AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anna Bhagya scheme: ನಿಮ್ಮ ಖಾತೆಗೆ ಅನ್ನಭಾಗ್ಯದ ಹಣ ವರ್ಗಾವಣೆಯಾಗಿದೆಯೇ ಎಂದು ತಿಳಿಯುವುದು ಹೇಗೆ?

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕವೂ ಖಾತೆಗೆ ಹಣ ವರ್ಗಾವಣೆ ಆಗಿದೆಯೇ ಎಂಬುದನ್ನು ಪರಿಶೀಲಿಸಬಹುದಾಗಿದೆ.

Anna Bhagya scheme: ನಿಮ್ಮ ಖಾತೆಗೆ ಅನ್ನಭಾಗ್ಯದ ಹಣ ವರ್ಗಾವಣೆಯಾಗಿದೆಯೇ ಎಂದು ತಿಳಿಯುವುದು ಹೇಗೆ?
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jul 11, 2023 | 7:32 PM

Share

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ (Anna Bhagya scheme) ಬಿಪಿಎಲ್ ಕಾರ್ಡ್ ಹೊಂದಿರುವವರ ಬ್ಯಾಂಕ್ ಖಾತೆಗಳಿಗೆ 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ವರ್ಗಾಯಿಸಲು ಕರ್ನಾಟಕ ಸರ್ಕಾರ ಸೋಮವಾರ ಪ್ರಾರಂಭಿಸಿದೆ. ಯೋಜನೆಯ ಫಲಾನುಭವಿಗಳು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಹಣ ವರ್ಗಾವಣೆಯ ಸ್ಥಿತಿಯನ್ನು ಪರಿಶೀಲಿಸಬಹುದಾಗಿದೆ. ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಾಲನೆ ನೀಡಿದ್ದಾರೆ. ಬಾಗಲಕೋಟೆ, ಧಾರವಾಡ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಾರ್ಡ್ ಹೊಂದಿರುವವರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ಈಗಾಗಲೇ ಹಣವನ್ನು ವರ್ಗಾಯಿಸಿದೆ. ಉಳಿದ ಜಿಲ್ಲೆಗಳ ಕಾರ್ಡ್‌ದಾರರಿಗೆ ಮುಂದಿನ ದಿನಗಳಲ್ಲಿ ಹಣ ಸಿಗಲಿದೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕವೂ ಖಾತೆಗೆ ಹಣ ವರ್ಗಾವಣೆ ಆಗಿದೆಯೇ ಎಂಬುದನ್ನು ಪರಿಶೀಲಿಸಬಹುದಾಗಿದೆ. https://ahara.kar.nic.in/status1/status_of_dbt.aspx ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಕಾರ್ಡ್ ಹೊಂದಿರುವವರು ತಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆಯಾದ ಹಣದ ಸ್ಥಿತಿಯನ್ನು ಪರಿಶೀಲಿಸಬಹುದು. ಇದಕ್ಕಾಗಿ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.

ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನೀಡಲು ಅಗತ್ಯವಿರುವ ಅಕ್ಕಿಯನ್ನು ಖರೀದಿಸಲು ತೊಂದರೆಯನ್ನು ಎದುರಿಸುತ್ತಿರುವ ಕರ್ನಾಟಕ ಸರ್ಕಾರವು ಅಕ್ಕಿ ಬದಲಿಗೆ ಹಣವನ್ನು ನೀಡಲು ನಿರ್ಧರಿಸಿದೆ. ಸರ್ಕಾರ ಭರವಸೆ ನೀಡಿದ ಐದು ಕೆಜಿ ಅಕ್ಕಿ ಬದಲಿಗೆ 170 ರೂಪಾಯಿ ನೀಡಲು ನಿರ್ಧರಿಸಿದ್ದು, ಹಣವನ್ನು ಕುಟುಂಬದ ಮುಖ್ಯಸ್ಥರಿಗೆ ವರ್ಗಾಯಿಸಲಾಗುತ್ತದೆ.

ಖಾತೆಗೆ ಹಣ ವರ್ಗಾವಣೆಯಾದ ನಂತರ ಫಲಾನುಭವಿಗಳಿಗೆ ಎಸ್‌ಎಂಎಸ್ ಸಂದೇಶ ದೊರೆಯಲಿದೆ.

ಇದನ್ನೂ ಓದಿ: ಮೈಸೂರಿನ ಫಲಾನುಭವಿಗಳಿಗೆ ಅನ್ನಭಾಗ್ಯದ ಹಣ ಸಂದಾಯ ಮಾಡಿದ ಸರ್ಕಾರ; ಸಿಎಂಗೆ ಧನ್ಯವಾದ ತಿಳಿಸಿದ ಕುಟುಂಬ

ಅನ್ನಭಾಗ್ಯ ಯೋಜನೆಯ ಪ್ರಯೋಜನ ಪಡೆಯಲು ಇ-ಕೆವೈಸಿ ಮತ್ತು ಆಧಾರ್ ಕಾರ್ಡ್ ಅನ್ನು ಪಡಿತರ ಚೀಟಿಗೆ ಲಿಂಕ್ ಮಾಡಬೇಕು.

ಕಾಂಗ್ರೆಸ್ ನೀಡಿದ ಐದು ಚುನಾವಣಾ ಗ್ಯಾರಂಟಿಗಳಲ್ಲಿ ಅನ್ನ ಭಾಗ್ಯ ಕೂಡ ಒಂದಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಸದಸ್ಯರು ಯೋಜನೆಯಡಿ 10 ಕೆಜಿ ಉಚಿತ ಅಕ್ಕಿಯನ್ನು ಪಡೆಯುತ್ತಾರೆ. ಮುಖ್ಯಮಂತ್ರಿ ಕಚೇರಿ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಸುಮಾರು 1.28 ಕೋಟಿ ಪಡಿತರ ಚೀಟಿದಾರರು ಈ ಯೋಜನೆಗೆ ಅರ್ಹರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:27 pm, Tue, 11 July 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ