AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ಷಿಕ 6 ಸಾವಿರ ಸಿಗುವ ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ನೋಂದಣಿ ಹೇಗೆ? ಇಲ್ಲಿದೆ ವಿವರ

PM Kisan Samman Nidhi Scheme: ದೇಶದ 1.25 ಕೋಟಿ ರೈತ ಸಮುದಾಯವನ್ನು ತಲುಪುವ ಬೃಹತ್ ಯೋಜನೆ ಇದಾಗಿದ್ದು, ₹ 75,000 ಕೋಟಿ ಹಣವನ್ನು ಪಿಎಂ ಕಿಸಾನ್ ಯೋಜನೆಗೆ ಮೀಸಲಿಡಲಾಗಿದೆ.

ವಾರ್ಷಿಕ 6 ಸಾವಿರ ಸಿಗುವ ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ನೋಂದಣಿ ಹೇಗೆ? ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
Follow us
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 09, 2021 | 4:01 PM

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಅತ್ಯಂತ ಮಹತ್ವಾಕಾಂಕ್ಷೆಯಿಂದ ಜಾರಿಗೊಳಿಸಿತ್ತು. ಮೂರು ಕಂತುಗಳಲ್ಲಿ ತಲಾ ₹ 2000, ವಾರ್ಷಿಕ ₹ 6000 ಹಣವನ್ನು ರೈತರಿಗೆ ಒದಗಿಸುವ ಮೂಲಕ ಆರ್ಥಿಕ ಚೇತರಿಕೆಗೆ ಸಣ್ಣ ದಾರಿ ಮಾಡಿಕೊಡುವುದು ಈ ಯೋಜನೆಯ ಉದ್ದೇಶ. ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರು ಈ ಯೋಜನೆಯ ಸದುಪಯೋಗಪಡಿಸಿಕೊಳ್ಳಬಹುದಾಗಿದು. ಈ ಮೂಲಕ ವಾರ್ಷಿಕ ₹ 6000 ಮೊತ್ತವನ್ನು ಸರ್ಕಾರದಿಂದ ನೇರವಾಗಿ ಪಡೆಯಬಹುದಾಗಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಸಂಕ್ಷಿಪ್ತವಾಗಿ ಪಿಎಂ ಕಿಸಾನ್ ಯೋಜನೆ ಎಂದೂ ಕರೆಯುತ್ತಾರೆ. 2018ರ ಡಿಸೆಂಬರ್ 1ರಂದು ಪ್ರಧಾನಿ ನರೇಂದ್ರ ಮೋದಿಯವರು ರೈತರಿಗೆ ಸಹಕಾರಿ ಆಗಬಲ್ಲ ಈ ಯೋಜನೆಯನ್ನು ಜಾರಿಗೊಳಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಉಪಸ್ಥಿತರಿದ್ದರು. ದೇಶದ ರೈತ ಸಮುದಾಯದ 1.25 ಕೋಟಿ ರೈತರನ್ನು ತಲುಪುವ ಬೃಹತ್ ಯೋಜನೆ ಇದಾಗಿದ್ದು, ₹ 75,000 ಕೋಟಿ ಹಣವನ್ನು ಪಿಎಂ ಕಿಸಾನ್ ಯೋಜನೆಗೆ ಮೀಸಲಿಡಲಾಗಿದೆ.

ನೀವು ಫಲಾನುಭವಿ ಆಗಬಹುದೇ? ಸಣ್ಣ ಮತ್ತು ಮಧ್ಯಮ ಪ್ರಮಾಣದ ರೈತರು ಈ ಯೋಜನೆಯ ಸದುಪಯೋಗ ಪಡೆಯಬಹುದು. ಎರಡು ಹೆಕ್ಟೇರ್​ವರೆಗಿನ ಕೃಷಿ ಭೂಮಿ ಹೊಂದಿರುವ ಯಾವುದೇ ರೈತರು ಸಹ ಈ ಯೋಜನೆಯ ಫಲಾನುಭವಿಗಳಾಗಬಹುದು.

ಇನ್ನೂ ನೋಂದಣಿ ಮಾಡಿಸಿಲ್ಲವೇ? ನೀವು ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಉಪಯೋಗ ಪಡೆಯುವ ಅರ್ಹತೆ ಹೊಂದಿದ್ದರೂ ಇದುವರೆಗೂ ನೋಂದಣಿ ಆಗಿಲ್ಲವೇ? ಹಾಗಾದರೆ ತಡ ಮಾಡಬೇಡಿ, ತಕ್ಷಣವೇ ನೋಂದಣಿ ಆಗಿ. ಈ ತಿಂಗಳ ಕೊನೆ, ಅಂದರೆ ಮಾರ್ಚ್ 31ರ ಒಳಗೆ ನೋಂದಣಿ ಆದರೆ ₹ 4000 ವನ್ನು ಪಡೆಯಬಹುದು.

ಹೇಗೆ ನೋಂದಣಿ ಮಾಡಬಹುದು? ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅತ್ಯಂತ ಸುಲಭವಾಗಿ ನೋಂದಣಿ ಆಗಬಹುದು. ಹತ್ತಿರದ ಕಂಪ್ಯೂಟರ್/ಇಂಟರ್​ನೆಟ್ ಕೇಂದ್ರಕ್ಕೆ ತೆರಳಿ, ಇಲ್ಲವೇ ಹಲವು ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ಕೇಂದ್ರಗಳೂ ಸುತ್ತಮುತ್ತಲು ಇರುತ್ತವೆ. ಅಂತಹ ಕೇಂದ್ರಗಳ ಮೂಲಕವೂ ಈ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಬಹುದು. ಇಲ್ಲವೇ, PM Kisan ವೆಬ್​ಸೈಟ್​ಗೆ ತೆರಳ, ಫಾರ್ಮರ್ಸ್ ಕಾರ್ನರ್ ವಿಭಾಗದಲ್ಲಿ, ನ್ಯೂ ಫಾರ್ಮರ್ಸ್ ರಿಜಿಸ್ಟ್ರೇಶನ್ ಗೆ ಕ್ಲಿಕ್ ಮಾಡಿ. ಅಲ್ಲಿ ನಿಮ್ಮ ಅಧಾರ್ ನಂಬರ್ ನಮೂದಿಸಿ, ಕ್ಯಾಪ್ಚಾ ಕೋಡ್ ಬರೆಯಿರಿ. ನಂತರ ನಿಮ್ಮ ಖಾಸಗಿ ವಿವರಗಳನ್ನು ಅಲ್ಲಿ ಕೇಳಿದಂತೆ ತುಂಬಿ, ಬ್ಯಾಂಕ್ ಖಾತೆಯನ್ನೂ ನಮೂದಿಸಿ.

ಬೇಕಾಗುವ ಕಾಗದಪತ್ರಗಳು ಇಂತಿವೆ ಆಧಾರ ಕಾರ್ಡ್ ಭೂ ಒಡೆತನದ ದಾಖಲಾತಿ ಬ್ಯಾಂಕ್ ಖಾತೆಯ ವಿವರ

ಈ ವಿವರಗಳನ್ನು ನಮೂದಿಸಿ ಈ ಯೋಜನೆಗೆ ಅರ್ಹರಿದ್ದಲ್ಲಿ ನೀವೂ ಈ ಯೋಜನೆಯ ಉಪಯೋಗ ಪಡೆದುಕೊಳ್ಳಬಹುದು. ಈ ಮೂಲಕ ವಾರ್ಷಿಕ ₹6000ವನ್ನು ಸರ್ಕಾರದಿಂದ ಪಡೆಯಬಹುದಾಗಿದೆ.

ಇದನ್ನೂ ಓದಿ: Karnataka Budget 2021: ಕೃಷಿ ಮತ್ತು ಪೂರಕ ಚಟುವಟಿಕೆಗೆ ₹ 31,028 ಕೋಟಿ ಅನುದಾನ, ರೈತ ಸಮುದಾಯಕ್ಕೆ ಶಕ್ತಿ ತುಂಬಲು ಹಲವು ಯೋಜನೆ

ಕೃಷಿ ರಾಯಭಾರಿಯಾಗಿ ನಟ ದರ್ಶನ್‌ ಅಧಿಕಾರ ಸ್ವೀಕಾರ; ದರ್ಶನ್ ಒಬ್ಬ ಹೃದಯ ಶ್ರೀಮಂತಿಕೆಯ ವ್ಯಕ್ತಿ- ಬಿ.ಸಿ ಪಾಟೀಲ್​

ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಐಪಿಎಲ್ ಧಡೂತಿ ಲೀಗ್​ ಆಗಿ ಬದಲಾದ್ರೆ ಹೇಗಿರುತ್ತೆ? ಇಲ್ಲಿದೆ ವಿಡಿಯೋ
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್