AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಹಣ ಪಾವತಿಸಿಲ್ಲ ಎಂದು ಕೊವಿಡ್ ಸೋಂಕಿತರ ಮೃತದೇಹ ಹಸ್ತಾಂತರಿಸಲು ತೊಂದರೆ ಮಾಡುವಂತಿಲ್ಲ

ಕೊರೊನಾ ಮೃತದೇಹ ನೀಡಲು ತೊಂದರೆ ಮಾಡಿದರೆ ಆಸ್ಪತ್ರೆಗೇ ಕುತ್ತು ಉಂಟಾಗಲಿದೆ. ಕೊರೊನಾದಿಂದ ಮೃತಪಟ್ಟವರ ಶವ ಹಸ್ತಾಂತರ ಸುಗಮವಾಗಿ ಆಗಬೇಕು. ಚಿಕಿತ್ಸೆಯ ಬಾಕಿ ಹಣ ಪಾವತಿಸುವಂತೆ ಒತ್ತಾಯ ಸಲ್ಲದು.

ಬಾಕಿ ಹಣ ಪಾವತಿಸಿಲ್ಲ ಎಂದು ಕೊವಿಡ್ ಸೋಂಕಿತರ ಮೃತದೇಹ ಹಸ್ತಾಂತರಿಸಲು ತೊಂದರೆ ಮಾಡುವಂತಿಲ್ಲ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 14, 2021 | 1:12 PM

ಬೆಂಗಳೂರು: ಬಾಕಿ ಇರುವ ಚಿಕಿತ್ಸಾ ಶುಲ್ಕವನ್ನು ಪಾವತಿ ಮಾಡದ ಕಾರಣ ನೀಡಿ ಕೋವಿಡ್‌ ಸೋಂಕಿತರ ಮೃತ ದೇಹವನ್ನು ಹಸ್ತಾಂತರಿಸುವಲ್ಲಿ ಆಸ್ಪತ್ರೆಗಳು ವಿಳಂಬ ಮಾಡುವಂತಿಲ್ಲ ಅಥವಾ ನಿರಾಕರಿಸುವಂತಿಲ್ಲ ಎಂದು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ್ ನಾರಾಯಣ ಸರ್ಕಾರಿ ಆದೇಶವನ್ನು ಟ್ವೀಟ್ ಮೂಲಕ ಉಲ್ಲೇಖಿಸಿ ಇಂದು (ಮೇ 28) ಮತ್ತೆ ಎಚ್ಚರಿಕೆ ನೀಡಿದ್ದಾರೆ.

ಮೇ 24ರಂದು ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಅಶ್ವತ್ಥ್ ನಾರಾಯಣ ಆ ಸೂಚನೆಯನ್ನು ಇಂದು ಮತ್ತೆ ಹಂಚಿಕೊಂಡಿದ್ದಾರೆ. ಇಂತಹ ಪ್ರಕರಣಗಳು ವರದಿಯಾದಲ್ಲಿ ಅಂತಹ ಆಸ್ಪತ್ರೆಗಳ ನೋಂದಣಿಯನ್ನು ರದ್ದುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ಮೃತದೇಹ ನೀಡಲು ತೊಂದರೆ ಮಾಡಿದರೆ ಆಸ್ಪತ್ರೆಗೇ ಕುತ್ತು ಉಂಟಾಗಲಿದೆ. ಕೊರೊನಾದಿಂದ ಮೃತಪಟ್ಟವರ ಶವ ಹಸ್ತಾಂತರ ಸುಗಮವಾಗಿ ಆಗಬೇಕು. ಚಿಕಿತ್ಸೆಯ ಬಾಕಿ ಹಣ ಪಾವತಿಸುವಂತೆ ಒತ್ತಾಯ ಸಲ್ಲದು ಎಂದು ಆಸ್ಪತ್ರೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೇ 24ರಂದು ಖಡಕ್ ಆದೇಶ ಹೊರಡಿಸಿತ್ತು.

ಶವ ಹಸ್ತಾಂತರಕ್ಕೆ ಬಾಕಿ ಬಿಲ್ ಪಾವತಿಗೆ ಒತ್ತಡ ಹಿನ್ನೆಲೆಯಲ್ಲಿ, KPME ಕಾಯ್ದೆ ಅಡಿ ಬಾಕಿ ಬಿಲ್‌ಗೆ ಒತ್ತಾಯಿಸುವಂತಿಲ್ಲ. ಬಿಲ್ ಕಟ್ಟದಿದ್ದರೆ ಶವ ಹಸ್ತಾಂತರಕ್ಕೆ ನಿರಾಕರಿಸಬಾರದು. ಶವ ನೀಡಲು ಸಮಸ್ಯೆ ಮಾಡಿದರೆ ನೋಂದಣಿಯೇ ರದ್ದುಗೊಳಿಸುವ ಆದೇಶವನ್ನು ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೀಡಿತ್ತು.

ಈ ಬಗ್ಗೆ ನಿಗಾವಹಿಸುವಂತೆ ಆಯಾ ಡಿಸಿಗಳಿಗೆ ನಿರ್ದೇಶನ ನೀಡಲಾಗಿದ್ದು, ಶವ ಹಸ್ತಾಂತರಕ್ಕೆ ಸತಾಯಿಸಿದ ಪ್ರಕರಣಗಳಿದ್ದರೆ ತಿಳಿಸಿ ಎಂದು ಆಯಾ ಡಿಸಿಗಳು, ಜಿ.ಪಂ. ಸಿಇಒ, ಬಿಬಿಎಂಪಿಗೆ ನಿರ್ದೇಶನ ಮಾಡಲಾಗಿದೆ. ಈ ಬಗ್ಗೆ ವಾರಕ್ಕೆ ಒಂದು ಬಾರಿ ವರದಿ ಸಲ್ಲಿಸಲು ಕೂಡ ಸೂಚಿಸಲಾಗಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರ ಕೊರೊನಾ ಬಗ್ಗೆ ಅರ್ಥಮಾಡಿಕೊಂಡಿಲ್ಲ; ಲಸಿಕಾ ಅಭಿಯಾನ ಸಮರ್ಪಕವಾಗಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ

Corona Vaccine: ಡಿಸೆಂಬರ್ ಒಳಗೆ ಭಾರತದ 108 ಕೋಟಿ ಜನರಿಗೆ ಲಸಿಕೆ ನೀಡಿಕೆ: ಕೇಂದ್ರ ಸಚಿವ ಹೇಳಿಕೆ

Published On - 5:16 pm, Fri, 28 May 21

ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ