AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕಿ ಹಣ ಪಾವತಿಸಿಲ್ಲ ಎಂದು ಕೊವಿಡ್ ಸೋಂಕಿತರ ಮೃತದೇಹ ಹಸ್ತಾಂತರಿಸಲು ತೊಂದರೆ ಮಾಡುವಂತಿಲ್ಲ

ಕೊರೊನಾ ಮೃತದೇಹ ನೀಡಲು ತೊಂದರೆ ಮಾಡಿದರೆ ಆಸ್ಪತ್ರೆಗೇ ಕುತ್ತು ಉಂಟಾಗಲಿದೆ. ಕೊರೊನಾದಿಂದ ಮೃತಪಟ್ಟವರ ಶವ ಹಸ್ತಾಂತರ ಸುಗಮವಾಗಿ ಆಗಬೇಕು. ಚಿಕಿತ್ಸೆಯ ಬಾಕಿ ಹಣ ಪಾವತಿಸುವಂತೆ ಒತ್ತಾಯ ಸಲ್ಲದು.

ಬಾಕಿ ಹಣ ಪಾವತಿಸಿಲ್ಲ ಎಂದು ಕೊವಿಡ್ ಸೋಂಕಿತರ ಮೃತದೇಹ ಹಸ್ತಾಂತರಿಸಲು ತೊಂದರೆ ಮಾಡುವಂತಿಲ್ಲ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 14, 2021 | 1:12 PM

Share

ಬೆಂಗಳೂರು: ಬಾಕಿ ಇರುವ ಚಿಕಿತ್ಸಾ ಶುಲ್ಕವನ್ನು ಪಾವತಿ ಮಾಡದ ಕಾರಣ ನೀಡಿ ಕೋವಿಡ್‌ ಸೋಂಕಿತರ ಮೃತ ದೇಹವನ್ನು ಹಸ್ತಾಂತರಿಸುವಲ್ಲಿ ಆಸ್ಪತ್ರೆಗಳು ವಿಳಂಬ ಮಾಡುವಂತಿಲ್ಲ ಅಥವಾ ನಿರಾಕರಿಸುವಂತಿಲ್ಲ ಎಂದು ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥ್ ನಾರಾಯಣ ಸರ್ಕಾರಿ ಆದೇಶವನ್ನು ಟ್ವೀಟ್ ಮೂಲಕ ಉಲ್ಲೇಖಿಸಿ ಇಂದು (ಮೇ 28) ಮತ್ತೆ ಎಚ್ಚರಿಕೆ ನೀಡಿದ್ದಾರೆ.

ಮೇ 24ರಂದು ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು. ಅಶ್ವತ್ಥ್ ನಾರಾಯಣ ಆ ಸೂಚನೆಯನ್ನು ಇಂದು ಮತ್ತೆ ಹಂಚಿಕೊಂಡಿದ್ದಾರೆ. ಇಂತಹ ಪ್ರಕರಣಗಳು ವರದಿಯಾದಲ್ಲಿ ಅಂತಹ ಆಸ್ಪತ್ರೆಗಳ ನೋಂದಣಿಯನ್ನು ರದ್ದುಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ಮೃತದೇಹ ನೀಡಲು ತೊಂದರೆ ಮಾಡಿದರೆ ಆಸ್ಪತ್ರೆಗೇ ಕುತ್ತು ಉಂಟಾಗಲಿದೆ. ಕೊರೊನಾದಿಂದ ಮೃತಪಟ್ಟವರ ಶವ ಹಸ್ತಾಂತರ ಸುಗಮವಾಗಿ ಆಗಬೇಕು. ಚಿಕಿತ್ಸೆಯ ಬಾಕಿ ಹಣ ಪಾವತಿಸುವಂತೆ ಒತ್ತಾಯ ಸಲ್ಲದು ಎಂದು ಆಸ್ಪತ್ರೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೇ 24ರಂದು ಖಡಕ್ ಆದೇಶ ಹೊರಡಿಸಿತ್ತು.

ಶವ ಹಸ್ತಾಂತರಕ್ಕೆ ಬಾಕಿ ಬಿಲ್ ಪಾವತಿಗೆ ಒತ್ತಡ ಹಿನ್ನೆಲೆಯಲ್ಲಿ, KPME ಕಾಯ್ದೆ ಅಡಿ ಬಾಕಿ ಬಿಲ್‌ಗೆ ಒತ್ತಾಯಿಸುವಂತಿಲ್ಲ. ಬಿಲ್ ಕಟ್ಟದಿದ್ದರೆ ಶವ ಹಸ್ತಾಂತರಕ್ಕೆ ನಿರಾಕರಿಸಬಾರದು. ಶವ ನೀಡಲು ಸಮಸ್ಯೆ ಮಾಡಿದರೆ ನೋಂದಣಿಯೇ ರದ್ದುಗೊಳಿಸುವ ಆದೇಶವನ್ನು ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೀಡಿತ್ತು.

ಈ ಬಗ್ಗೆ ನಿಗಾವಹಿಸುವಂತೆ ಆಯಾ ಡಿಸಿಗಳಿಗೆ ನಿರ್ದೇಶನ ನೀಡಲಾಗಿದ್ದು, ಶವ ಹಸ್ತಾಂತರಕ್ಕೆ ಸತಾಯಿಸಿದ ಪ್ರಕರಣಗಳಿದ್ದರೆ ತಿಳಿಸಿ ಎಂದು ಆಯಾ ಡಿಸಿಗಳು, ಜಿ.ಪಂ. ಸಿಇಒ, ಬಿಬಿಎಂಪಿಗೆ ನಿರ್ದೇಶನ ಮಾಡಲಾಗಿದೆ. ಈ ಬಗ್ಗೆ ವಾರಕ್ಕೆ ಒಂದು ಬಾರಿ ವರದಿ ಸಲ್ಲಿಸಲು ಕೂಡ ಸೂಚಿಸಲಾಗಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರ ಕೊರೊನಾ ಬಗ್ಗೆ ಅರ್ಥಮಾಡಿಕೊಂಡಿಲ್ಲ; ಲಸಿಕಾ ಅಭಿಯಾನ ಸಮರ್ಪಕವಾಗಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ

Corona Vaccine: ಡಿಸೆಂಬರ್ ಒಳಗೆ ಭಾರತದ 108 ಕೋಟಿ ಜನರಿಗೆ ಲಸಿಕೆ ನೀಡಿಕೆ: ಕೇಂದ್ರ ಸಚಿವ ಹೇಳಿಕೆ

Published On - 5:16 pm, Fri, 28 May 21

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ