ಆಸ್ಪತ್ರೆಗಳ ‘ಚಿಕಿತ್ಸೆಗೆ’ ಆರೋಗ್ಯ ಸಚಿವ ರಾಮುಲು ವಿಭಿನ್ನ ಪ್ರಯೋಗ

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ನಿನ್ನೆ ರಾತ್ರಿಯಿಂದಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಯನ್ನು ಸ್ವತಃ ಶ್ರೀರಾಮುಲು ಅವರೇ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಹತ್ತಿರದಿಂದಲೇ ಅರಿಯುವ ಪ್ರಯತ್ನದಲ್ಲಿದ್ದಾರೆ.  ಇಗಾಗಲೇ ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿದ್ದಾರೆ. ಆಸ್ಪತ್ರೆಯಲ್ಲಿನ ಸಮಸ್ಯೆ ಬಗ್ಗೆ ಸಚಿವ ಶ್ರೀರಾಮುಲು ಸಿಬ್ಬಂದಿಯ ಜೊತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆವರಣದಲ್ಲೇ ಸಭೆಯನ್ನು ನಡೆಸಿದ್ದು,ಸಚಿವರು ಜಿಲ್ಲಾಸ್ಪತ್ರೆಯಲ್ಲಿಇರುವ ಕುಂದು ಕೊರತೆಗಳು, ಆಸ್ಪತ್ರೆಯ ಶುಶ್ರೂಷಕರು, ಡಿ ದರ್ಜೆ ನೌಕರರ ಸಮಸ್ಯೆಗಳು, ಮತ್ತು ಸೇವಾ ಭದ್ರತೆ, ಸಂಬಳದ ಕೊರತೆ […]

ಆಸ್ಪತ್ರೆಗಳ ಚಿಕಿತ್ಸೆಗೆ ಆರೋಗ್ಯ ಸಚಿವ ರಾಮುಲು ವಿಭಿನ್ನ ಪ್ರಯೋಗ
ಸಾಧು ಶ್ರೀನಾಥ್​

Updated on: Sep 25, 2019 | 5:02 PM

ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ನಿನ್ನೆ ರಾತ್ರಿಯಿಂದಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿರುವ ಸಮಸ್ಯೆಯನ್ನು ಸ್ವತಃ ಶ್ರೀರಾಮುಲು ಅವರೇ ಆಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿ ಹತ್ತಿರದಿಂದಲೇ ಅರಿಯುವ ಪ್ರಯತ್ನದಲ್ಲಿದ್ದಾರೆ.  ಇಗಾಗಲೇ ಆಸ್ಪತ್ರೆಯ ಶೌಚಾಲಯದಲ್ಲೇ ಸ್ನಾನ ಮುಗಿಸಿದ್ದಾರೆ.

ಆಸ್ಪತ್ರೆಯಲ್ಲಿನ ಸಮಸ್ಯೆ ಬಗ್ಗೆ ಸಚಿವ ಶ್ರೀರಾಮುಲು ಸಿಬ್ಬಂದಿಯ ಜೊತೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಆವರಣದಲ್ಲೇ ಸಭೆಯನ್ನು ನಡೆಸಿದ್ದು,ಸಚಿವರು ಜಿಲ್ಲಾಸ್ಪತ್ರೆಯಲ್ಲಿಇರುವ ಕುಂದು ಕೊರತೆಗಳು, ಆಸ್ಪತ್ರೆಯ ಶುಶ್ರೂಷಕರು, ಡಿ ದರ್ಜೆ ನೌಕರರ ಸಮಸ್ಯೆಗಳು, ಮತ್ತು ಸೇವಾ ಭದ್ರತೆ, ಸಂಬಳದ ಕೊರತೆ ಬಗ್ಗೆ ಆಲಿಸಿದ್ದಾರೆ. ಸೇವಾ ಭದ್ರತೆ, ಸಂಬಳದ ಕೊರತೆ ಬಗ್ಗೆ ಶುಶ್ರೂಷಕರು ಡಿ ದರ್ಜೆ ನೌಕರು ಸಚಿವರಿಗೆ ಮನವಿ ಮಾಡಿದ್ದಾರೆ.

ಆಸ್ಪತ್ರೆಯ ಸಮಸ್ಯೆಗಳನ್ನು ಅರಿತ ಸಚಿವರು ಕೇಂದ್ರ ಸರ್ಕಾರ ಕೈಗೊಂಡಿರುವ ಹೊಸ ಯೋಜನೆ ಬಗ್ಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ವಿವರಿಸಿದ್ರು. ಇನ್ನೂ ಸಂಬಳ ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ.

Published On - 11:21 am, Wed, 25 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us