AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನ ಬಳಿಕ SSLC ವಿದ್ಯಾರ್ಥಿಗಳ ಸುರಕ್ಷತೆ ಗೊತ್ತಾಗುತ್ತೆ! ಸಿದ್ದು ಬಯಸ್ತಾ ಇರೋದು ಏನು?

ಶಿಕ್ಷಣ ಸಚಿವ ಸುರೇಶ್​ಕುಮಾರ್​ ಮುಂಚೂಣಿಯಲ್ಲಿ ನಿಂತು ಯುದ್ಧೋಪಾದಿಯಲ್ಲಿ ಈ ಬಾರಿಯ SSLC ಪರೀಕ್ಷೆಯನ್ನು ಮುಗಿಸಿ, ಸಮಾಧಾನದ ನಿಟ್ಟುಸಿರುಬಿಟ್ಟಿದ್ದಾರೆ. ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದು ಸೈ ಅನ್ನಿಸಿಕೊಂಡಿದ್ದಾರೆ. ಸದ್ಯ ಅವರಲ್ಲಿ ಯಾರಿಗೂ ಕೊರೊನಾ ಸೋಂಕು ಬಾಧಿಸುತ್ತಿಲ್ಲ. ಆದ್ರೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ವಿದ್ಯಾರ್ಥಿಗಳು ಸುರಕ್ಷಿತರಾಗಿರಲಿ ಎಂದು ನಾನೂ ಬಯಸ್ತೇನೆ. ಆದ್ರೆ 15 ದಿನದ ಬಳಿಕ ಅವರ ಸುರಕ್ಷತೆ ಬಗ್ಗೆ ಗೊತ್ತಾಗುತ್ತೆ ಎಂದಿದ್ದಾರೆ. ರಾಜ್ಯ ಸರ್ಕಾರ ಅತ್ಯಂತ ಆತ್ಮವಿಶ್ವಾಸದಿಂದ SSLC ಪರೀಕ್ಷೆ ಪೂರೈಸಿದೆ. ಸುರಕ್ಷತಾ ಕ್ರಮ […]

15 ದಿನ ಬಳಿಕ SSLC ವಿದ್ಯಾರ್ಥಿಗಳ ಸುರಕ್ಷತೆ ಗೊತ್ತಾಗುತ್ತೆ! ಸಿದ್ದು ಬಯಸ್ತಾ ಇರೋದು ಏನು?
ಸಾಧು ಶ್ರೀನಾಥ್​
| Edited By: |

Updated on:Jul 04, 2020 | 2:59 PM

Share

ಶಿಕ್ಷಣ ಸಚಿವ ಸುರೇಶ್​ಕುಮಾರ್​ ಮುಂಚೂಣಿಯಲ್ಲಿ ನಿಂತು ಯುದ್ಧೋಪಾದಿಯಲ್ಲಿ ಈ ಬಾರಿಯ SSLC ಪರೀಕ್ಷೆಯನ್ನು ಮುಗಿಸಿ, ಸಮಾಧಾನದ ನಿಟ್ಟುಸಿರುಬಿಟ್ಟಿದ್ದಾರೆ. ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದು ಸೈ ಅನ್ನಿಸಿಕೊಂಡಿದ್ದಾರೆ. ಸದ್ಯ ಅವರಲ್ಲಿ ಯಾರಿಗೂ ಕೊರೊನಾ ಸೋಂಕು ಬಾಧಿಸುತ್ತಿಲ್ಲ.

ಆದ್ರೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ವಿದ್ಯಾರ್ಥಿಗಳು ಸುರಕ್ಷಿತರಾಗಿರಲಿ ಎಂದು ನಾನೂ ಬಯಸ್ತೇನೆ. ಆದ್ರೆ 15 ದಿನದ ಬಳಿಕ ಅವರ ಸುರಕ್ಷತೆ ಬಗ್ಗೆ ಗೊತ್ತಾಗುತ್ತೆ ಎಂದಿದ್ದಾರೆ.

ರಾಜ್ಯ ಸರ್ಕಾರ ಅತ್ಯಂತ ಆತ್ಮವಿಶ್ವಾಸದಿಂದ SSLC ಪರೀಕ್ಷೆ ಪೂರೈಸಿದೆ. ಸುರಕ್ಷತಾ ಕ್ರಮ ಕೈಗೊಂಡು ಪರೀಕ್ಷೆ ನಡೆಸಿದ್ದೇವೆ ಅನ್ನೋ ಭರವಸೆಯಲ್ಲೂ ಇದ್ದೀರಿ. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಸುರಕ್ಷಿತರಾಗಿರಲಿ ಅಂತಾ ನಾನೂ ಸಹ ಬಯಸುತ್ತೇನೆ. ಅದ್ರೆ ಹದಿನೈದು ದಿನಗಳ ಬಳಿಕವಷ್ಟೇ ಅವರು ಸುರಕ್ಷಿತವಾಗಿದ್ದಾರೋ ಇಲ್ವೋ ಅನ್ನೋದು ಗೊತ್ತಾಗುತ್ತೆ ಎಂದು ಟ್ವೀಟ್​ ಮಾಡಿದ್ದಾರೆ.

ಜೊತೆಗೆ, ಜೂನ್ 15 ರಿಂದ ಜುಲೈ 20 ವರೆಗಿನ ಕೊವಿಡ್ ಪಾಸಿಟಿವ್ ಬಂದಿರುವವರ ಸಂಪೂರ್ಣ ದಾಖಲೆ ಸಂಗ್ರಹಿಸಿ. ಇವರಲ್ಲಿ SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿ ಇದ್ದರೋ ಇಲ್ಲವೋ ಎಂಬುದರ ಬಗ್ಗೆ ಪರಿಶೀಲಿಸಿ. ಅದಾದ ಬಳಿಕವಷ್ಟೇ ಪರೀಕ್ಷೆ ಸುರಕ್ಷಿತವಾಗಿ ನಡೆಸಿರುವುದು ಬೆಳಕಿಗೆ ಬರುತ್ತೆ ಎಂದು ಪರೀಕ್ಷೆಯಲ್ಲಿ ಸಚಿವ ಸುರೇಶ್ ಕುಮಾರ್ ಪಾಸ್ ಅಂತಾ ಬಿಜೆಪಿ ನಾಯಕರ ಹೇಳಿಕೆಗೆ ಟ್ವೀಟ್ ಮೂಲಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

Published On - 2:49 pm, Sat, 4 July 20

ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?