‘ಸ್ವಾಭಿಮಾನ’ ಹೆಸರಲ್ಲಿ ಶರತ್ ಸ್ಪರ್ಧೆ, ನಾಮಪತ್ರ ಸಲ್ಲಿಕೆಗೆ ಬರುವವರಿಗೆ ಟಿ ಶರ್ಟ್

ಬೆಂಗಳೂರು ಗ್ರಾಮಾಂತರ: ಎಂಟಿಬಿ ನಾಗಾರಜ್​ ವಿರುದ್ಧ ತೊಡೆ ತಟ್ಟಿದ ಶರತ್ ಬಚ್ಚೇಗೌಡ, ಡಿ.5ರಂದು ನಡೆಯಲಿರುವ ಉಪಚುನಾವಣೆಗೆ ಹೊಸಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವ ಕಾರ್ಯಕರ್ತರಿಗೆ ಸ್ವಾಭಿಮಾನಿ ಅನ್ನುವ ಹೆಸರು ಮುದ್ರಿತ ಟಿ-ಶರ್ಟ್ ಹಂಚಿಕೆ ಮಾಡಿದ್ದಾರೆ. ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವಾಗ ಟಿ-ಶರ್ಟ್ ಧರಿಸುವಂತೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಸ್ವಾಭಿಮಾನದ ಹೆಸರಲ್ಲಿ […]

ಸ್ವಾಭಿಮಾನ ಹೆಸರಲ್ಲಿ ಶರತ್ ಸ್ಪರ್ಧೆ, ನಾಮಪತ್ರ ಸಲ್ಲಿಕೆಗೆ ಬರುವವರಿಗೆ ಟಿ ಶರ್ಟ್
ಸಾಧು ಶ್ರೀನಾಥ್​

Updated on: Nov 14, 2019 | 10:40 AM

ಬೆಂಗಳೂರು ಗ್ರಾಮಾಂತರ: ಎಂಟಿಬಿ ನಾಗಾರಜ್​ ವಿರುದ್ಧ ತೊಡೆ ತಟ್ಟಿದ ಶರತ್ ಬಚ್ಚೇಗೌಡ, ಡಿ.5ರಂದು ನಡೆಯಲಿರುವ ಉಪಚುನಾವಣೆಗೆ ಹೊಸಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವ ಕಾರ್ಯಕರ್ತರಿಗೆ ಸ್ವಾಭಿಮಾನಿ ಅನ್ನುವ ಹೆಸರು ಮುದ್ರಿತ ಟಿ-ಶರ್ಟ್ ಹಂಚಿಕೆ ಮಾಡಿದ್ದಾರೆ.

ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಬರುವಾಗ ಟಿ-ಶರ್ಟ್ ಧರಿಸುವಂತೆ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಬೆಂಬಲಿಗರಿಗೆ ಕರೆ ನೀಡಿದ್ದಾರೆ. ಸ್ವಾಭಿಮಾನದ ಹೆಸರಲ್ಲಿ ಸ್ಪರ್ಧೆ ಮಾಡುತ್ತಿರುವ ಶರತ್ ಬಚ್ಚೇಗೌಡ ಇಂದು ನಾಮಪತ್ರ ಸಲ್ಲಿಸುವ ಮುಖಾಂತರ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ:
ಅಧಿಕೃತವಾಗಿ ಬಿಜೆಪಿ ನಾಯಕರು ನನ್ನನ್ನು ಭೇಟಿ ಮಾಡಿಲ್ಲ. ನಾನು ಸ್ವತಂತ್ರ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸುತ್ತೇನೆ. ಹೆಚ್​.ಡಿ.ಕುಮಾರಸ್ವಾಮಿ ಬೆಂಬಲ ಸೂಚಿಸಿರುವುದನ್ನ ಸ್ವಾಗತ ಮಾಡ್ತೀನಿ. ಇನ್ನೂ ಕುಮಾರಣ್ಣ ಅವರ ಭೇಟಿ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ದೇವನಹಳ್ಳಿಯ ವಿಜಯಪುರದಲ್ಲಿ ಶರತ್ ಬಚ್ಚೇಗೌಡ ಹೇಳಿದ್ದಾರೆ.

Published On - 10:16 am, Thu, 14 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us