AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಬರ್ ​ಪ್ಲೇಟ್ ವ್ಯವಹಾರಕ್ಕೆ ಹೊಡೆತ ನೀಡಿದ ಎಚ್‌ಎಸ್‌ಆರ್‌ಪಿ ಅಳವಡಿಕೆ ಅಧಿಸೂಚನೆ

ಏಪ್ರಿಲ್ 1, 2019 ರ ಮೊದಲು ಖರೀದಿಸಿದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವುದನ್ನು ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆಯ ಅಧಿಸೂಚನೆಯು ರಾಜ್ಯದ ಸಾಂಪ್ರದಾಯಿಕ ವಾಹನಗಳ ನಂಬರ್ ಪ್ಲೇಟ್ ತಯಾರಕರು ಮತ್ತು ಮಾರಾಟಗಾರರಿಗೆ ಸರಿಯಾಗಿ ಹೋಗಿಲ್ಲ. ಅಷ್ಟೇ ಅಲ್ಲದೆ, ಈ ಅಧಿಸೂಚನೆಯು 25,000 ಕ್ಕೂ ಹೆಚ್ಚು ತಯಾರಕರು ಮತ್ತು ಮಾರಾಟಗಾರರ ವ್ಯವಹಾರಕ್ಕೆ ಹೊಡೆತ ನೀಡಿದೆ.

ನಂಬರ್ ​ಪ್ಲೇಟ್ ವ್ಯವಹಾರಕ್ಕೆ ಹೊಡೆತ ನೀಡಿದ ಎಚ್‌ಎಸ್‌ಆರ್‌ಪಿ ಅಳವಡಿಕೆ ಅಧಿಸೂಚನೆ
ನಂಬರ್ ​ಪ್ಲೇಟ್ ವ್ಯವಹಾರಕ್ಕೆ ಹೊಡೆತ ನೀಡಿದ ಎಚ್‌ಎಸ್‌ಆರ್‌ಪಿ ಅಳವಡಿಕೆ ಅಧಿಸೂಚನೆ
Rakesh Nayak Manchi
|

Updated on: Sep 14, 2023 | 8:06 AM

Share

ಬೆಂಗಳೂರು, ಸೆ.14: ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (HSRP) ಅಳವಡಿಸುವುದನ್ನು ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆಯ ಅಧಿಸೂಚನೆಯು 25,000 ಕ್ಕೂ ಹೆಚ್ಚು ತಯಾರಕರು ಮತ್ತು ಮಾರಾಟಗಾರರ ವ್ಯವಹಾರಕ್ಕೆ ಹೊಡೆತ ನೀಡಿದೆ ಎಂದು ಅಖಿಲ ಕರ್ನಾಟಕ ವಾಹನ ನಂಬರ್ ಪ್ಲೇಟ್ ತಯಾರಕರು ಮತ್ತು ಮಾರಾಟಗಾರರ ಸಂಘ ಆರೋಪಿಸಿದೆ.

ಏಪ್ರಿಲ್ 1, 2019 ರ ಮೊದಲು ಖರೀದಿಸಿದ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವುದನ್ನು ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆಯ ಅಧಿಸೂಚನೆಯು ರಾಜ್ಯದ ಸಾಂಪ್ರದಾಯಿಕ ವಾಹನಗಳ ನಂಬರ್ ಪ್ಲೇಟ್ ತಯಾರಕರು ಮತ್ತು ಮಾರಾಟಗಾರರಿಗೆ ಸರಿಯಾಗಿ ಹೋಗಿಲ್ಲ. ಇಲಾಖೆಯು 1,200 ಕೋಟಿ ಮೌಲ್ಯದ ವ್ಯವಹಾರವನ್ನು ರಾಜ್ಯದ ಹೊರಗಿರುವ ಆಯ್ದ ಕೆಲವು HSRP ತಯಾರಕರಿಗೆ ಹಸ್ತಾಂತರಿಸಿದೆ ಎಂದು ಸಂಘ ಆರೋಪಿಸಿದೆ.

ಎಚ್‌ಎಸ್‌ಆರ್‌ಪಿ ಉತ್ಪಾದನಾ ವೆಚ್ಚ ಮತ್ತು ಮಾರಾಟ ಬೆಲೆ ನಡುವೆ ಭಾರೀ ವ್ಯತ್ಯಾಸವಿದ್ದು, ಬಹುತೇಕ ವಾಹನ ಮಾಲೀಕರ ಹಿತಾಸಕ್ತಿ ಕಾಪಾಡುವಲ್ಲಿ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದೆ.

ಆದಾಗ್ಯೂ, ಸಂಘದ ಆರೋಪವನ್ನು ತಳ್ಳಿಹಾಕಿದ ಸಾರಿಗೆ ಇಲಾಖೆಯು, ಎಚ್‌ಎಸ್‌ಆರ್‌ಪಿ ಭದ್ರತೆಯ ಅವಶ್ಯಕತೆಯಾಗಿದೆ ಎಂದು ಹೇಳಿದೆ. ತಯಾರಕರ ಆಯ್ಕೆಯಲ್ಲಿ ಅಥವಾ ಶುಲ್ಕವನ್ನು ನಿಗದಿಪಡಿಸುವಲ್ಲಿ ಯಾವುದೇ ಪಾತ್ರವನ್ನು ಹೊಂದಿಲ್ಲ ಮತ್ತು ಇದು ಕೇಂದ್ರದ ಮಾರ್ಗಸೂಚಿಗಳ ಪ್ರಕಾರ ಮಾತ್ರ ನಡೆಯುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ತಮಿಳುನಾಡು ಸಾರಿಗೆ ಬಸ್​ಗಳ ಮೇಲೆ ಕಲ್ಲು ತೂರಾಟ; ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಅಖಿಲ ಕರ್ನಾಟಕ ವಾಹನ ನಂಬರ್ ಪ್ಲೇಟ್ ತಯಾರಕರ ಮತ್ತು ಮಾರಾಟಗಾರರ ಸಂಘದ ಅಧ್ಯಕ್ಷ ಎಸ್.ಸತೀಶ್ ಮಾತನಾಡಿ, ”ರಾಜ್ಯದ ಸಾವಿರಾರು ತಯಾರಕರು ಮತ್ತು ಮಾರಾಟಗಾರರಿಗೆ ಅಧಿಸೂಚನೆಯಿಂದ ತೊಂದರೆಯಾಗಿದೆ. ಸದ್ಯ ನಮಗೆ ಯಾವುದೇ ವ್ಯವಹಾರವಿಲ್ಲ. ಕೆಲವು ಎಚ್‌ಎಸ್‌ಆರ್‌ಪಿ ತಯಾರಕರಿಗೆ ಅನುಕೂಲವಾಗುವಂತೆ ಇಲಾಖೆಯು ತರಾತುರಿಯಲ್ಲಿ ಅಧಿಸೂಚನೆಯನ್ನು ಹೊರಡಿಸಿದೆ ಎಂದಿದ್ದಾರೆ.

ಮೂಲ ಉಪಕರಣ ತಯಾರಕರು ಅಥವಾ ವಾಹನ ವಿತರಕರು ವಾಹನ ತಯಾರಕರಿಂದ ಅಧಿಕೃತಗೊಂಡವರಿಂದ ಮಾತ್ರ ಎಚ್‌ಎಸ್‌ಆರ್‌ಪಿಯನ್ನು ಪಡೆಯುತ್ತಾರೆ ಎಂದು ಅಧಿಸೂಚನೆ ತಿಳಿಸುತ್ತದೆ ಎಂದು ಅವರು ಹೇಳಿದರು.

ಇದು ಕೇಂದ್ರ ಮೋಟಾರು ವಾಹನ ಕಾಯ್ದೆ ಮತ್ತು ನಿಯಮಗಳಿಗೆ ವಿರುದ್ಧವಾಗಿದೆ. ಅವರು ನಮಗೆ ಎಚ್‌ಎಸ್‌ಆರ್‌ಪಿ ತಯಾರಕರೊಂದಿಗೆ ಒಪ್ಪಂದ ಮಾಡಿಕೊಳ್ಳಲು ಅವಕಾಶ ನೀಡಬೇಕು. ಇದರಿಂದ ನಾವು ಗ್ರಾಹಕರಿಗೆ ಹೊಸ ನಂಬರ್ ಪ್ಲೇಟ್‌ಗಳನ್ನು ಒದಗಿಸಬಹುದು. ಮಾರುಕಟ್ಟೆಯಲ್ಲಿ ಹೆಚ್ಚಿನ HSRP ತಯಾರಕರನ್ನು ಅನುಮತಿಸುವುದರಿಂದ ಸ್ಪರ್ಧಾತ್ಮಕ ಬೆಲೆ ಮತ್ತು ಗ್ರಾಹಕರಿಗೆ ಲಾಭವಾಗುತ್ತದೆ ಎಂದರು.

ಸಾಂಪ್ರದಾಯಿಕ ನಂಬರ್ ಪ್ಲೇಟ್ ತಯಾರಕರ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಲು ಅವಕಾಶ ನೀಡುವುದರಿಂದ ಇತರ ಜಿಲ್ಲೆಗಳು ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಸಹಾಯವಾಗುತ್ತದೆ ಎಂದು ಅವರು ಹೇಳಿದರು.

ಪ್ರಸ್ತುತ, ಕೆಲವು ಎಚ್‌ಎಸ್‌ಆರ್‌ಪಿ ತಯಾರಕರು ನಗರ ಪ್ರದೇಶಗಳಲ್ಲಿ ವ್ಯವಹಾರ ಮಾಡುತ್ತಿದ್ದಾರೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ವಾಹನ ಮಾಲೀಕರು ಹೊಸ ಎಚ್‌ಎಸ್‌ಆರ್‌ಪಿ ಖರೀದಿಸಲು ಸಾಧ್ಯವಾಗುತ್ತಿಲ್ಲ. ಹೊಸ ನಂಬರ್ ಪ್ಲೇಟ್‌ಗಳನ್ನು ಅಳವಡಿಸಲು ನಗರ ಪ್ರದೇಶಗಳಲ್ಲಿ ವಾಹನ ವಿತರಕರನ್ನು ಸಂಪರ್ಕಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ