AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳದಲ್ಲಿ ಯುವತಿಯ ಮೇಲೆ ಕಾರು ಹರಿಸಿ ಎಳೆದೊಯ್ದ ಚಾಲಕ: CCTVಯಲ್ಲಿ ಸೆರೆ

ದಕ್ಷಿಣ ಕನ್ನಡ: ಮಂಗಳೂರು ನಗರದ ಕದ್ರಿ ಕಂಬಳದಲ್ಲಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಯುವತಿ ಕಾರಿನಡಿ ಸಿಲುಕಿದ ಭೀಕರ ಘಟನೆ ನಡೆದಿದೆ. ಅಪಘಾತದ ಭೀಕರತೆ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದು, ಕಾರಿನ ಅಡಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಆದರೆ, ಕಾರ್​ ನಿಲ್ಲಿಸಲು ಚಾಲಕ ತಡಮಾಡಿದ್ದರಿಂದ ಯುವತಿ ಮೇಲೆಯೇ ಕಾರು ಹರಿದು ಮಾರುದ್ದ ಎಳೆದೊಯ್ದಿದೆ. ಕೂಡಲೇ ಸ್ಥಳೀಯರು ಮತ್ತು ಪೊಲೀಸ್‌ ಸಿಬಂದಿಗಳು ಕಾರನ್ನು ಮೇಲಕ್ಕೆತ್ತಿ ಅಡಿಗೆ ಬಿದ್ದಿದ್ದ ಯುವತಿಯನ್ನು ಹೊರಗಡೆ ತೆಗೆದಿದ್ದಾರೆ.ಯುವತಿಯ […]

ಕಂಬಳದಲ್ಲಿ ಯುವತಿಯ ಮೇಲೆ ಕಾರು ಹರಿಸಿ ಎಳೆದೊಯ್ದ ಚಾಲಕ: CCTVಯಲ್ಲಿ ಸೆರೆ
KUSHAL V
| Edited By: |

Updated on: Aug 08, 2020 | 12:33 PM

Share

ದಕ್ಷಿಣ ಕನ್ನಡ: ಮಂಗಳೂರು ನಗರದ ಕದ್ರಿ ಕಂಬಳದಲ್ಲಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಯುವತಿ ಕಾರಿನಡಿ ಸಿಲುಕಿದ ಭೀಕರ ಘಟನೆ ನಡೆದಿದೆ. ಅಪಘಾತದ ಭೀಕರತೆ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದು, ಕಾರಿನ ಅಡಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಆದರೆ, ಕಾರ್​ ನಿಲ್ಲಿಸಲು ಚಾಲಕ ತಡಮಾಡಿದ್ದರಿಂದ ಯುವತಿ ಮೇಲೆಯೇ ಕಾರು ಹರಿದು ಮಾರುದ್ದ ಎಳೆದೊಯ್ದಿದೆ.

ಕೂಡಲೇ ಸ್ಥಳೀಯರು ಮತ್ತು ಪೊಲೀಸ್‌ ಸಿಬಂದಿಗಳು ಕಾರನ್ನು ಮೇಲಕ್ಕೆತ್ತಿ ಅಡಿಗೆ ಬಿದ್ದಿದ್ದ ಯುವತಿಯನ್ನು ಹೊರಗಡೆ ತೆಗೆದಿದ್ದಾರೆ.ಯುವತಿಯ ತಲೆಗೆ ಮತ್ತು ಪಕ್ಕೆಲುಬುಗಳಿಗೇ ತೀವ್ರ ಗಾಯಗಳಾಗಿದೆ.

ಇದೇ ಮಾರ್ಗವಾಗಿ ಬರುತ್ತಿದ್ದ ಶಾಸಕ ಯು.ಟಿ ಖಾದರ್ ಕೂಡಲೇ‌ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ಕಾರಿನಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ  ಮೆರೆದಿದ್ದಾರೆ.

ಯುವತಿ ಕಾರಿನಡಿಗೆ ಬಿದ್ದರೂ ಕಾರನ್ನು ಚಲಾಯಿಸಿದ ಕಾರು ಚಾಲಕನ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು ಕಾರು ಚಾಲಕನ ವಿರುದ್ಧ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.facebook.com/Tv9Kannada/posts/1409808459221380

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್