AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡ್​ ಗುಡ್ಡ ದುರಂತದಲ್ಲಿ ಸಾವನ್ನಪ್ಪಿದ ಕನ್ನಡಿಗರೆಷ್ಟು? ನಾಪತ್ತೆಯಾದವರು ಎಷ್ಟು? ಮಾಹಿತಿ ಹಂಚಿಕೊಂಡ ಸಂತೋಷ್ ಲಾಡ್

ಕಂಡು ಕೇಳರಿಯದ ಮಳೆಗೆ ಕೇರಳ ತತ್ತರಿಸಿದೆ. ರಾತ್ರಿ ಕಳೆದು ಬೆಳಗಾಗೋದ್ರಲ್ಲೇ ಕೇರಳದ ವಯನಾಡಿನಲ್ಲಿ ಗುಡ್ಡ ಕುಸಿದು ಘೋರ ದುರಂತ ನಡೆದಿದೆ. ಕ್ಷಣಕ್ಷಣಕ್ಕೂ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರಿಕೆ ಆಗುತ್ತಿದೆ. ದುರಂತದಲ್ಲಿ ಕರ್ನಾಟಕದ ಜನರು ಮೃತಪಟ್ಟಿದ್ದು, ಪತ್ತೆ ಕೆಲವರು ನಾಪತ್ತೆ ಆಗಿದ್ದಾರೆ. ಸದ್ಯ ರಾಜ್ಯ ಸರ್ಕಾರದ ಸಚಿವ ಸಂತೋಷ್ ಲಾಡ್​ರನ್ನು ಘಟನಾ ಸ್ಥಳಕ್ಕೆ ಕಳುಹಿಸಿದ್ದು, ದುರಂತದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.​

ವಯನಾಡ್​ ಗುಡ್ಡ ದುರಂತದಲ್ಲಿ ಸಾವನ್ನಪ್ಪಿದ ಕನ್ನಡಿಗರೆಷ್ಟು? ನಾಪತ್ತೆಯಾದವರು ಎಷ್ಟು? ಮಾಹಿತಿ ಹಂಚಿಕೊಂಡ ಸಂತೋಷ್ ಲಾಡ್
ವಯನಾಡ್​ ಗುಡ್ಡ ದುರಂತದಲ್ಲಿ ಸಾವನ್ನಪ್ಪಿದ ಕನ್ನಡಿಗರೆಷ್ಟು? ನಾಪತ್ತೆಯಾದವರು ಎಷ್ಟು? ಮಾಹಿತಿ ಹಂಚಿಕೊಂಡ ಸಂತೋಷ್ ಲಾಡ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 31, 2024 | 8:57 PM

Share

ಬೆಂಗಳೂರು/ಕೇರಳ, ಜುಲೈ 31: ಕೇರಳದ ವಯನಾಡು (Wayanad) ಜಿಲ್ಲೆಯಲ್ಲಿ ಗುಡ್ಡ ಕುಸಿದು ದೊಡ್ಡ ದುರಂತ ಸಂಭವಿಸಿದೆ. ಘಟನೆಯಲ್ಲಿ ಸದ್ಯ ಮೃತಪಟ್ಟರವರ ಸಂಖ್ಯೆ 254ಕ್ಕೆ ಏರಿಕೆ ಆಗಿದೆ. ಕರ್ನಾಟಕದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಸಿಎಂ ತಿಳಿಸಿದ್ದಾರೆ. ಸಿದ್ದರಾಮಯ್ಯ ಸೂಚನೆ ಮೇರೆಗೆ ಇದೀಗ ದುರಂತ ಸ್ಥಳಕ್ಕೆ ತುರ್ತಾಗಿ ಅಧಿಕಾರಿಗಳೊಂದಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಭೇಟಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸಂತೋಷ್ ಲಾಡ್​, ಸಿಎಂ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತೆರಳುತ್ತಿದ್ದೇನೆ.

ಸಚಿವ ಸಂತೋಷ್ ಲಾಡ್ ಟ್ವೀಟ್​ 

ಈಗಾಗಲೇ ನಾಲ್ವರು ಕನ್ನಡಿಗರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಇನ್ನೂ ಹಲವರು ಸಿಲುಕಿರುವ, ನಾಪತ್ತೆಯಾಗಿರುವ ಮಾಹಿತಿ ಇದೆ. ಅವರೆಲ್ಲರ ರಕ್ಷಣೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಬೆಪ್ಪಾಡಿಯಲ್ಲಿ ಟಿವಿ9ಗೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದು, ದುರಂತದಲ್ಲಿ ಇದುವರೆಗೆ 254 ಜನರು ಸಾವನಪ್ಪಿದ್ದಾರೆ. ದುರಂತದಲ್ಲಿ ಕರ್ನಾಟಕದ ಮೂವರು ಮೃತಪಟ್ಟಿದ್ದು, 9 ಜನರು ನಾಪತ್ತೆಯಾಗಿದ್ದಾರೆ.​ 10 ಕನ್ನಡಿಗರನ್ನ ರಕ್ಷಿಸಿ ಕಾಳಜಿ ಕೇಂದ್ರದಲ್ಲಿರಿಸಿದ್ದೇವೆ. ಕರ್ನಾಟಕದಿಂದ ಕೇರಳಕ್ಕೆ ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಗಾಯಾಳುಗಳಿಗೆ ಚಿಕಿತ್ಸೆ ಬೇಕಿದ್ದರೆ ಅವರಿಗೂ ಕೊಡುವ ಕೆಲಸ ಮಾಡುತ್ತೇನೆ. ನಾನು ಸಾಕಷ್ಟು ಇಂತಹ ದುರಂತ ಸ್ಥಳಕ್ಕೆ ಭೇಟಿ ಕೊಟ್ಟಿದ್ದೇನೆ. ಇದು ದೊಡ್ಡ ದುರಂತವಾಗಿದೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:54 pm, Wed, 31 July 24

ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು