AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಹೋಟೆಲ್ ಮಾಲೀಕನ ಆರ್​ಸಿಬಿ ಅಭಿಮಾನ; ರಾಯಲ್ ಚಾಲೆಂಜರ್ಸ್​ಗೆ ವಿಭಿನ್ನ ರೀತಿಯ ಬೆಂಬಲ

ಸಂತೋಷ್ ರವರ ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ ಹಾಗೂ ಕೆಂಪು ಹಳದಿ ಬಣ್ಣದ ಚಿತ್ರ ಹಾಕಿದ್ದು, ಈ ಸಲ ಕಪ್ ನಮ್ದೆ ಎಂದು ಬರೆದಿದ್ದಾರೆ. ಈ ವಾಹನ ಸದ್ಯ ನೋಡುಗರ ಗಮನಸೆಳೆಯುತ್ತಿದೆ.

ಶಿವಮೊಗ್ಗದಲ್ಲಿ ಹೋಟೆಲ್ ಮಾಲೀಕನ ಆರ್​ಸಿಬಿ ಅಭಿಮಾನ; ರಾಯಲ್ ಚಾಲೆಂಜರ್ಸ್​ಗೆ ವಿಭಿನ್ನ ರೀತಿಯ ಬೆಂಬಲ
ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ
preethi shettigar
| Updated By: ganapathi bhat|

Updated on: Apr 11, 2021 | 5:16 PM

Share

ಶಿವಮೊಗ್ಗ: ಕ್ರಿಕೆಟ್ ಲೋಕದ ವರ್ಣರಂಜಿತ ಪಂದ್ಯಾವಳಿ ಐಪಿಎಲ್ 2021 ಸಾಲಿನ 14ನೇ ಆವೃತ್ತಿಯ ಉದ್ಘಾಟನೆ ಪಂದ್ಯ ಶುಕ್ರವಾರ ನಡೆಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಸೆಣೆಸಾಟದಲ್ಲಿ ಆರ್​ಸಿಬಿ ತಂಡ ಗೆಲವು ಸಾಧಿಸಿದೆ. ಕಳೆದ 13 ಆವೃತ್ತಿಯಿಂದಲೂ ಈ ಸಲ ಕಪ್ ನಮ್ದೆ ಎನ್ನುತ್ತಿರುವ ಅಭಿಮಾನಿಗಳ‌ ಸಂಖ್ಯೆಗೇನೂ ಕೊರತೆ ಇಲ್ಲ. ಅದು ಈ ಬಾರಿ ಕೂಡ ಯತಾಪ್ರಕಾರ ಮುಂದುವರಿದಿದೆ. ಇದಕ್ಕೆ ಕಮ್ಮಕ್ಕು ನೀಡುವಂತೆ ಸಾಗರ ನಗರದ ಗಾಂಧಿನಗರ ಸರ್ಕಲ್​ನಲ್ಲಿ ಇರುವ ಸದ್ಗುರು ಹೋಟೆಲ್ ಮಾಲಿಕ ಸಂತೋಷ್ ಸದ್ಗುರು ಅವರು ವಿಶಿಷ್ಟ ರೀತಿಯಲ್ಲಿ ಈ ಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.

ಸಂತೋಷ ಸದ್ಗುರು ಗಾಂಧಿನಗರ ಸರ್ಕಲ್​ನಲ್ಲಿ ಸದ್ಗುರು ಹೋಟೆಲ್ ಎಂಬ ಹೋಟೆಲ್ ಉದ್ಯಮ ನಡೆಸಿಕೊಂಡು ಬರುತ್ತಿದ್ದು, ಇವರ ಹೋಟೆಲ್​ಗೆ ಬರುವ ಗ್ರಾಹಕರಿಗೆ ಕಂಪ್ಯೂಟರಿಕೃತ ಬಿಲ್ ನೀಡುವ ವೇಳೆ ‌ ಬಿಲ್ ಕೆಳಭಾಗದಲ್ಲಿ ವಿಸಿಟ್ ಎಗೈನ್ ಮತ್ತು ಈ ಸಲ ಕಪ್ ನಮ್ದೆ ಎನ್ನುವ‌ ಬರಹ ಸೇರಿಸಿ ವಿಭಿನ್ನವಾಗಿ ಸಾರ್ವಜನಿಕ ವಲಯದಲ್ಲಿ ಗಮನಸೆಳೆಯುತ್ತಿದ್ದಾರೆ .

ಇದರ ಜೊತೆಗೆ ಸಂತೋಷ್ ರವರ ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ ಹಾಗೂ ಕೆಂಪು ಹಳದಿ ಬಣ್ಣದ ಚಿತ್ರ ಹಾಕಿದ್ದು, ಈ ಸಲ ಕಪ್ ನಮ್ದೆ ಎಂದು ಬರೆದಿದ್ದಾರೆ. ಈ ವಾಹನ ಸದ್ಯ ನೋಡುಗರ ಗಮನಸೆಳೆಯುತ್ತಿದೆ.

RCB FAN

ಹೋಟೆಲ್​ ಬಿಲ್​ನಲ್ಲಿ ಈ ಸಲ ಕಪ್ ನಮ್ದೆ ಎಂಬ ಬರಹ

ಐಪಿಎಲ್ ಕ್ರಿಕೆಟ್ ಮೇಲೆ ಅಪಾರ ಆಸಕ್ತಿ ಹೊಂದಿರುವ ಸಂತೋಷ್ ಆರ್​ಸಿಬಿಗೆ ಈ ರೀತಿ ವಿಭಿನ್ನವಾಗಿ ಪ್ರೋತ್ಸಾಹಿಸುತ್ತಿದ್ದಾರೆ. ಅಲ್ಲದೆ ತಮ್ಮ ಹೋಟೆಲ್​ಗೆ ಬರುವ ಗ್ರಾಹಕರಿಗೆ ಹಾಗೂ ಪ್ರವಾಸಿಗರಿಗೆ ಈ ಸಲ ಕಪ್ ನಮ್ದೆ ಎನ್ನುವ ಬಜಾಜ್ ಸ್ಕೂಟರ್ ಮೇಲೆ ಕುಳಿತು ಫೋಟೋ ತೆಗೆಸಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಸದ್ಯ ಹೊಟೇಲ್​ಗೆ ಬರುವ ಗ್ರಾಹಕರಿಗೆ ಬಿಲ್ ಮತ್ತು ಸ್ಕೂಟರ್ ಪ್ರಮುಖ ಆಕರ್ಷಣೆಯಾಗಿದ್ದು, ಹೊಟೆಲ್​ಗೆ ಬರುವ ಗ್ರಾಹಕರು ಆರ್​ಸಿಬಿಗೆ ಹೆಚ್ಚು ಬೆಂಬಲ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ:

MI vs RCB Predicted Playing 11: ರಾಯಲ್ ಚಾಲೆಂಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮೊದಲ ಪಂದ್ಯದ ಸಂಭಾವ್ಯ ಆಟಗಾರರು ಇವರು

MI vs RCB, IPL 2021 Match 1 Result: ಆರ್​ಸಿಬಿಗೆ ಶುಭಾರಂಭ; ತಂಡವನ್ನು ಗೆಲುವಿನ ದಡ ಮುಟ್ಟಿಸಿದ ಡಿವಿಲಿಯರ್ಸ್

(Hotel owner who is supporting the RCB team in different ways in Shivamogga)

Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
ಮೋದಿ ತೆರಳುತ್ತಿದ್ದ ವೇಳೆ ಬ್ಯಾರಿಕೇಡ್​ ಜಂಪ್ ಮಾಡಲು ಯತ್ನಿಸಿದ ಯುವಕ
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
8 ಸಿಕ್ಸರ್, 83 ರನ್; ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್‌
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
‘ಸನ್ ಆಫ್ ಮುತ್ತಣ್ಣ’ ಸಿನಿಮಾದ ಬಗ್ಗೆ ನಟ ರಂಗಾಯಣ ರಘು ಮಾತು
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ; ಜೋಡಿಯಾದ ಬೃಂದಾ ಆಚಾರ್ಯ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
ಮೋದಿ-ಸಿದ್ದರಾಮಯ್ಯ ಮಟ್ರೋನಲ್ಲಿ ಸಂಚಾರ: ಪ್ರಯಾಣದುದ್ದಕ್ಕೂ ನಗೆಯಲ್ಲಿ ತೇಲಾಟ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
2014ರಿಂದ ಕರ್ನಾಟಕ ರೈಲ್ವೆ ಬಜೆಟ್​ನಲ್ಲಿ 9 ಪಟ್ಟು ಹೆಚ್ಚಳ: ಅಶ್ವಿನಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಹಳದಿ ಮಾರ್ಗಕ್ಕೆ ಚಾಲನೆ ನೀಡಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ವಿಡಿಯೋ ನೋಡಿ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ಈ ಭಾಗದ ಕನಸು ಸಾಕಾರಗೊಳಿಸಿದ ಮೋದಿ: ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ