AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಹೋಟೆಲ್ ಮಾಲೀಕನ ಆರ್​ಸಿಬಿ ಅಭಿಮಾನ; ರಾಯಲ್ ಚಾಲೆಂಜರ್ಸ್​ಗೆ ವಿಭಿನ್ನ ರೀತಿಯ ಬೆಂಬಲ

ಸಂತೋಷ್ ರವರ ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ ಹಾಗೂ ಕೆಂಪು ಹಳದಿ ಬಣ್ಣದ ಚಿತ್ರ ಹಾಕಿದ್ದು, ಈ ಸಲ ಕಪ್ ನಮ್ದೆ ಎಂದು ಬರೆದಿದ್ದಾರೆ. ಈ ವಾಹನ ಸದ್ಯ ನೋಡುಗರ ಗಮನಸೆಳೆಯುತ್ತಿದೆ.

ಶಿವಮೊಗ್ಗದಲ್ಲಿ ಹೋಟೆಲ್ ಮಾಲೀಕನ ಆರ್​ಸಿಬಿ ಅಭಿಮಾನ; ರಾಯಲ್ ಚಾಲೆಂಜರ್ಸ್​ಗೆ ವಿಭಿನ್ನ ರೀತಿಯ ಬೆಂಬಲ
ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ
preethi shettigar
| Edited By: |

Updated on: Apr 11, 2021 | 5:16 PM

Share

ಶಿವಮೊಗ್ಗ: ಕ್ರಿಕೆಟ್ ಲೋಕದ ವರ್ಣರಂಜಿತ ಪಂದ್ಯಾವಳಿ ಐಪಿಎಲ್ 2021 ಸಾಲಿನ 14ನೇ ಆವೃತ್ತಿಯ ಉದ್ಘಾಟನೆ ಪಂದ್ಯ ಶುಕ್ರವಾರ ನಡೆಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಸೆಣೆಸಾಟದಲ್ಲಿ ಆರ್​ಸಿಬಿ ತಂಡ ಗೆಲವು ಸಾಧಿಸಿದೆ. ಕಳೆದ 13 ಆವೃತ್ತಿಯಿಂದಲೂ ಈ ಸಲ ಕಪ್ ನಮ್ದೆ ಎನ್ನುತ್ತಿರುವ ಅಭಿಮಾನಿಗಳ‌ ಸಂಖ್ಯೆಗೇನೂ ಕೊರತೆ ಇಲ್ಲ. ಅದು ಈ ಬಾರಿ ಕೂಡ ಯತಾಪ್ರಕಾರ ಮುಂದುವರಿದಿದೆ. ಇದಕ್ಕೆ ಕಮ್ಮಕ್ಕು ನೀಡುವಂತೆ ಸಾಗರ ನಗರದ ಗಾಂಧಿನಗರ ಸರ್ಕಲ್​ನಲ್ಲಿ ಇರುವ ಸದ್ಗುರು ಹೋಟೆಲ್ ಮಾಲಿಕ ಸಂತೋಷ್ ಸದ್ಗುರು ಅವರು ವಿಶಿಷ್ಟ ರೀತಿಯಲ್ಲಿ ಈ ಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.

ಸಂತೋಷ ಸದ್ಗುರು ಗಾಂಧಿನಗರ ಸರ್ಕಲ್​ನಲ್ಲಿ ಸದ್ಗುರು ಹೋಟೆಲ್ ಎಂಬ ಹೋಟೆಲ್ ಉದ್ಯಮ ನಡೆಸಿಕೊಂಡು ಬರುತ್ತಿದ್ದು, ಇವರ ಹೋಟೆಲ್​ಗೆ ಬರುವ ಗ್ರಾಹಕರಿಗೆ ಕಂಪ್ಯೂಟರಿಕೃತ ಬಿಲ್ ನೀಡುವ ವೇಳೆ ‌ ಬಿಲ್ ಕೆಳಭಾಗದಲ್ಲಿ ವಿಸಿಟ್ ಎಗೈನ್ ಮತ್ತು ಈ ಸಲ ಕಪ್ ನಮ್ದೆ ಎನ್ನುವ‌ ಬರಹ ಸೇರಿಸಿ ವಿಭಿನ್ನವಾಗಿ ಸಾರ್ವಜನಿಕ ವಲಯದಲ್ಲಿ ಗಮನಸೆಳೆಯುತ್ತಿದ್ದಾರೆ .

ಇದರ ಜೊತೆಗೆ ಸಂತೋಷ್ ರವರ ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ ಹಾಗೂ ಕೆಂಪು ಹಳದಿ ಬಣ್ಣದ ಚಿತ್ರ ಹಾಕಿದ್ದು, ಈ ಸಲ ಕಪ್ ನಮ್ದೆ ಎಂದು ಬರೆದಿದ್ದಾರೆ. ಈ ವಾಹನ ಸದ್ಯ ನೋಡುಗರ ಗಮನಸೆಳೆಯುತ್ತಿದೆ.

RCB FAN

ಹೋಟೆಲ್​ ಬಿಲ್​ನಲ್ಲಿ ಈ ಸಲ ಕಪ್ ನಮ್ದೆ ಎಂಬ ಬರಹ

ಐಪಿಎಲ್ ಕ್ರಿಕೆಟ್ ಮೇಲೆ ಅಪಾರ ಆಸಕ್ತಿ ಹೊಂದಿರುವ ಸಂತೋಷ್ ಆರ್​ಸಿಬಿಗೆ ಈ ರೀತಿ ವಿಭಿನ್ನವಾಗಿ ಪ್ರೋತ್ಸಾಹಿಸುತ್ತಿದ್ದಾರೆ. ಅಲ್ಲದೆ ತಮ್ಮ ಹೋಟೆಲ್​ಗೆ ಬರುವ ಗ್ರಾಹಕರಿಗೆ ಹಾಗೂ ಪ್ರವಾಸಿಗರಿಗೆ ಈ ಸಲ ಕಪ್ ನಮ್ದೆ ಎನ್ನುವ ಬಜಾಜ್ ಸ್ಕೂಟರ್ ಮೇಲೆ ಕುಳಿತು ಫೋಟೋ ತೆಗೆಸಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಸದ್ಯ ಹೊಟೇಲ್​ಗೆ ಬರುವ ಗ್ರಾಹಕರಿಗೆ ಬಿಲ್ ಮತ್ತು ಸ್ಕೂಟರ್ ಪ್ರಮುಖ ಆಕರ್ಷಣೆಯಾಗಿದ್ದು, ಹೊಟೆಲ್​ಗೆ ಬರುವ ಗ್ರಾಹಕರು ಆರ್​ಸಿಬಿಗೆ ಹೆಚ್ಚು ಬೆಂಬಲ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ:

MI vs RCB Predicted Playing 11: ರಾಯಲ್ ಚಾಲೆಂಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮೊದಲ ಪಂದ್ಯದ ಸಂಭಾವ್ಯ ಆಟಗಾರರು ಇವರು

MI vs RCB, IPL 2021 Match 1 Result: ಆರ್​ಸಿಬಿಗೆ ಶುಭಾರಂಭ; ತಂಡವನ್ನು ಗೆಲುವಿನ ದಡ ಮುಟ್ಟಿಸಿದ ಡಿವಿಲಿಯರ್ಸ್

(Hotel owner who is supporting the RCB team in different ways in Shivamogga)

Follow Us
preethi shettigar
preethi shettigar
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ