AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಹೋಟೆಲ್ ಮಾಲೀಕನ ಆರ್​ಸಿಬಿ ಅಭಿಮಾನ; ರಾಯಲ್ ಚಾಲೆಂಜರ್ಸ್​ಗೆ ವಿಭಿನ್ನ ರೀತಿಯ ಬೆಂಬಲ

ಸಂತೋಷ್ ರವರ ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ ಹಾಗೂ ಕೆಂಪು ಹಳದಿ ಬಣ್ಣದ ಚಿತ್ರ ಹಾಕಿದ್ದು, ಈ ಸಲ ಕಪ್ ನಮ್ದೆ ಎಂದು ಬರೆದಿದ್ದಾರೆ. ಈ ವಾಹನ ಸದ್ಯ ನೋಡುಗರ ಗಮನಸೆಳೆಯುತ್ತಿದೆ.

ಶಿವಮೊಗ್ಗದಲ್ಲಿ ಹೋಟೆಲ್ ಮಾಲೀಕನ ಆರ್​ಸಿಬಿ ಅಭಿಮಾನ; ರಾಯಲ್ ಚಾಲೆಂಜರ್ಸ್​ಗೆ ವಿಭಿನ್ನ ರೀತಿಯ ಬೆಂಬಲ
ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ
preethi shettigar
| Edited By: |

Updated on: Apr 11, 2021 | 5:16 PM

Share

ಶಿವಮೊಗ್ಗ: ಕ್ರಿಕೆಟ್ ಲೋಕದ ವರ್ಣರಂಜಿತ ಪಂದ್ಯಾವಳಿ ಐಪಿಎಲ್ 2021 ಸಾಲಿನ 14ನೇ ಆವೃತ್ತಿಯ ಉದ್ಘಾಟನೆ ಪಂದ್ಯ ಶುಕ್ರವಾರ ನಡೆಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಸೆಣೆಸಾಟದಲ್ಲಿ ಆರ್​ಸಿಬಿ ತಂಡ ಗೆಲವು ಸಾಧಿಸಿದೆ. ಕಳೆದ 13 ಆವೃತ್ತಿಯಿಂದಲೂ ಈ ಸಲ ಕಪ್ ನಮ್ದೆ ಎನ್ನುತ್ತಿರುವ ಅಭಿಮಾನಿಗಳ‌ ಸಂಖ್ಯೆಗೇನೂ ಕೊರತೆ ಇಲ್ಲ. ಅದು ಈ ಬಾರಿ ಕೂಡ ಯತಾಪ್ರಕಾರ ಮುಂದುವರಿದಿದೆ. ಇದಕ್ಕೆ ಕಮ್ಮಕ್ಕು ನೀಡುವಂತೆ ಸಾಗರ ನಗರದ ಗಾಂಧಿನಗರ ಸರ್ಕಲ್​ನಲ್ಲಿ ಇರುವ ಸದ್ಗುರು ಹೋಟೆಲ್ ಮಾಲಿಕ ಸಂತೋಷ್ ಸದ್ಗುರು ಅವರು ವಿಶಿಷ್ಟ ರೀತಿಯಲ್ಲಿ ಈ ಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.

ಸಂತೋಷ ಸದ್ಗುರು ಗಾಂಧಿನಗರ ಸರ್ಕಲ್​ನಲ್ಲಿ ಸದ್ಗುರು ಹೋಟೆಲ್ ಎಂಬ ಹೋಟೆಲ್ ಉದ್ಯಮ ನಡೆಸಿಕೊಂಡು ಬರುತ್ತಿದ್ದು, ಇವರ ಹೋಟೆಲ್​ಗೆ ಬರುವ ಗ್ರಾಹಕರಿಗೆ ಕಂಪ್ಯೂಟರಿಕೃತ ಬಿಲ್ ನೀಡುವ ವೇಳೆ ‌ ಬಿಲ್ ಕೆಳಭಾಗದಲ್ಲಿ ವಿಸಿಟ್ ಎಗೈನ್ ಮತ್ತು ಈ ಸಲ ಕಪ್ ನಮ್ದೆ ಎನ್ನುವ‌ ಬರಹ ಸೇರಿಸಿ ವಿಭಿನ್ನವಾಗಿ ಸಾರ್ವಜನಿಕ ವಲಯದಲ್ಲಿ ಗಮನಸೆಳೆಯುತ್ತಿದ್ದಾರೆ .

ಇದರ ಜೊತೆಗೆ ಸಂತೋಷ್ ರವರ ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ ಹಾಗೂ ಕೆಂಪು ಹಳದಿ ಬಣ್ಣದ ಚಿತ್ರ ಹಾಕಿದ್ದು, ಈ ಸಲ ಕಪ್ ನಮ್ದೆ ಎಂದು ಬರೆದಿದ್ದಾರೆ. ಈ ವಾಹನ ಸದ್ಯ ನೋಡುಗರ ಗಮನಸೆಳೆಯುತ್ತಿದೆ.

RCB FAN

ಹೋಟೆಲ್​ ಬಿಲ್​ನಲ್ಲಿ ಈ ಸಲ ಕಪ್ ನಮ್ದೆ ಎಂಬ ಬರಹ

ಐಪಿಎಲ್ ಕ್ರಿಕೆಟ್ ಮೇಲೆ ಅಪಾರ ಆಸಕ್ತಿ ಹೊಂದಿರುವ ಸಂತೋಷ್ ಆರ್​ಸಿಬಿಗೆ ಈ ರೀತಿ ವಿಭಿನ್ನವಾಗಿ ಪ್ರೋತ್ಸಾಹಿಸುತ್ತಿದ್ದಾರೆ. ಅಲ್ಲದೆ ತಮ್ಮ ಹೋಟೆಲ್​ಗೆ ಬರುವ ಗ್ರಾಹಕರಿಗೆ ಹಾಗೂ ಪ್ರವಾಸಿಗರಿಗೆ ಈ ಸಲ ಕಪ್ ನಮ್ದೆ ಎನ್ನುವ ಬಜಾಜ್ ಸ್ಕೂಟರ್ ಮೇಲೆ ಕುಳಿತು ಫೋಟೋ ತೆಗೆಸಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಸದ್ಯ ಹೊಟೇಲ್​ಗೆ ಬರುವ ಗ್ರಾಹಕರಿಗೆ ಬಿಲ್ ಮತ್ತು ಸ್ಕೂಟರ್ ಪ್ರಮುಖ ಆಕರ್ಷಣೆಯಾಗಿದ್ದು, ಹೊಟೆಲ್​ಗೆ ಬರುವ ಗ್ರಾಹಕರು ಆರ್​ಸಿಬಿಗೆ ಹೆಚ್ಚು ಬೆಂಬಲ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ:

MI vs RCB Predicted Playing 11: ರಾಯಲ್ ಚಾಲೆಂಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮೊದಲ ಪಂದ್ಯದ ಸಂಭಾವ್ಯ ಆಟಗಾರರು ಇವರು

MI vs RCB, IPL 2021 Match 1 Result: ಆರ್​ಸಿಬಿಗೆ ಶುಭಾರಂಭ; ತಂಡವನ್ನು ಗೆಲುವಿನ ದಡ ಮುಟ್ಟಿಸಿದ ಡಿವಿಲಿಯರ್ಸ್

(Hotel owner who is supporting the RCB team in different ways in Shivamogga)

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!