AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳದಲ್ಲಿ ಯುವತಿಯ ಮೇಲೆ ಕಾರು ಹರಿಸಿ ಎಳೆದೊಯ್ದ ಚಾಲಕ: CCTVಯಲ್ಲಿ ಸೆರೆ

ದಕ್ಷಿಣ ಕನ್ನಡ: ಮಂಗಳೂರು ನಗರದ ಕದ್ರಿ ಕಂಬಳದಲ್ಲಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಯುವತಿ ಕಾರಿನಡಿ ಸಿಲುಕಿದ ಭೀಕರ ಘಟನೆ ನಡೆದಿದೆ. ಅಪಘಾತದ ಭೀಕರತೆ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದು, ಕಾರಿನ ಅಡಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಆದರೆ, ಕಾರ್​ ನಿಲ್ಲಿಸಲು ಚಾಲಕ ತಡಮಾಡಿದ್ದರಿಂದ ಯುವತಿ ಮೇಲೆಯೇ ಕಾರು ಹರಿದು ಮಾರುದ್ದ ಎಳೆದೊಯ್ದಿದೆ. ಕೂಡಲೇ ಸ್ಥಳೀಯರು ಮತ್ತು ಪೊಲೀಸ್‌ ಸಿಬಂದಿಗಳು ಕಾರನ್ನು ಮೇಲಕ್ಕೆತ್ತಿ ಅಡಿಗೆ ಬಿದ್ದಿದ್ದ ಯುವತಿಯನ್ನು ಹೊರಗಡೆ ತೆಗೆದಿದ್ದಾರೆ.ಯುವತಿಯ […]

ಕಂಬಳದಲ್ಲಿ ಯುವತಿಯ ಮೇಲೆ ಕಾರು ಹರಿಸಿ ಎಳೆದೊಯ್ದ ಚಾಲಕ: CCTVಯಲ್ಲಿ ಸೆರೆ
KUSHAL V
| Edited By: |

Updated on: Aug 08, 2020 | 12:33 PM

Share

ದಕ್ಷಿಣ ಕನ್ನಡ: ಮಂಗಳೂರು ನಗರದ ಕದ್ರಿ ಕಂಬಳದಲ್ಲಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಯುವತಿ ಕಾರಿನಡಿ ಸಿಲುಕಿದ ಭೀಕರ ಘಟನೆ ನಡೆದಿದೆ. ಅಪಘಾತದ ಭೀಕರತೆ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದು, ಕಾರಿನ ಅಡಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಆದರೆ, ಕಾರ್​ ನಿಲ್ಲಿಸಲು ಚಾಲಕ ತಡಮಾಡಿದ್ದರಿಂದ ಯುವತಿ ಮೇಲೆಯೇ ಕಾರು ಹರಿದು ಮಾರುದ್ದ ಎಳೆದೊಯ್ದಿದೆ.

ಕೂಡಲೇ ಸ್ಥಳೀಯರು ಮತ್ತು ಪೊಲೀಸ್‌ ಸಿಬಂದಿಗಳು ಕಾರನ್ನು ಮೇಲಕ್ಕೆತ್ತಿ ಅಡಿಗೆ ಬಿದ್ದಿದ್ದ ಯುವತಿಯನ್ನು ಹೊರಗಡೆ ತೆಗೆದಿದ್ದಾರೆ.ಯುವತಿಯ ತಲೆಗೆ ಮತ್ತು ಪಕ್ಕೆಲುಬುಗಳಿಗೇ ತೀವ್ರ ಗಾಯಗಳಾಗಿದೆ.

ಇದೇ ಮಾರ್ಗವಾಗಿ ಬರುತ್ತಿದ್ದ ಶಾಸಕ ಯು.ಟಿ ಖಾದರ್ ಕೂಡಲೇ‌ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ಕಾರಿನಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ  ಮೆರೆದಿದ್ದಾರೆ.

ಯುವತಿ ಕಾರಿನಡಿಗೆ ಬಿದ್ದರೂ ಕಾರನ್ನು ಚಲಾಯಿಸಿದ ಕಾರು ಚಾಲಕನ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು ಕಾರು ಚಾಲಕನ ವಿರುದ್ಧ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.facebook.com/Tv9Kannada/posts/1409808459221380

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?