AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi: ಬಾಡಿಗೆ ಮನೆ ಬದಲಾಯಿಸಿದ ನಂತರವೂ ಉಚಿತ ವಿದ್ಯುತ್ ಪಡೆಯಬಹುದು! ಮಾಡಬೇಕಾದದ್ದೇನು? ಇಲ್ಲಿದೆ ಮಾಹಿತಿ

ಬಾಡಿಗೆ ಮನೆ ಬದಲಾಯಿಸಿದಾಗ ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುವುದು ಹೇಗೆ ಎಂಬುದೇ ಹೆಚ್ಚಿನವರ ಪ್ರಶ್ನೆಯಾಗಿತ್ತು. ಇದೀಗ ಸರ್ಕಾರ ಅದಕ್ಕೆ ಅವಕಾಶ ಕಲ್ಪಿಸಿದೆ. ನಮ್ಮ ಬೆಸ್ಕಾಂ ಈ ಬಗ್ಗೆ ಮಾಹಿತಿ ನೀಡಿದ್ದು, ಆನ್​ಲೈನ್ ಅರ್ಜಿ ಸಲ್ಲಿಸಲು ಲಿಂಕ್​ ಅನ್ನೂ ನೀಡಿದೆ. ಅರ್ಜಿ ಸಲ್ಲಿಕೆ ಲಿಂಕ್ ಇಲ್ಲಿದೆ. ಜತೆಗೆ ಏನು ಮಾಡಬೇಕೆಂಬ ಮಾಹಿತಿಯೂ ಇದೆ.

Gruha Jyothi: ಬಾಡಿಗೆ ಮನೆ ಬದಲಾಯಿಸಿದ ನಂತರವೂ ಉಚಿತ ವಿದ್ಯುತ್ ಪಡೆಯಬಹುದು! ಮಾಡಬೇಕಾದದ್ದೇನು? ಇಲ್ಲಿದೆ ಮಾಹಿತಿ
ಗೃಹ ಜ್ಯೋತಿ
Ganapathi Sharma
|

Updated on: Aug 08, 2024 | 11:03 AM

Share

ಬೆಂಗಳೂರು, ಆಗಸ್ಟ್ 8: ಕರ್ನಾಟಕ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್​ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ರಾಜ್ಯದ ಎಲ್ಲ ಗ್ರಾಹಕರು ಇದರ ಪ್ರಯೋಜನ ಪಡೆಯಬಹುದೆಂದು ಆರಂಭದಲ್ಲಿಯೇ ಸರ್ಕಾರ ಹೇಳಿತ್ತು. ಬೆಂಗಳೂರು ಹಾಗೂ ಇತರ ನಗರಗಳಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರಿಗೂ ಸರ್ಕಾರ ಯೋಜನೆಯ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಿತ್ತು. ಬೆಂಗಳೂರಿನಲ್ಲಿ ಬಾಡಿಗೆ ಮನೆಗಳಲ್ಲಿರುವ ಸಾವಿರಾರು ಗ್ರಾಹಕರು ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

ಆದರೆ, ಬಾಡಿಗೆ ಮನೆಯನ್ನು ಬದಲಾಯಿಸಬೇಕಾಗಿ ಬಂದಾಗ ಏನು ಮಾಡುವುದು ಎಂಬುದೇ ದೊಡ್ಡ ಪ್ರಶ್ನೆಯಾಗಿತ್ತು. ಬಾಡಿಗೆ ಮನೆಯ ಆರ್​ಆರ್ ಸಂಖ್ಯೆ ನೀಡಿ ಯೋಜನೆಯಡಿ ಶೂನ್ಯ ಬಿಲ್ ಪಡೆಯುತ್ತಿದ್ದವರಿಗೆ ಮನೆ ಬದಲಾಯಿಸಬೇಕಾಗಿ ಬಂದಾಗ ಸಮಸ್ಯೆ ಆಗುತ್ತಿತ್ತು. ಇದನ್ನು ಮನಗಂಡ ಸರ್ಕಾರ ಇದೀಗ ಹೊಸ ಆಯ್ಕೆಯನ್ನು ನೀಡಿದೆ.

ಡಿ-ಲಿಂಕ್ ಸೌಲಭ್ಯ: ಬೆಸ್ಕಾಂ ಮಾಹಿತಿ

ಬಾಡಿಗೆ ಮನೆ ಬದಲಾಯಿಸಿದವರಿಗೆ ಗೃಹ ಜ್ಯೋತಿ ಯೋಜನೆಯಡಿ ಪ್ರಯೋಜನ ಪಡೆದುಕೊಳ್ಳಲು ‘ನಮ್ಮ ಬೆಸ್ಕಾಂ’ ಡಿ-ಲಿಂಕ್ ಸೌಲಭ್ಯ ಕಲ್ಪಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿ ಮಾಹಿತಿ ನೀಡಿದೆ. ಮನೆ ಬದಲಾಯಿಸಿದವರಿಗೆ / ಬಾಡಿಗೆದಾರರಿಗೆ ಗೃಹ ಜ್ಯೋತಿ ಡಿ-ಲಿಂಕ್ ಸೌಲಭ್ಯ ಇದೀಗ ಲಭ್ಯ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

ಗ್ರಾಹಕರು ಮಾಡಬೇಕಾದದ್ದೇನು?

ಸೇವಾಸಿಂಧು ಪೋರ್ಟಲ್​ (https://sevasindhu.karnataka.gov.in/GruhaJyothi_Delink/GetAadhaarData.aspx) ಮೂಲಕ ಲಾಗಿನ್ ಆಗಿ ಹಳೆಯ ಮನೆಯ ಆರ್​ಆರ್​ ಸಂಖ್ಯೆಯನ್ನು ನಮೂದಿಸಿ ಆ ಖಾತೆಯನ್ನು ಡಿ-ಲಿಂಕ್ ಮಾಡಬೇಕು. ನಂತರ ಹೊಸ ಮನೆಯ ಆರ್​ಆರ್​ ಸಂಖ್ಯೆಯನ್ನು ನಮೂದಿಸಿ ಲಿಂಕ್ ಮಾಡಬೇಕು.

ಇದನ್ನೂ ಓದಿ: ಜನರ ಕೈಗೇ ಇನ್ಮುಂದೆ ರ‍್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್; ಸಾರ್ವಜನಿಕರೇ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲಿಸಬಹುದು!

ಡಿ-ಲಿಂಕ್ ಹಾಗೂ ಲಿಂಕ್ ಮಾಡಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್ ಮಾಡಿ ಗೃಹ ಜ್ಯೋತಿಯೊಂದಿಗೆ ನೋಂದಾಯಿತ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ಒಟಿಪಿ ಆಧಾರದಲ್ಲಿ ಲಾಗಿನ್ ಆಗಬೇಕು. ನಂತರ ಹಳೆಯ ಮನೆಯ ಆರ್​ಆರ್​ ಸಂಖ್ಯೆಯನ್ನು ನಮೂದಿಸಿ ಡಿ-ಲಿಂಕ್ ಮಾಡಬೇಕು. ಬಳಿಕ ಹೊಸ ಮನೆಯ ಆರ್​ಆರ್​ ಸಂಖ್ಯೆಯನ್ನು ನಮೂದಿಸಿ ಲಿಂಕ್ ಮಾಡಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ತಮ್ಮನ ಮಗನ ಸಿನಿಮಾ ಜೊತೆಗೆ ರೆಡ್ಡಿ ಮಗನ ಸಿನಿಮಾಕ್ಕೂ ಶುಭ ಹಾರೈಸಿದ ಶಿವಣ್ಣ
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್