AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HS Doreswamy Obituary: ಬಡತನವೇ ನನ್ನ ಆರೋಗ್ಯದ ಗುಟ್ಟು ಎಂದು ಹೇಳುತ್ತಿದ್ದರು ಎಚ್.ಎಸ್. ದೊರೆಸ್ವಾಮಿ

2ನೇ ಬಾರಿಗೆ ಆಸ್ಪತ್ರೆಗೆ ಬಂದಾಗ ನನಗ್ಯಾಕೆ ಚಿಕಿತ್ಸೆ ನೀಡ್ತೀರಿ. ನನಗೆ 104 ವರ್ಷವಾಗಿದೆ, ನನಗೆ ಬೆಡ್​ ನೀಡುವುದು ಬೇಡ. ನನ್ನನ್ನು ಮನೆಗೆ ಕಳುಹಿಸಿಬಿಡಿ ಎಂದು ಮನವಿ ಮಾಡಿದ್ದರು ಎಂದು ದೊರೆಸ್ವಾಮಿ ಅವರ ಮಾತುಗಳನ್ನು ಡಾ. ಮಂಜುನಾಥ್ ಸ್ಮರಿಸಿಕೊಂಡಿದ್ದಾರೆ.

HS Doreswamy Obituary: ಬಡತನವೇ ನನ್ನ ಆರೋಗ್ಯದ ಗುಟ್ಟು ಎಂದು ಹೇಳುತ್ತಿದ್ದರು ಎಚ್.ಎಸ್. ದೊರೆಸ್ವಾಮಿ
ಎಚ್​.ಎಸ್.ದೊರೆಸ್ವಾಮಿ - ಹಾರೊಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ
Follow us
TV9 Web
| Updated By: ganapathi bhat

Updated on:Aug 23, 2021 | 12:27 PM

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ನಿಧನ ಹೊಂದಿದ್ದಾರೆ. ಇಂದು (ಮೇ 26) ಮಧ್ಯಾಹ್ನ 1.30ರ ಸುಮಾರಿಗೆ ದೊರೆಸ್ವಾಮಿ ನಿಧನರಾಗಿದ್ದಾರೆ. ತಮ್ಮ ಇಳಿ ವಯಸ್ಸಿನಲ್ಲಿಯೂ ಸಮಾಜದ ಆಗುಹೋಗುಗಳಿಗೆ ಸ್ಪಂದಿಸುತ್ತಿದ್ದ ಹಿರಿಜೀವದ ಬಗ್ಗೆ ವಿವಿಧ ವಲಯದ ನೂರಾರು ಗಣ್ಯರು ಸಂತಾಪ ಸೂಚಿಸಿ, ತಮ್ಮ ಮಾತುಗಳನ್ನು ತಿಳಿಸಿದ್ದಾರೆ. ಕೆಲವು ಗಣ್ಯರು ದೊರೆಸ್ವಾಮಿ ಬಗ್ಗೆ ಟಿವಿ9 ಜೊತೆಗೆ ಹಂಚಿಕೊಂಡ ಮಾತುಗಳನ್ನು ಇಲ್ಲಿ ನೀಡಲಾಗಿದೆ.

ಎಚ್.ಎಸ್. ದೊರೆಸ್ವಾಮಿ ಬಗ್ಗೆ ಹೃದ್ರೋಗ ತಜ್ಞ, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಮಾತನಾಡಿದ್ದಾರೆ. ದೊರೆಸ್ವಾಮಿ ಕೊರೊನಾಗೆ ಜಯದೇವ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದಿದ್ದರು. ಆಸ್ಪತ್ರೆಯಿಂದ ಮನೆಗೆ ತೆರಳಿದ ಬಳಿಕ ಸುಸ್ತಾಗುತ್ತಿದೆ ಎನ್ನುತ್ತಿದ್ದರು. ಆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದರು. 2ನೇ ಬಾರಿಗೆ ಆಸ್ಪತ್ರೆಗೆ ಬಂದಾಗ ನನಗ್ಯಾಕೆ ಚಿಕಿತ್ಸೆ ನೀಡ್ತೀರಿ. ನನಗೆ 104 ವರ್ಷವಾಗಿದೆ, ನನಗೆ ಬೆಡ್​ ನೀಡುವುದು ಬೇಡ. ನನ್ನನ್ನು ಮನೆಗೆ ಕಳುಹಿಸಿಬಿಡಿ ಎಂದು ಮನವಿ ಮಾಡಿದ್ದರು ಎಂದು ದೊರೆಸ್ವಾಮಿ ಅವರ ಮಾತುಗಳನ್ನು ಡಾ. ಮಂಜುನಾಥ್ ಸ್ಮರಿಸಿಕೊಂಡಿದ್ದಾರೆ.

ನನ್ನ ಬದಲು ಬೇರೆ ಯಾರಿಗಾದ್ರೂ ಚಿಕಿತ್ಸೆ ನೀಡಿ ಎಂದು ದೊರೆಸ್ವಾಮಿಯವರು ಹೇಳುತ್ತಿದ್ದರು. ಹಾಗೆ ಹೇಳಬೇಡಿ, ನೀವು ಎಲ್ಲೇ ಹೋದರೂ ನಿಮಗಾಗಿ ಒಂದು ಹಾಸಿಗೆ ಮೀಸಲಿರುತ್ತದೆ ಎಂದು ಹೇಳಿದ್ದೆ. ಎಚ್.ಎಸ್.ದೊರೆಸ್ವಾಮಿ ಒಬ್ಬ ಒಳ್ಳೆಯ ರೋಗಿಯೂ ಆಗಿದ್ದರು. ವೈದ್ಯರ ಸಲಹೆ ಸೂಚನೆಯನ್ನು ಚಾಚೂತಪ್ಪದೆ ಪಾಲಿಸುತ್ತಿದ್ದರು ಎಂದು ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ದೊರೆಸ್ವಾಮಿ ಬಗ್ಗೆ ವಾಟಾಳ್ ನಾಗರಾಜ್ ಎಚ್.ಎಸ್.ದೊರೆಸ್ವಾಮಿ ಓರ್ವ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂದು ವಾಟಾಳ್ ನಾಗರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ದೊರೆಸ್ವಾಮಿ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ನಮ್ಮ ದೇಶದ, ರಾಜ್ಯದ ಸ್ವತ್ತಾಗಿದ್ದರು. ಅವರು ಅನ್ಯಾಯ ಕಂಡರೆ ಪ್ರತಿಭಟನೆ ಮಾಡುತ್ತಿದ್ದರು. ಅವರ ಜತೆ ನಾನು ಅನೇಕ ಹೋರಾಟದಲ್ಲಿ ಭಾಗಿಯಾಗಿದ್ದೆ. ಕರ್ನಾಟಕದಲ್ಲಿ ಮತ್ತೊಮ್ಮೆ ದೊರೆಸ್ವಾಮಿ ಸಿಗಲು ಸಾಧ್ಯವಿಲ್ಲ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

ದೊರೆಸ್ವಾಮಿಯವರು ಅತ್ಯಂತ ಗಂಭೀರವಾದ ವ್ಯಕ್ತಿ. ಅವರನ್ನು ಯಾರು ಎಲ್ಲಿಗೆ ಬೇಕಾದರೂ ಕರೆದೊಯ್ಯಬಹುದಿತ್ತು. ಚುನಾವಣಾ ವ್ಯವಸ್ಥೆ ಬಗ್ಗೆ ದೊರೆಸ್ವಾಮಿ ಬೇಸರ ವ್ಯಕ್ತಪಡಿಸಿದ್ದರು. ಸುಮಾರು 10 ವರ್ಷಗಳ ಕಾಲ ನನ್ನ ಜತೆ ಒಡನಾಟದಲ್ಲಿದ್ದರು ಎಂದು ಹೋರಾಟಗಾರ ವಾಟಾಳ್ ನಾಗರಾಜ್ ಮಾತನಾಡಿದ್ದಾರೆ.

ಬಡತನವೇ ನನ್ನ ಆರೋಗ್ಯದ ಗುಟ್ಟು ದೊರೆಸ್ವಾಮಿಯವರು ಗಾಂಧಿವಾದಿಯಾಗಿದ್ದರು. ಅದು ಯಾರೇ ಆಗಿದ್ದರು ನೇರ, ನಿಷ್ಠುರವಾಗಿ ಮಾತನಾಡುತ್ತಿದ್ದರು ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಭೂಕಬಳಿಕೆ ವಿರುದ್ಧ 9 ದಿನಗಳ ಕಾಲ ಹೋರಾಟ ನಡೆಸಿದ್ದರು. ಎಲ್ಲೇ ಅನ್ಯಾಯ ನಡೆದರೂ ಮುಂದೆ ನಿಂತು ಹೋರಾಡುತ್ತಿದ್ರು. ಸಾರ್ವಜನಿಕರ ಸೇನಾನಿಯಾಗಿ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಿದ್ದರು. ಬಡತನವೇ ನನ್ನ ಆರೋಗ್ಯದ ಗುಟ್ಟು ಎಂದು ಹೇಳುತ್ತಿದ್ದರು. ಎಚ್.ಎಸ್.ದೊರೆಸ್ವಾಮಿ ಅಗಲಿಕೆ ನನಗೆ ಅತೀವ ದುಃಖ ತರಿಸಿದೆ ಎಂದು ಎ.ಟಿ.ರಾಮಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: HS Doreswamy Obituary : 104ರ ವಯಸ್ಸಿನಲ್ಲಿಯೂ ದೊರೆಸ್ವಾಮಿಯವರಿಗಿದ್ದ ನೈತಿಕ ಸಿಟ್ಟು ನಮ್ಮ ದೇಶದ ಜನತೆಗೆ ಸ್ವಲ್ಪವಾದರೂ ಬರಲಿ

ಎಚ್.ಎಸ್.ದೊರೆಸ್ವಾಮಿ ನಿಧನ: ಕೊವಿಡ್ ನಿಯಮಾನುಸಾರ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Published On - 5:26 pm, Wed, 26 May 21

VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ