AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಹಣ ಪಾವತಿಸಿಲ್ಲ ಎಂದು ಕೊವಿಡ್ ಸೋಂಕಿತರ ಮೃತದೇಹ ಹಸ್ತಾಂತರಿಸಲು ತೊಂದರೆ ಮಾಡುವಂತಿಲ್ಲ

ಕೊರೊನಾ ಮೃತದೇಹ ನೀಡಲು ತೊಂದರೆ ಮಾಡಿದರೆ ಆಸ್ಪತ್ರೆಗೇ ಕುತ್ತು ಉಂಟಾಗಲಿದೆ. ಕೊರೊನಾದಿಂದ ಮೃತಪಟ್ಟವರ ಶವ ಹಸ್ತಾಂತರ ಸುಗಮವಾಗಿ ಆಗಬೇಕು. ಚಿಕಿತ್ಸೆಯ ಬಾಕಿ ಹಣ ಪಾವತಿಸುವಂತೆ ಒತ್ತಾಯ ಸಲ್ಲದು.

ಬಾಕಿ ಹಣ ಪಾವತಿಸಿಲ್ಲ ಎಂದು ಕೊವಿಡ್ ಸೋಂಕಿತರ ಮೃತದೇಹ ಹಸ್ತಾಂತರಿಸಲು ತೊಂದರೆ ಮಾಡುವಂತಿಲ್ಲ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 14, 2021 | 1:12 PM

Share

ಬೆಂಗಳೂರು: ಬಾಕಿ ಇರುವ ಚಿಕಿತ್ಸಾ ಶುಲ್ಕವನ್ನು ಪಾವತಿ ಮಾಡದ ಕಾರಣ ನೀಡಿ ಕೋವಿಡ್‌ ಸೋಂಕಿತರ ಮೃತ ದೇಹವನ್ನು ಹಸ್ತಾಂತರಿಸುವಲ್ಲಿ ಆಸ್ಪತ್ರೆಗಳು ವಿಳಂಬ ಮಾಡುವಂತಿಲ್ಲ ಅಥವಾ ನಿರಾಕರಿಸುವಂತಿಲ್ಲ ಎಂದು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ್ ನಾರಾಯಣ ಸರ್ಕಾರಿ ಆದೇಶವನ್ನು ಟ್ವೀಟ್ ಮೂಲಕ ಉಲ್ಲೇಖಿಸಿ ಇಂದು (ಮೇ 28) ಮತ್ತೆ ಎಚ್ಚರಿಕೆ ನೀಡಿದ್ದಾರೆ.

ಮೇ 24ರಂದು ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಅಶ್ವತ್ಥ್ ನಾರಾಯಣ ಆ ಸೂಚನೆಯನ್ನು ಇಂದು ಮತ್ತೆ ಹಂಚಿಕೊಂಡಿದ್ದಾರೆ. ಇಂತಹ ಪ್ರಕರಣಗಳು ವರದಿಯಾದಲ್ಲಿ ಅಂತಹ ಆಸ್ಪತ್ರೆಗಳ ನೋಂದಣಿಯನ್ನು ರದ್ದುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ಮೃತದೇಹ ನೀಡಲು ತೊಂದರೆ ಮಾಡಿದರೆ ಆಸ್ಪತ್ರೆಗೇ ಕುತ್ತು ಉಂಟಾಗಲಿದೆ. ಕೊರೊನಾದಿಂದ ಮೃತಪಟ್ಟವರ ಶವ ಹಸ್ತಾಂತರ ಸುಗಮವಾಗಿ ಆಗಬೇಕು. ಚಿಕಿತ್ಸೆಯ ಬಾಕಿ ಹಣ ಪಾವತಿಸುವಂತೆ ಒತ್ತಾಯ ಸಲ್ಲದು ಎಂದು ಆಸ್ಪತ್ರೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೇ 24ರಂದು ಖಡಕ್ ಆದೇಶ ಹೊರಡಿಸಿತ್ತು.

ಶವ ಹಸ್ತಾಂತರಕ್ಕೆ ಬಾಕಿ ಬಿಲ್ ಪಾವತಿಗೆ ಒತ್ತಡ ಹಿನ್ನೆಲೆಯಲ್ಲಿ, KPME ಕಾಯ್ದೆ ಅಡಿ ಬಾಕಿ ಬಿಲ್‌ಗೆ ಒತ್ತಾಯಿಸುವಂತಿಲ್ಲ. ಬಿಲ್ ಕಟ್ಟದಿದ್ದರೆ ಶವ ಹಸ್ತಾಂತರಕ್ಕೆ ನಿರಾಕರಿಸಬಾರದು. ಶವ ನೀಡಲು ಸಮಸ್ಯೆ ಮಾಡಿದರೆ ನೋಂದಣಿಯೇ ರದ್ದುಗೊಳಿಸುವ ಆದೇಶವನ್ನು ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೀಡಿತ್ತು.

ಈ ಬಗ್ಗೆ ನಿಗಾವಹಿಸುವಂತೆ ಆಯಾ ಡಿಸಿಗಳಿಗೆ ನಿರ್ದೇಶನ ನೀಡಲಾಗಿದ್ದು, ಶವ ಹಸ್ತಾಂತರಕ್ಕೆ ಸತಾಯಿಸಿದ ಪ್ರಕರಣಗಳಿದ್ದರೆ ತಿಳಿಸಿ ಎಂದು ಆಯಾ ಡಿಸಿಗಳು, ಜಿ.ಪಂ. ಸಿಇಒ, ಬಿಬಿಎಂಪಿಗೆ ನಿರ್ದೇಶನ ಮಾಡಲಾಗಿದೆ. ಈ ಬಗ್ಗೆ ವಾರಕ್ಕೆ ಒಂದು ಬಾರಿ ವರದಿ ಸಲ್ಲಿಸಲು ಕೂಡ ಸೂಚಿಸಲಾಗಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರ ಕೊರೊನಾ ಬಗ್ಗೆ ಅರ್ಥಮಾಡಿಕೊಂಡಿಲ್ಲ; ಲಸಿಕಾ ಅಭಿಯಾನ ಸಮರ್ಪಕವಾಗಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ

Corona Vaccine: ಡಿಸೆಂಬರ್ ಒಳಗೆ ಭಾರತದ 108 ಕೋಟಿ ಜನರಿಗೆ ಲಸಿಕೆ ನೀಡಿಕೆ: ಕೇಂದ್ರ ಸಚಿವ ಹೇಳಿಕೆ

Published On - 5:16 pm, Fri, 28 May 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ