ ಪರಾಕ್ ಈ ಬಾರಿ ಜನವರಿ ತಿಂಗಳಲ್ಲಿ ಕಾರ್ಣಿಕ ನುಡಿದಿದ್ದ ಗೊರವಯ್ಯ, ಭಕ್ತರ ಜಯಘೋಷದ ನಡುವೆ ಬಿಲ್ಲನ್ನೇರಿ, ಶೂನ್ಯವನ್ನು ದಿಟ್ಟಿಸುತ್ತಾ ‘ಮುತ್ತಿನರಾಶಿ ಮೂರು ಭಾಗ ಆದೀತಲೆ ಪರಾಕ್’ ಎಂದು ಕಾರಣಿಕ ನುಡಿದು ಹಿಮ್ಮುಖವಾಗಿ ಜಿಗಿದಿದ್ದರು. ಮುತ್ತಿನರಾಶಿ ಮೂರು ಭಾಗ ಆದೀತಲೆ ಪರಾಕ್ ಎಂಬ ಸಾಲನ್ನು ಹಲವು ಬಗೆಗಳಲ್ಲಿ ವ್ಯಾಖ್ಯಾನಿಸಲಾಗಿದ್ದು, ‘ರಾಜಕೀಯವಾಗಿ ಕೇಂದ್ರ, ರಾಜ್ಯದಲ್ಲಿ ಮೈತ್ರಿ ಸರ್ಕಾರ ಬರುವ ಮುನ್ಸೂಚನೆ ಈ ಕಾರ್ಣಿಕದಲ್ಲಿದೆ. ಇದನ್ನು 3 ಭಾಗದಲ್ಲಿ ಮಳೆ ಬೆಳೆ ಸಮೃದ್ಧಿ, 1 ಭಾಗದಲ್ಲಿ ಸ್ವಲ್ಪ ಸಮಸ್ಯೆ ಎಂದೂ ವಿಶ್ಲೇಷಿಸಬಹುದು ಎಂದು ಮೈಲಾರ ಲಿಂಗೇಶ್ವರದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್​ ಅಭಿಪ್ರಾಯಪಟ್ಟಿದ್ದರು.

‘ಮುತ್ತಿನರಾಶಿ’ ಎಂದರೆ ಸಂಪತ್ತು ಎಂದೂ, ಅದು ‘ಮೂರು ಭಾಗ ಆಗುತ್ತದೆ’ ಎಂದರೆ ಮೂರು ಪಟ್ಟು ಹೆಚ್ಚಾಗುತ್ತದೆ ಎಂದೂ ಕೆಲವರು ವ್ಯಾಖ್ಯಾನಿಸಿದ್ದರು. ಇನ್ನೂ ಕೆಲವರು ಇದು ‘ಶುಭ ಕಾರಣಿಕ. ಕೊರೊನಾದಿಂದ ದೇಶ ಸುಧಾರಿಸಿಕೊಂಡಿದೆ. ದೇಶದ ಆರ್ಥಿಕ ಸ್ಥಿತಿ ಉತ್ತಮಗೊಳ್ಳುತ್ತದೆ’ ಎಂದು ಹೇಳುತ್ತಿದ್ದರು. ಕೆಲವರು ಮಾತ್ರ ಕಾರಣಿಕವನ್ನು ಮತ್ತೊಂದು ಬಗೆಯಾಗಿ ವಿವರಿಸಿ, ಮೂರು ಭಾಗ ಎಂದರೆ ಇರುವ ಸಂಪತ್ತು ಹಂಚಿಹೋಗಬಹುದು ಎನ್ನುವ ಅರ್ಥದಲ್ಲಿ ವಿವರಿಸಿದ್ದರು.

ಕಳಚಿಬಿದ್ದ ತ್ರಿಶೂಲ: ಭಕ್ತರಲ್ಲಿ ಬೇಸರ ಮೈಲಾರ ಲಿಂಗೇಶ್ವರನ ಕಾರಣಿಕ ನುಡಿಯುವ ಮೊದಲೇ ದೇಗುಲ ಮುಂದಿನ ಕಟ್ಟೆಯಲ್ಲಿದ್ದ ಕಲ್ಲಿನ ತ್ರಿಶೂಲ ಕಳಚಿಬಿದ್ದಿದ್ದು, ಇದು ಅಪಶಕುನದ ಸೂಚನೆ ಎಂದು ಭಕ್ತರು ಆತಂಕ ವ್ಯಕ್ತಪಡಿಸಿದ್ದರು. ತ್ರಿಶೂಲವನ್ನು ಈ ಮೊದಲು ಇದ್ದಂತೆಯೇ ಶಾಸ್ತ್ರೋಕ್ತವಾಗಿ ಮರು ಸ್ಥಾಪಿಸಬೇಕು ಎಂದು ಸ್ಥಳಕ್ಕೆ ಭೇಟಿ ನೀಡಿದ ಮುಜರಾಯಿ ಅಧಿಕಾರಿಗಳಿಗೆ ಆಗ್ರಹಿಸಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ: ಮುತ್ತಿನರಾಶಿ ಮೂರು ಭಾಗ ಆದೀತಲೆ ಪರಾಕ್; ಹೊರಬಿತ್ತು ಮೈಲಾರಲಿಂಗೇಶ್ವರನ ಕಾರಣಿಕ.. ಒಳಾರ್ಥವೇನು?

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ