AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮುಗಿದಿದ್ದರೂ.. ಹಾಸ್ಟೆಲ್​ನಲ್ಲಿಯೇ ಸೀನಿಯರ್ಸ್​ ಊಟ! ‘ಮುಸುರೆ ಎಂಜಲು ತಿನ್ನಲು ಬರಬೇಡಿ’ ಎಂದು ಅನಿವಾರ್ಯವಾಗಿ ನೋಟಿಸ್ ಹಾಕಿದ ವಾರ್ಡನ್..

ಕಾಲೇಜಿನಲ್ಲಿ ಕೋರ್ಸ್​ ಮುಗಿದಿದ್ದರೂ ವಿದ್ಯಾರ್ಥಿಗಳು ಹಾಸ್ಟೆಲ್​ನಲ್ಲಿಯೇ ಠಿಕಾಣಿ ಹೂಡಿದ್ದಾರೆ. ಇದನ್ನು ತಡೆಯುವುದಕ್ಕೆ ವಾರ್ಡ​ನ್ ಈ ರೀತಿಯಾಗಿ ಅನಿವಾರ್ಯವಾಗಿ, ನೋಟಿಸ್​ ಅಂಟಿಸಿದ್ದಾರೆ!

ಅವಧಿ ಮುಗಿದಿದ್ದರೂ.. ಹಾಸ್ಟೆಲ್​ನಲ್ಲಿಯೇ ಸೀನಿಯರ್ಸ್​ ಊಟ! ‘ಮುಸುರೆ ಎಂಜಲು ತಿನ್ನಲು ಬರಬೇಡಿ’ ಎಂದು ಅನಿವಾರ್ಯವಾಗಿ ನೋಟಿಸ್ ಹಾಕಿದ ವಾರ್ಡನ್..
ಸೂಚನಾ ಫಲಕ
shruti hegde
|

Updated on:Mar 04, 2021 | 2:05 PM

Share

ತುಮಕೂರು: ಹಿರಿಯ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಇರಬಾರದು. ಮುಸುರೆ ಎಂಜಲು ತಿನ್ನುವುದಕ್ಕಾಗಿ ಇಲ್ಲಿ ಬರಬಾರದು, ಬಾಕ್ಸ್ ಕೊಂಡೊಯ್ಯುವುದು ಸದುದ್ದೇಶದ, ಉತ್ತಮ ವ್ಯವಸ್ಥೆಗೆ ಮಾರಕ ಎಂದು ತುಮಕೂರು ವಿಶ್ವವಿದ್ಯಾಲಯದ ಪಿಜಿ ಹಾಸ್ಟೆಲ್ ವಾರ್ಡನ್ ಜಯಶಂಕರ್ ಅವರು​ ನೋಟಿಸ್​ ಅಂಟಿಸಿದ್ದಾರೆ. ಕಾಲೇಜಿನಲ್ಲಿ ಕೋರ್ಸ್​ ಮುಗಿದಿದ್ದರೂ ವಿದ್ಯಾರ್ಥಿಗಳು ಹಾಸ್ಟೆಲ್​ನಲ್ಲಿಯೇ ಠಿಕಾಣಿ ಹೂಡಿದ್ದಾರೆ. ಇದನ್ನು ತಡೆಯುವುದಕ್ಕೆ ವಾರ್ಡ​ನ್ ಈ ರೀತಿಯಾಗಿ ಅನಿವಾರ್ಯವಾಗಿ, ನೋಟಿಸ್​ ಅಂಟಿಸಿದ್ದಾರೆ!

ಸೀನಿಯರ್ ವಿದ್ಯಾರ್ಥಿಗಳ ಹಾಸ್ಟೆಲ್ ಅವಧಿ ಹಾಗೂ ಕೋರ್ಸ್ ಮುಗಿದಿದ್ದರೂ, ಪ್ರತಿದಿನ ಹಾಸ್ಟೆಲ್​ಗೆ ಬಂದು ಊಟ ತಿನ್ನುವುದು ಹಾಗೂ ಬಾಕ್ಸ್​ಗಳಿಗೆ ಹಾಕಿಕೊಂಡು ಹೋಗುತ್ತಿದ್ದರು. ಈ ಕುರಿತಾಗಿ, ಮುಸುರೆ ಮತ್ತು ಎಂಜಲು ತಿನ್ನಲು ಬರಬೇಡಿ. ಈ ಮೂಲಕ ಎಲ್ಲಾ ಸೀನಿಯರ್ ವಿದ್ಯಾರ್ಥಿಗಳಿಗೆ ತಿಳಿಸುವುದೇನೆಂದರೆ, ಯಾವುದೇ ಕಾರಣಕ್ಕೂ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯ ಇರಬಾರದು. ಮುಸುರೆ ಮತ್ತು ಎಂಜಲು ತಿನ್ನಲು ಬರಬಾರದು. ಅನವಶ್ಯಕವಾಗಿ ಬಾಕ್ಸ್ ತೆಗೆದುಕೊಂಡೊಯ್ಯುವುದು ಉತ್ತಮ ವ್ಯವಸ್ಥೆಗೆ ಮಾರಕವಾಗಿದೆ. ವಿದ್ಯಾರ್ಥಿಗಳು ಇದನ್ನ ನಿಲ್ಲಿಸಬೇಕೆಂದು ತಿಳಿಸಲಾಗಿದೆ ಎಂದು ಹಾಸ್ಟೆಲ್​ ವಾರ್ಡನ್ ಜಯಶಂಕರ್ ಸೂಚನಾ ಫಲಕ ಅಂಟಿಸಿದ್ದಾರೆ.

ವಿವಿ ಉಪಕುಲಪತಿ ಪ್ರೊ.ಸಿದ್ದೇಗೌಡ ಈ ಕುರಿತು ಸ್ಪಷ್ಟನೆ ನೀಡಿದ್ದು, ವಾರ್ಡನ್​, ಹಾಸ್ಟೆಲ್ ವ್ಯವಸ್ಥೆ ಸರಿಪಡಿಸಲು ನೋಟಿಸ್ ಹಾಕಿದ್ದಾರೆ. ಆದ್ರೆ ನೋಟಿಸ್ ಬೋರ್ಡ್‌ನಲ್ಲಿ ಹಾಕುವುದು ಸರಿಯಲ್ಲ. ವಿದ್ಯಾರ್ಥಿಗಳಿಗೆ ಮೌಖಿಕವಾಗಿ ಇದನ್ನ ಹೇಳಬಹುದಿತ್ತು. ಈ ಬಗ್ಗೆ ವಾರ್ಡನ್ ಜತೆ ಚರ್ಚೆ ಮಾಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಈ ಹಾಸ್ಟೆಲ್​ನ ನೀರಿನ ಟ್ಯಾಂಕ್​ ನೋಡಿಬಿಟ್ಟರೆ ಬೆಚ್ಚಿ ಬೀಳೋದು ಗ್ಯಾರಂಟಿ: ಇಲ್ಲಿನ ವಿದ್ಯಾರ್ಥಿಗಳಿಗೆ ಆರೋಗ್ಯದ ಚಿಂತೆ

ಇದನ್ನೂ ಓದಿ: ಬೆಂಗಳೂರು ವಿವಿ ಹಾಸ್ಟೆಲ್​ ಅವ್ಯವಸ್ಥೆಯ ಆಗರ: ವಿದ್ಯಾರ್ಥಿನಿಯರ ಗೋಳು ಕೇಳೋರು ಯಾರು?

Published On - 11:02 am, Thu, 4 March 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್