AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಮಾಲೀಕರು ಗಮನಕ್ಕೆ: ಇನ್ನೂ ನೀವು ನಿಮ್ಮ ವಾಹನಕ್ಕೆ HSRP ನಂಬರ್​ ಪ್ಲೇಟ್ ಹಾಕಿಸಿಲ್ಲವೇ..?​

HSRP Number Plate: ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು (HSRP) ಕೊನೆ ದಿನಾಂಕವನ್ನು ರಾಜ್ಯ ಸರ್ಕಾರ ವಿಸ್ತರಿಸುತ್ತಾ ಬಂದಿದೆ. ಇದೀಗ ಹಳೆಯ ನಂಬರ್‌ ಪ್ಲೇಟ್‌ಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ ಅಳವಡಿಸಲು ಗಡುವು ಸಮೀಪಿಸುತ್ತಿದೆ. ಆದ್ರೆ, ಈ ಬಾರಿ ಮತ್ತೆ ಅವಧಿ ವಿಸ್ತರಣೆ ಮಾಡುತ್ತಾರೆ ಎಂದು ಭಾವಿಸಿ HSRP ನಂಬರ್ ಪ್ಲೇಟ್ ಹಾಕಿಸಿಲ್ಲ ಅಂದರೆ ಮೊದಲಿಗೆ ದಂಡಂ ದಶಗುಣಂ. ಕೊನೆಗೆ ವಾಹನ ಸೀಜ್ ಆಗುವುದು ಗ್ಯಾರಂಟಿ.

ವಾಹನ ಮಾಲೀಕರು ಗಮನಕ್ಕೆ: ಇನ್ನೂ ನೀವು ನಿಮ್ಮ ವಾಹನಕ್ಕೆ HSRP ನಂಬರ್​ ಪ್ಲೇಟ್ ಹಾಕಿಸಿಲ್ಲವೇ..?​
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on: Sep 04, 2024 | 8:56 PM

Share

ಬೆಂಗಳೂರು, (ಸೆಪ್ಟೆಂಬರ್ 04): ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಎರಡ್ಮೂರು ಬಾರಿ ಗಡುವು ವಿಸ್ತರಣೆ ಮಾಡಿದೆ. ಆದ್ರೆ, ಇನ್ನೂ ಕೂಡ ವಾಹನ ಮಾಲೀಕರು ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಲು ಮುಂದಾಗಿಲ್ಲ. ಹೆಚ್ಎಸ್ಆರ್​ಪಿ ನಂಬರ್ ಹಾಕಿಸಿಕೊಳ್ಳಬೇಕು ಈ ತಿಂಗಳ ಸೆಪ್ಟೆಂಬರ್ 15 ಕೊನೆ ದಿನವಾಗಿದೆ. ಇನ್ನೇನು 11 ದಿನಗಳು ಮಾತ್ರ ಬಾಕಿ ಉಳಿದಿವೆ. ಒಂದು ವೇಳೆ ಹಾಕಿಸಿಕೊಳ್ಳಲಿಲ್ಲ ಅಂದರೆ ಮೊದಲ ಬಾರಿಗೆ 500 ರುಪಾಯಿ ಎರಡನೇ ಬಾರಿಗೆ ಒಂದು ಸಾವಿರ ರುಪಾಯಿ ದಂಡ ಹಾಕಲಾಗುತ್ತದೆ. ಕೊನೆ ಲಾಸ್ಟ್​ ಮೂರನೇ ಬಾರಿ ವಾಹನವನ್ನೇ ಸೀಜ್ ಮಾಡಲಾಗುತ್ತದೆ.

ಕರ್ನಾಟಕದ ಎರಡು ಕೋಟಿ ವಾಹನಗಳ ಪೈಕಿ ಇಂದಿನವರೆಗೆ ಕೇವಲ 51.5 ಲಕ್ಷ ವಾಹನ ಮಾಲೀಕರು ಮಾತ್ರ ಹೆಚ್ಎಸ್ಆರ್​ಪಿ ಅಳವಡಿಸಿಕೊಂಡಿದ್ದಾರೆ. ರಾಜ್ಯ ಸಾರಿಗೆ ಇಲಾಖೆ ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು ಹೆಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ. ಈ ತಿಂಗಳ ಸೆಪ್ಟೆಂಬರ್ 15 ನೇ ತಾರೀಖಿನೊಳಗೆ ಹೆಚ್ಎಸ್ಆರ್ಪಿ ನಂಬರ್ ಗಳನ್ನು ಹಾಕಿಸಿಕೊಳ್ಳಬೇಕು ಒಂದು ವೇಳೆ ಹಾಕಿಸಿಕೊಳ್ಳಲಿಲ್ಲ ಅಂದರೆ ದಂಡ ಕಟ್ಟಿಟ್ಟ ಬುತ್ತಿ.

ಇದನ್ನೂ ಓದಿ: ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್​ನ್ಯೂಸ್

1 ಏಪ್ರಿಲ್‌ 2019 ಕ್ಕಿಂತ ಮುನ್ನ ನೋಂದಣಿಯಾದ ವಾಹನಗಳಿಗೆ 90 ದಿನಗಳಲ್ಲಿ ಎಚ್‌ಎಸ್‌ಆರ್‌ಪಿ ಫಲಕ ಅಳವಡಿಸಬೇಕು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಕಳೆದ ವರ್ಷ ನವೆಂಬರ್‌ 17 ವರೆಗೂ ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಈ ನಡುವೆ ಕೋರ್ಟ್‌ನಲ್ಲಿ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನಂಬರ್‌ ಪ್ಲೇಟ್‌ ವಿಸ್ತರಣೆ ಗಡುವು ವಿಸ್ತರಿಸುವಂತೆ ರಾಜ್ಯಕ್ಕೆ ಸೂಚನೆ ನೀಡಿತ್ತು. ಹೈ ಕೋರ್ಟ್‌ ಸೂಚನೆ ಮೇರೆಗೆ ಸಾರಿಗೆ ಇಲಾಖೆ 90 ದಿನಗಳಿಗೆ ಅಂದರೆ ಫೆ. 17ವರೆಗೂ ಅವಧಿ ವಿಸ್ತರಣೆ ಮಾಡಿತ್ತು. ಇದಲ್ಲದೇ ಮತ್ತೆ ಕೋರ್ಟ್​​ ಸೂಚನೆ ಮೇರೆಗೆ ಸೆಪ್ಟೆಂಬರ್ 15ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಏನಿದು ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್‌ ಪ್ಲೇಟ್?

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್