AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಬಳದಲ್ಲಿ ಯುವತಿಯ ಮೇಲೆ ಕಾರು ಹರಿಸಿ ಎಳೆದೊಯ್ದ ಚಾಲಕ: CCTVಯಲ್ಲಿ ಸೆರೆ

ದಕ್ಷಿಣ ಕನ್ನಡ: ಮಂಗಳೂರು ನಗರದ ಕದ್ರಿ ಕಂಬಳದಲ್ಲಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಯುವತಿ ಕಾರಿನಡಿ ಸಿಲುಕಿದ ಭೀಕರ ಘಟನೆ ನಡೆದಿದೆ. ಅಪಘಾತದ ಭೀಕರತೆ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದು, ಕಾರಿನ ಅಡಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಆದರೆ, ಕಾರ್​ ನಿಲ್ಲಿಸಲು ಚಾಲಕ ತಡಮಾಡಿದ್ದರಿಂದ ಯುವತಿ ಮೇಲೆಯೇ ಕಾರು ಹರಿದು ಮಾರುದ್ದ ಎಳೆದೊಯ್ದಿದೆ. ಕೂಡಲೇ ಸ್ಥಳೀಯರು ಮತ್ತು ಪೊಲೀಸ್‌ ಸಿಬಂದಿಗಳು ಕಾರನ್ನು ಮೇಲಕ್ಕೆತ್ತಿ ಅಡಿಗೆ ಬಿದ್ದಿದ್ದ ಯುವತಿಯನ್ನು ಹೊರಗಡೆ ತೆಗೆದಿದ್ದಾರೆ.ಯುವತಿಯ […]

ಕಂಬಳದಲ್ಲಿ ಯುವತಿಯ ಮೇಲೆ ಕಾರು ಹರಿಸಿ ಎಳೆದೊಯ್ದ ಚಾಲಕ: CCTVಯಲ್ಲಿ ಸೆರೆ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 08, 2020 | 12:33 PM

Share

ದಕ್ಷಿಣ ಕನ್ನಡ: ಮಂಗಳೂರು ನಗರದ ಕದ್ರಿ ಕಂಬಳದಲ್ಲಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಯುವತಿ ಕಾರಿನಡಿ ಸಿಲುಕಿದ ಭೀಕರ ಘಟನೆ ನಡೆದಿದೆ. ಅಪಘಾತದ ಭೀಕರತೆ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದು, ಕಾರಿನ ಅಡಿ ಸಿಕ್ಕಿ ಹಾಕಿಕೊಂಡಿದ್ದಾಳೆ. ಆದರೆ, ಕಾರ್​ ನಿಲ್ಲಿಸಲು ಚಾಲಕ ತಡಮಾಡಿದ್ದರಿಂದ ಯುವತಿ ಮೇಲೆಯೇ ಕಾರು ಹರಿದು ಮಾರುದ್ದ ಎಳೆದೊಯ್ದಿದೆ.

ಕೂಡಲೇ ಸ್ಥಳೀಯರು ಮತ್ತು ಪೊಲೀಸ್‌ ಸಿಬಂದಿಗಳು ಕಾರನ್ನು ಮೇಲಕ್ಕೆತ್ತಿ ಅಡಿಗೆ ಬಿದ್ದಿದ್ದ ಯುವತಿಯನ್ನು ಹೊರಗಡೆ ತೆಗೆದಿದ್ದಾರೆ.ಯುವತಿಯ ತಲೆಗೆ ಮತ್ತು ಪಕ್ಕೆಲುಬುಗಳಿಗೇ ತೀವ್ರ ಗಾಯಗಳಾಗಿದೆ.

ಇದೇ ಮಾರ್ಗವಾಗಿ ಬರುತ್ತಿದ್ದ ಶಾಸಕ ಯು.ಟಿ ಖಾದರ್ ಕೂಡಲೇ‌ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ತಮ್ಮ ಕಾರಿನಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ  ಮೆರೆದಿದ್ದಾರೆ.

ಯುವತಿ ಕಾರಿನಡಿಗೆ ಬಿದ್ದರೂ ಕಾರನ್ನು ಚಲಾಯಿಸಿದ ಕಾರು ಚಾಲಕನ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು ಕಾರು ಚಾಲಕನ ವಿರುದ್ಧ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.facebook.com/Tv9Kannada/posts/1409808459221380

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ