AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ರಿಪೋರ್ಟ್ ಇಲ್ಲ ಅಂತ ಚಿಕಿತ್ಸೆಗೆ ನಕಾರ.. ಪತ್ನಿ-ಮಗಳ ಕಣ್ಣು ಮುಂದೆಯೇ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ

ರಾಜ್ಯದಲ್ಲಿ ಅದ್ರಲ್ಲೂ ಬೆಂಗಳೂರಿನ ಪರಿಸ್ಥಿತಿ ಹೇಗಾಗಿದೆ ಅಂದ್ರೆ, ಆಕ್ಸಿಜನ್ ಕೂಡ ಸಿಗದೆ ಸೋಂಕಿತರು ನರಳಿ ನರಳಿ ಪ್ರಾಣ ಬಿಡ್ತಿದ್ದಾರೆ. ನಗರದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಾಗಿದ್ದು ಉಸಿರಾಟ ಸಮಸ್ಯೆಯಿಂದ ಸೋಂಕಿತರು ವಿಲ ವಿಲ ಅಂತಿದ್ದಾರೆ. ಬಹಳಷ್ಟು ಜನ್ರ ಜೀವವೇ ಹಾರಿ ಹೋಗಿದೆ.

ಕೊವಿಡ್ ರಿಪೋರ್ಟ್ ಇಲ್ಲ ಅಂತ ಚಿಕಿತ್ಸೆಗೆ ನಕಾರ.. ಪತ್ನಿ-ಮಗಳ ಕಣ್ಣು ಮುಂದೆಯೇ ನರಳಿ ನರಳಿ ಪ್ರಾಣ ಬಿಟ್ಟ ವ್ಯಕ್ತಿ
ಬೆಳಗ್ಗೆ ಕೊರೊನಾಗೆ ಬಲಿಯಾದ ತಾಯಿಯ ಮುಖ‌ ನೋಡಲು ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ... ಸ್ಥಳದಲ್ಲೇ ಕುಸಿದು ಸಾವು
ಆಯೇಷಾ ಬಾನು
|

Updated on:Apr 19, 2021 | 9:13 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅದೆಷ್ಟೊ ಮಂದಿ ಸೋಂಕಿತರು ಉಸಿರಾಟ ಸಮಸ್ಯೆಯಿಂದ ಆಕ್ಸಿಜನ್​​ ಇರೋ ಆಸ್ಪತ್ರೆಗಾಗಿ ನಿತ್ಯವೂ ಅಲೆದಾಡುತ್ತಲೇ ಇದ್ದಾರೆ. ಪ್ರಾಣ ಉಳಿಸಿಕೊಳ್ಳೋಕೆ ಪರದಾಡುತ್ತಲೇ ಇದ್ದಾರೆ. ಇದರ ನಡುವೆ ಜನ ಸಾಮಾನ್ಯರು ಸಹ ಚಿಕಿತ್ಸೆಗಾಗಿ ನರಳುವಂತ ಪರಿಸ್ಥಿತಿ ಬೆಂಗಳೂರಿನಲ್ಲಿ ಉಂಟಾಗಿದೆ. ಅದೇ ರೀತಿ 38 ವರ್ಷದ ವ್ಯಕ್ತಿ ಆಕ್ಸಿಜನ್ ಸಿಗದೇ ನರಳಿ ನರಳಿ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಹೊಸಕೆರೆ ಗ್ರಾಮದ ಜಗನ್ನಾಥ್​ಗೆ ಚಿಕಿತ್ಸೆ ಕೊಡಿಸಲು ಪತ್ನಿ-ಮಗಳು ಬೆಂಗಳೂರೆಲ್ಲ ಅಲೆದಾಡಿ ಸುಸ್ತಾಗಿದ್ದು ಕೊನೆಗೆ ಪತಿಯನ್ನು ಉಳಿಸಿಕೊಳ್ಳಲು ಆಗಲೇ ಇಲ್ಲ.

ಕೊವಿಡ್ ರಿಪೋರ್ಟ್ ಇಲ್ಲದೇ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ಆಸ್ಪತ್ರೆಗಳು ಮೃತ ಜಗನ್ನಾಥ್​ರಿಗೆ ಚಿಕಿತ್ಸೆ ನೀಡಲು ನಿರಾಕರಿಸಿವೆ. ಪತ್ನಿ-ಮಗಳು ಅಂಗಲಾಚಿದ್ರೂ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಸತತ ಎರಡು ದಿನ ಆಸ್ಪತ್ರೆ ಸುತ್ತಿದ್ರೂ ಜಗನ್ನಾಥ್​ರಿಗೆ ಚಿಕಿತ್ಸೆ ಸಿಕಿಲ್ಲ. ಕೊನೆಗೆ ಪತ್ನಿ ಮತ್ತು ಮಗಳ ಕಣ್ಣೆದುರೇ ಉಸಿರಾಟ ಸಮಸ್ಯೆಯಿಂದ ನರಳಿ ನರಳಿ ಸಾವನ್ನಪ್ಪಿದ್ದಾರೆ.

ನನ್ನ ಪತಿ ತುಂಬಾ ಚೆನ್ನಾಗಿ ಇದ್ರು, ಬೇಡಿಕೊಂಡ್ರೂ ಆಕ್ಸಿಜನ್ ಸಿಗಲೇ ಇಲ್ಲ. ಕೊವಿಡ್ ನೆಪದಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ಸಿಗುತ್ತಿಲ್ಲ ಎಂದು ಪತಿಯನ್ನು ಕಳೆದುಕೊಂಡ ಪತ್ನಿ ಅನಿತಾ ಕಣ್ಣೀರಿಟ್ಟಿದ್ದಾರೆ. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಜಗನ್ನಾಥ್ ಸಾಲ ತೀರಿಸಬೇಕು, ಮಗಳಿಗೆ ಒಳ್ಳೆ ಶಿಕ್ಷಣ ಕೊಡಬೇಕೆಂದು ಕನಸು ಕಂಡಿದ್ದರು. ಹೀಗಾಗಿ ಊರು ಬಿಟ್ಟು ಕುಟುಂಬ ಸಮೇತ ಬೆಂಗಳೂರಿಗೆ ಬಂದಿದ್ದರು. ಆದ್ರೆ ಈಗ ಉಸಿರಾಟದ ಸಮಸ್ಯೆಯಿಂದ ಆಕ್ಸಿಜನ್ ಸಿಗದೇ ಮೃತಪಟ್ಟಿದ್ದಾರೆ. ಸದ್ಯ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆ ಕೊರೊನಾ ಮಾರ್ಗಸೂಚಿಯಂತೆ ಜಗನ್ನಾಥ್​ರ ಅಂತ್ಯಸಂಸ್ಕಾರ ನಡೆಸಿದೆ. ಇದೀಗ ಜಗನ್ನಾಥ್ ಕಳೆದುಕೊಂಡು ಪತ್ನಿ-ಮಗಳು ಕಂಗಾಲಾಗಿದ್ದಾರೆ.

ಇದನ್ನೂ ಓದಿ: ವೈದ್ಯರಾಗಿದ್ದರೂ ತಂದೆ-ತಾಯಿಯನ್ನು ಉಳಿಸಿಕೊಳ್ಳಲಾಗಲಿಲ್ಲ.. ಪೋಷಕರ ಕಳೆದುಕೊಂಡು ಕಣ್ಣೀರಿಟ್ಟ ವೈದ್ಯೆ

Published On - 9:12 am, Mon, 19 April 21

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ